Homeಮುಖಪುಟಕಾಂಗ್ರೆಸ್ ಕಾರ್ಯಕರ್ತರ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ: ರಾಹುಲ್ ಗಾಂಧಿ

ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನಹಾನಿ ಪ್ರಕರಣಗಳ ವಿಚಾರಣೆ ಎದುರಿಸುತ್ತಿದ್ದಾರೆ. ಇಂದು ಸೂರತ್ ನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಮಾನಹಾನಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾದರು.

ಲೋಕಸಭೆ ಚುನಾವಣೆ ವೇಳೆ ನರೇಂದ್ರ ಮೋದಿ ವಿರುದ್ಧ ವಾಕ್ಪ್ರಹಾರ ನಡೆಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ಮೋದಿ ಉಪನಾಮ ಹೊಂದಿದವರೆಲ್ಲರೂ ಕಳ್ಳರು” ಎಂದು ಅಪಹಾಸ್ಯ ಮಾಡಿದ್ದರು. ಇದನ್ನು ಪ್ರಶ್ನಿಸಿ ಸೂರತ್ ನ ಸ್ಥಳೀಯ ಬಿಜೆಪಿ ಶಾಸಕ ಪೂರ್ಣೇಶ್ ಮಾನಹಾನಿ ಮೊಕದ್ದಮೆ ಸಲ್ಲಿಸಿದ್ದರು. ಐಪಿಸಿ ಸೆಕ್ಷನ್ 499, 500 ಅಡಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಇಂದು ರಾಹುಲ್ ಗಾಂಧಿ ಸೂರತ್ ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಕೇಸ್ ವಿಚಾರಣೆ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನಾನಿಂದು ಸೂರತ್ ನಲ್ಲಿದ್ದೇನೆ. ನನ್ನ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲಾಗಿದೆ. ಈ ಮೂಲಕ ರಾಜಕೀಯ ವಿರೋಧಿಗಳು ನನ್ನ ಬಾಯಿ ಮುಚ್ಚಿಸಲು ಹೊರಟಿದ್ದಾರೆ.

ನನ್ನೊಂದಿಗೆ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ಇಲ್ಲಿ ಜಮಾಯಿಸಿರುವ ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ. ಸತ್ಯಕ್ಕೆ ಜಯವಾಗಲಿದೆ ಎಂದು ಬರೆದಿದ್ದಾರೆ.

ಕರ್ನಾಟಕದ ಕೋಲಾರದಲ್ಲಿ ಏಪ್ರಿಲ್‌ನಲ್ಲಿ ನಡೆದಿದ್ದ ಚುನಾವಣಾ ರ್‍ಯಾಲಿ ವೇಳೆ ರಾಹುಲ್ ಗಾಂಧಿ, ಭಾರತೀಯ ಬ್ಯಾಂಕುಗಳಿಗೆ ವಂಚಿಸಿ, ವಿದೇಶಕ್ಕೆ ಪರಾರಿಯಾಗಿರುವ ನೀರವ್ ಮೋದಿ, ಲಲಿತ್ ಮೋದಿ ಮತ್ತು ನರೇಂದ್ರ ಅವರ ಹೆಸರುಗಳನ್ನು ಭಾಷಣದಲ್ಲಿ ಉಲ್ಲೇಖಿಸಿದ್ದರು. ಜತೆಗೆ “ಈ ಮೋದಿ ಉಪನಾಮ ಹೊಂದಿದವರೆಲ್ಲರೂ ಕಳ್ಳರು” ಎಂದಿದ್ದರು. ರಫೇಲ್‌ ವ್ಯವಹಾರದಲ್ಲಿ ನರೇಂದ್ರ ಮೋದಿಯವರು ಭ್ರಷ್ಟಾಚಾರ ಮಾಡಿದ್ದಾರೆ ಎಂದೂ ಅವರು ಆರೋಪಿಸಿದ್ದರು.

ರಾಹುಲ್ ಆಡಿದ ಮಾತು ಮೋದಿ ಬಳಗಕ್ಕೆ ಅವಮಾನ ಮಾಡಿದಂತಾಗಿದೆ ಎಂದು ಬಿಜೆಪಿ ಶಾಸಕ ಪೂರ್ಣೇಶ್ ಮೊಕದ್ದಮೆ ಸಲ್ಲಿಸಿದ್ದರು. ದೂರು ಸ್ವೀಕರಿಸಿದ್ದ ಸೂರತ್ ಮ್ಯಾಜಿಸ್ಟ್ರೇಟ್ ಬಿ.ಎಚ್,ಕಪಾಡಿಯಾ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದರು. ನಂತರ ನ್ಯಾಯಾಲಯಕ್ಕೆ ಹಾಜರಾಗಲು ಕಾಲಾವಕಾಶ ಕೋರಿ, ರಾಹುಲ್ ಪರ ವಕೀಲರು ಮನವಿ ಸಲ್ಲಿಸಿದ್ದರು. ಮನವಿಗೆ ಸಮ್ಮತಿ ಸೂಚಿಸಿದ್ದ ಕೋರ್ಟ್, ಇಂದಿಗೆ ವಿಚಾರಣೆ ಮುಂದೂಡಿ, ರಾಹುಲ್ ಖುದ್ದು ಹಾಜರಾಗಬೇಕೆಂದು ಆದೇಶಿಸಿತ್ತು.

ಇನ್ನು ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ಅಹಮದಾಬಾದ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಪ್ರಕರಣ ಕೂಡ ವಿಚಾರಣೆ ಹಂತದಲ್ಲಿದೆ. ಅಮಿತ್ ಶಾ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾಗಿದ್ದಾಗ, ನೋಟು ಅಮಾನ್ಯೀಕರಣದ ವೇಳೆ 750 ಕೋಟಿ ಹಳೆಯ ನೋಟುಗಳನ್ನು ಬದಲಿಸಿ ಹಗರಣ ಮಾಡಿದ್ದಾರೆ ಎಂದು ರಾಹುಲ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...