Homeಮುಖಪುಟನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

ನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

- Advertisement -
- Advertisement -

ದೇಶಕ್ಕೆ ನಿರಂಕುಶ ಪ್ರಭುತ್ವ ಹಾನಿಕರವಾಗಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದ್ದು, ಅಂತಹ ಸರಕಾರ ಈ ಹಿಂದೆ ಉತ್ತಮವಾಗಿ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಮುಂಬೈನ ತಮ್ಮ ನಿವಾಸ ‘ಮಾತೋಶ್ರೀ’ಯಲ್ಲಿ ಮಾತನಾಡಿದ ಉದ್ದವ್‌ ಠಾಕ್ರೆ, ದೇಶಕ್ಕೆ ಬಲಿಷ್ಠ ನಾಯಕನ ಅವಶ್ಯಕತೆ ಇದೆ, ಆ ನಾಯಕ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.

ಜಲಗಾಂವ್ ಜಿಲ್ಲೆಯ ಭಾರತೀಯ ಜನತಾ ಪಕ್ಷ (ಬಿಜೆಪಿ), ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ವಂಚಿತ್ ಬಹುಜನ ಅಘಾಡಿ (ವಿಬಿಎ) ಪದಾಧಿಕಾರಿಗಳು ಶಿವಸೇನಾ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಉದ್ದವ್‌ ಠಾಕ್ರೆ, ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಸಮಾಧಾನ ಗೋಚರಿಸುತ್ತಿದೆ ಎಂದು ಹೇಳಿದ್ದಾರೆ.

ನಿರಂಕುಶ ಆಡಳಿತವು ದೇಶಕ್ಕೆ ಹಾನಿಕಾರಕವಾಗಿದೆ. ಒಂದು ಕಾಲದಲ್ಲಿ ಸಮ್ಮಿಶ್ರ ಸರ್ಕಾರ ಬೇಡ ಎಂಬ ಭಾವನೆ ಇತ್ತು. ಆದರೆ ಪಿ ವಿ ನರಸಿಂಹ ರಾವ್, ಅಟಲ್ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್ ಸಿಂಗ್ ಅವರು ಸಮ್ಮಿಶ್ರ ಸರ್ಕಾರಗಳನ್ನು ಚೆನ್ನಾಗಿ ನಡೆಸಿದ್ದರು. ಕೆಲವು ಸಂದರ್ಭಗಳನ್ನು ಹೊರತುಪಡಿಸಿ, ಸಮ್ಮಿಶ್ರ ಸರ್ಕಾರಗಳು ದೇಶದಲ್ಲಿ ಉತ್ತಮವಾಗಿ ಕೆಲಸ ಮಾಡಿದೆ. ನಮಗೆ ಬಲಿಷ್ಠ ದೇಶ ಮತ್ತು ಸಮ್ಮಿಶ್ರ ಸರ್ಕಾರ ಬೇಕು. ನಮಗೆ ಬಲಿಷ್ಠ ನಾಯಕ ಬೇಕು, ಬಲಿಷ್ಠ ನಾಯಕ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬಲ್ಲರು ಎಂದು ಠಾಕ್ರೆ ಹೇಳಿದರು.

ವಿರೋಧ ಪಕ್ಷದ ಇಂಡಿಯಾ ಬಣವು ದೇಶಕ್ಕೆ ಉತ್ತಮವಾದ ಸಮ್ಮಿಶ್ರ ಸರ್ಕಾರವನ್ನು ನೀಡಬಹುದು. ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ಶೀಘ್ರದಲ್ಲೇ ರಾಜ್ಯದಲ್ಲಿ ಜಂಟಿ ರ್ಯಾಲಿಗಳನ್ನು ನಡೆಸಲಿವೆ ಎಂದು ಉದ್ದವ್‌ ಠಾಕ್ರೆ ಹೇಳಿದ್ದಾರೆ.

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಶಿವಸೇನೆ ಕುರಿತ ‘ನಕಲಿ’ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, “ನನ್ನ ಪಕ್ಷವು ನಿಮ್ಮ ಪದವಿಯಂತೆ ಇರಲಿಲ್ಲ” ಎಂದು ಹೇಳಿದರು. ಮುಂಬೈ ಬಳಿಯ ಮಹಾರಾಷ್ಟ್ರದ ಬೋಯಿಸರ್‌ನಲ್ಲಿ ತಮ್ಮ ಪಕ್ಷದ ಪಾಲ್ಘರ್ ಲೋಕಸಭಾ ಅಭ್ಯರ್ಥಿ ಭಾರತಿ ಕಾಮ್ಡಿ ಅವರನ್ನು ಬೆಂಬಲಿಸಿ ಪ್ರಚಾರ ನಡೆಸುತ್ತಿದ್ದ ಪ್ರಚಾರ ಸಭೆಯಲ್ಲಿ ಠಾಕ್ರೆ ಈ ಹೇಳಿಕೆಗಳನ್ನು ನೀಡಿದ್ದರು.

ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಹೋರಾಡಲು ಶಿವಸೇನೆ ಮುಖ್ಯಸ್ಥ ಬಾಲ್ ಠಾಕ್ರೆ ಸ್ಥಾಪಿಸಿದ ಶಿವಸೇನೆಯನ್ನು ನಕಲಿ ಎಂದು ಕರೆಯಲಾಗುತ್ತಿದೆ, ಅದನ್ನು ನಕಲಿ ಎಂದು ಕರೆಯಲು ಅದು ನಿಮ್ಮ ಪದವಿಯಂತಲ್ಲ ಎಂದು ಉದ್ದವ್‌ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ: ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...