Homeಕರ್ನಾಟಕಕುತೂಹಲ ಮೂಡಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್-ಸಿಎಂ ಸಿದ್ದರಾಮಯ್ಯ ಭೇಟಿ

ಕುತೂಹಲ ಮೂಡಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್-ಸಿಎಂ ಸಿದ್ದರಾಮಯ್ಯ ಭೇಟಿ

- Advertisement -
- Advertisement -

ಸಿದ್ದರಾಮಯ್ಯ ಮೇಲಿನ ಮುನಿಸಿನ ಕಾರಣಕ್ಕೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ರಾಜಕಾರಣಿ, ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಮೈಸೂರಿನ ಜಯಲಕ್ಷ್ಮಿಪುರಂ ನಿವಾಸಕ್ಕೆ ಖುದ್ದು ಮುಖ್ಯಮಂತ್ರಿಗಳೆ ಇಂದು ಭೇಟಿ ಕೊಟ್ಟಿರುವುದು ಕುತೂಹಲ ಮೂಡಿಸಿದೆ.

ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಲೇಬೇಕು ಎಂದು ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್‌ ಜತೆಗಿನ ಹಲವು ವರ್ಷಗಳ ಮನಸ್ಥಾಪ ಮರೆತು, ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ‘ಕೈ’ ಅಭ್ಯರ್ಥಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಮುನಿಸು ಶಮನ:

ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಮುಖ್ಯಮಂತ್ರಿ ಆಗಿದ್ದಾಗ ಶ್ರೀನಿವಾಸ್ ಪ್ರಸಾದ್ ಕಂದಾಯ ಸಚಿವರಾಗಿದ್ದರು. ನಂತರ, ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಲೋಕಸಭಾ ಚುನಾವಣೆ ಹೊತ್ತಲ್ಲಿ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿರುವಂತೆ ಕಾಣುತ್ತಿದ್ದು, ಹಲವು ವರ್ಷಗಳಿಂದ ಇದ್ದ ಮುನಿಸನ್ನು ಮರೆತು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್ ಅವರನ್ನು ಭೇಟಿಯಾಗುವ ಮೂಲಕ ಇಬ್ಬರು ನಾಯಕರು ಮುನಿಸು ಅಂತ್ಯಗೊಳಿಸಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ನಾಳೆ ಮೈಸೂರಿಗೆ ಆಗಮಿಸಲಿದ್ದು, ಈ ಹೊತ್ತಿನಲ್ಲೇ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಕಳೆದ ಆರೇಳು ವರ್ಷಗಳಿಂದ ಈ ಇಬ್ಬರು ನಾಯಕರು ಪರಸ್ಪರ ಮುಖಾಮುಖಿಯಾಗಿರಲಿಲ್ಲ. ಸಿದ್ದರಾಮಯ್ಯ ಕುರಿತು ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ಕಟುವಾದ ಮಾತುಗಳಿಂದ ಟೀಕಿಸುತ್ತಿದ್ದರು. ಇದೀಗ ಚುನಾವಣೆ ಹೊಸ್ತಿಲಲ್ಲಿ ಪ್ರಸಾದ್ ಮನೆಗೆ ಸಿದ್ದರಾಮಯ್ಯ ನೀಡಿರುವುದು ಕಮಲ ನಾಯಕರಿಗೆ ಶಾಕ್ ನೀಡಿದೆ.

ಇಬ್ಬರೂ ನಾಯಕರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದು, ಈ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌. ಲಕ್ಷ್ಮಣ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸುನೀಲ್ ಬೋಸ್ ಅವರನ್ನು ಬೆಂಬಲಿಸುವಂತೆ ಕೋರಿದರು ಎಂದು ತಿಳಿದುಬಂದಿದೆ.

ಪ್ರಸಾದ್ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ನಾನು ಹಾಗೂ ಪ್ರಸಾದ್ ದೀರ್ಘಕಾಲದಿಂದ ಸ್ನೇಹಿತರು; ಜೊತೆಯಲ್ಲೇ ರಾಜಕಾರಣ ಮಾಡಿದವರು. ರಾಜಕೀಯವಾಗಿ ನಾನು ಕಾಂಗ್ರೆಸ್‌ನಲ್ಲಿದ್ದೆ, ಅವರು ಬಿಜೆಪಿಗೆ ಹೋಗಿದ್ದರು. ಈಗ ಅವರು ರಾಜಕೀಯದಿಂದ ನಿವೃತ್ತರಾಗಿದ್ದು, ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲು ಬಂದಿದ್ದೆ” ಎಂರು.

“ನಾನು ಯಾವ ಪಕ್ಷಕ್ಕೂ ಬೆಂಬಲ ಕೊಡುವುದಿಲ್ಲ” ಎಂದು ಪ್ರಸಾದ್ ಹೇಳಿದ್ದಾರೆ.‌ ಆದ್ದರಿಂದ, ಅವರಿಂದ ರಾಜಕೀಯವಾಗಿ ಬೆಂಬಲ ಕೋರುವುದರಲ್ಲಿ ಅರ್ಥವಿಲ್ಲ. ರಾಜಕೀಯವಾಗಿ ಏನನ್ನೂ ಚರ್ಚೆ ಮಾಡಿಲ್ಲ. ಆದರೆ, ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಅನುಕಂಪವಿರಲಿ ಎಂದು ಕೇಳಿಕೊಂಡಿದ್ದೇನೆ” ಎಂದು ತಿಳಿಸಿದರು.

ಮೋದಿ ಸಮಾವೇಶಕ್ಕೆ ಆಹ್ವಾನ ಬಂದಿಲ್ಲ: ಪ್ರಸಾದ್

ಸಿಎಂ ಜತೆಗಿನ ಮಾತುಕತೆ ಬಳಿಕ ಮಾಧ್ಯಮ ಪ್ರತಿನಿಧಿಗಳ‌ ಜೊತೆ ಮಾತನಾಡಿದ ಶ್ರೀನಿವಾಸ ಪ್ರಸಾದ್, “ನಾಳೆ ಮೈಸೂರಿನಲ್ಲಿ ನಡೆಯಲಿರುವ ಮೋದಿ ಸಮಾವೇಶಕ್ಕೆ ಆಗಮಿಸುವಂತೆ ನನಗೆ ಆಹ್ವಾ ನ ಬಂದಿಲ್ಲ; ಬರುವುದೂ‌ ಇಲ್ಲ. ಅವರು ಕರೆದಿಲ್ಲ, ಕರೆಯುವುದೂ ಇಲ್ಲ, ನಾನು ಹೋಗುವುದೂ ಇಲ್ಲ” ಎಂದು ಬಿಜೆಪಿ ನಾಯಕರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

“ಸಿದ್ದರಾಮಯ್ಯನವರ ಜೊತೆಗಿನ ಮಾತುಕತೆಯಲ್ಲಿ ನಾನು ರಾಜಕೀಯದ ಚರ್ಚೆ ನಡೆಸಿಲ್ಲ; ಅವರ ಭೇಟಿ ನನಗೆ ಸಹಜವಾಗಿಯೇ ಖುಷಿ ಕೊಟ್ಟಿದೆ. ಅವರು ಬೆಂಬಲ ಕೇಳಿದ್ದಾರೆ; ನಾನು ರಾಜಕೀಯವಾಗಿ ನಿವೃತ್ತಿಯಾಗಿದ್ದೇನೆ ಎಂದು ಹೇಳಿದ್ದೇನಷ್ಟೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ” ಎಂದು ಅವರು ಕಾಂಗ್ರೆಸ್ ಪರವಾಗಿ ಒಲವು ವ್ಯಕ್ತಪಡಿಸಿದ್ದಾರೆ.

ಬೋಸ್ ಹೇಳಿಕೆಯಿಂದ ಬಿಜೆಪಿಯಲ್ಲಿ ತಳಮಳ:

ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಚಾಮರಾಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್ ಬೋಸ್ ಮಾತನಾಡಿ, “ನಮಗೆ ಶ್ರೀನಿವಾಸ ಪ್ರಸಾದ್‌ ಅವರ ಬೆಂಬಲ ಇದೆ” ಎಂದು ಬಹಿರಂಗವಾಗಿ ಹೇಳಿದ್ದು, ಬಿಜೆಪಿಯಲ್ಲಿ ತಳಮಳ ಶುರುವಾಗಿದೆ.

ಚಾಮರಾಜನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸುನೀಲ್‌ ಬೋಸ್‌, “ಶ್ರೀನಿವಾಸ ಪ್ರಸಾದ್‌ ಅವರ ಸಂಪೂರ್ಣ ಬೆಂಬಲ ಕಾಂಗ್ರೆಸ್‌ಗೆ ಇದೆ. ಬಿಜೆಪಿ ಸಂಸದರ ಆಶೀರ್ವಾದ ಪಡೆದಿದ್ದೇನೆ. ಗೆದ್ದು ಬಾ ಎಂದು ನನಗೆ ಆಶೀರ್ವಾದ ಮಾಡಿದ್ದಾರೆ; ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಿದ್ದು, ನನ್ನ ಗೆಲುವು ನಿಶ್ಚಿತ” ಎಂದು ಬೋಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಬಡ ಕುಟುಂಬಕ್ಕೆ ವಾರ್ಷಿಕ ₹1 ಲಕ್ಷ, 1 ಕೋಟಿ ಸರ್ಕಾರಿ ಉದ್ಯೋಗ: ಆರ್‌ಜೆಡಿ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...