Homeಫ್ಯಾಕ್ಟ್‌ಚೆಕ್Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಹಾಲನ್ನು ಹಲಾಲ್ ಮಾಡಲು ಅವರು ಏನು ಮಾಡುತ್ತಾರೆ? ಹಾಲಿನಲ್ಲಿ ಸ್ನಾನ ಮಾಡಿ ಹಿಂದೂಗಳಿಗೆ ಹಂಚುತ್ತಾರೆ” ಎಂಬ ಬರಹದೊಂದಿಗೆ ವ್ಯಕ್ತಿಯೊಬ್ಬರು ಹಾಲಿನಲ್ಲಿ ಸ್ನಾನ ಮಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

Tathvam-asi(@ssaratht) ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಕೇರಳದ ಮುಸ್ಲಿಂ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು ಅದರಲ್ಲಿ ಸ್ನಾನ ಮಾಡಿದ್ದಾರೆ” ಎಂದು ಹೇಳಲಾಗಿದೆ.

ಪೋಸ್ಟ್ ಲಿಂಕ್ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ವೈರಲ್ ವಿಡಿಯೋವನ್ನು ಗೂಗಲ್‌ನಲ್ಲಿ ಹುಡುಕಾಡಿದಾಗ ನವೆಂಬರ್ 9,2020ರಂದು ಎನ್‌ಡಿ ಟಿವಿ ವಿಡಿಯೋ ಕುರಿತು ಪ್ರಕಟಿಸಿದ ಸುದ್ದಿಯೊಂದು ದೊರೆತಿದೆ. ಸುದ್ದಿಯಲ್ಲಿ “ಕೆಲಸಗಾರನೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡುತ್ತಿರುವ ದೃಶ್ಯಗಳು ಆನ್‌ಲೈನ್‌ನಲ್ಲಿ ವೈರಲ್ ಆದ ಬಳಿಕ ಟರ್ಕಿ(ತುರ್ಕಿ) ಯಲ್ಲಿ ಡೈರಿ ಪ್ಲಾಂಟ್ ಅನ್ನು ಮುಚ್ಚಲಾಗಿದೆ ಎಂದು ತಿಳಿಸಲಾಗಿದೆ.

ಟಿಕ್‌ಟಾಕ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ “ಒಬ್ಬ ವ್ಯಕ್ತಿ ಹಾಲು ತುಂಬಿದ ದೊಡ್ಡ ಕಡಾಯಿಯಲ್ಲಿ ಕುಳಿತು, ಮಗ್‌ನಲ್ಲಿ ಹಾಲನ್ನು ತನ್ನ ತಲೆಯ ಮೇಲೆ ಸುರಿಯುತ್ತಿರುವುದು ಕಾಣಬಹುದು ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘hurriyetdailynews.com’ಎಂಬ ವೆಬ್‌ಸೈಟ್‌ ನವೆಂಬರ್ 6, 2020ರಂದು ಪ್ರಕಟಿಸಿದ ಸುದ್ದಿಯಲ್ಲಿ “ಸೆಂಟ್ರಲ್ ಅನಾಟೋಲಿಯನ್ ಪ್ರಾಂತ್ಯದ ಕೊನ್ಯಾದಲ್ಲಿ ಡೈರಿ ಪ್ಲಾಂಟ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಕಡಾಯಿಯಲ್ಲಿ ಮಾರಾಟಕ್ಕೆ ಸಿದ್ಧಪಡಿಸಿದ ಹಾಲಿನಲ್ಲಿ ಸ್ನಾನ ಮಾಡುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಟರ್ಕಿಯ ಸುದ್ದಿ ವೆಬ್‌ಸೈಟ್‌ trthaber.com ಜೂನ್ 10,2022 ರ ಪ್ರಕಟಿಸಿದ ಸುದ್ದಿಯಲ್ಲೂ “ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ, ಅಲ್ಲಿನ ಉದ್ಯೋಗಿ ಎಮ್ರೆ ಸಯಾರ್ ಎಂಬಾತ ಹಾಲಿನ ಕಡಾಯಿಯಲ್ಲಿ ಸ್ನಾನ ಮಾಡಿದ್ದಾರೆ. ಅದನ್ನು ಆತನ ಸಹೊದ್ಯೋಗಿ ಉಗುರ್ ತುರ್ಗುಟ್ ವಿಡಿಯೋ ಮಾಡಿ ಟಿಕ್‌ ಟಾಕ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ಇಬ್ಬರನ್ನೂ ಬಂಧಿಸಲಾಗಿದೆ” ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದಂತೆ ಕೇರಳದ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು, ಅದರಲ್ಲಿ ಸ್ನಾನ ಮಾಡಿದ್ದಾರೆ. ಹಿಂದೂಗಳಿಗೆ ಹಂಚುವ ಹಾಲಿನಲ್ಲಿ ಮುಸ್ಲಿಂ ವ್ಯಕ್ತಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು ಎಂದು ತಿಳಿದು ಬಂದಿದೆ.

ವೈರಲ್ ವಿಡಿಯೋ ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ ವ್ಯಕ್ತಿಯೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡಿ, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದು ಎಂದು ಖಚಿತವಾಗಿದೆ. 

ಇದನ್ನೂ ಓದಿ : Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...