Homeಮುಖಪುಟಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

ಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

- Advertisement -
- Advertisement -

ಇರಾನ್ ದಾಳಿಯ ನಂತರ ಇಸ್ರೇಲ್ ತನ್ನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಏಪ್ರಿಲ್ 14ರ ಭಾನುವಾರದಿಂದ ಅನಿರ್ದಿಷ್ಟ ಅವಧಿಗೆ ಬಂದ್‌ ಮಾಡಿದೆ. ಇರಾನ್ ನಿನ್ನೆ ಇಸ್ರೇಲ್‌ ಮೇಲೆ ಕೆಲ ಡ್ರೋನ್‌ಗಳು ಮತ್ತು ಕೆಲವು ಕ್ಷಿಪಣಿಗಳ ದಾಳಿ ನಡೆಸಿದೆ.

ಏಪ್ರಿಲ್ 1ರಂದು ಇಸ್ರೇಲ್ ರಕ್ಷಣಾ ಪಡೆಗಳು (IDF) ಸಿರಿಯಾದ ಡಮಾಸ್ಕಸ್‌ನಲ್ಲಿರುವ ಇರಾನ್‌ನ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಿದ ನಂತರ ಇರಾನ್ ಇಸ್ರೇಲ್‌ಗೆ ದಾಳಿಯ ಬೆದರಿಕೆ ಹಾಕುತ್ತಿದೆ. ದಾಳಿಯಲ್ಲಿ ಬ್ರಿಗೇಡ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಸೇರಿದಂತೆ ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಏಳು ಉನ್ನತ ಅಧಿಕಾರಿಗಳು ಸಾವನ್ನಪ್ಪಿದ್ದರು.

ಮುಂದಿನ ಆದೇಶದವರೆಗೆ ದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೇಲ್ ಹೋಮ್ ಫ್ರಂಟ್ ಹೇಳಿದೆ. ಏಪ್ರಿಲ್ 14ರಿಂದ ಯಾವುದೇ ಶಿಕ್ಷಣ ಸಂಸ್ಥೆಗಳು ತೆರೆದಿರುವುದಿಲ್ಲ ಮತ್ತು ಯಾವುದೇ ಶಿಬಿರ, ಕಾರ್ಯಕ್ರಮಗಳು ಅಥವಾ ಪಠ್ಯೇತರ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಐಡಿಎಫ್ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಏಪ್ರಿಲ್ 13ರಂದು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಡೇನಿಯಲ್ ಹಗರಿ ಅವರು ಇಸ್ರೇಲಿ ನಾಗರಿಕರಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಿದ್ದಾರೆ ಮತ್ತು ಎಚ್ಚರಿಕೆಯ ಸೈರನ್ ಕೇಳುವ 10 ನಿಮಿಷಗಳ ಕಾಲ ಮನೆಗಳಿಂದ, ಆಶ್ರಯ ತಾಣಗಳಿಂದ ಹೊರಬರದಂತೆ ನಾಗರಿಕರಿಗೆ ಸೂಚಿಸಿದೆ. ಇರಾನ್‌ ದಾಳಿಯ ಭೀತಿಯಿಂದ ಇಸ್ರೇಲ್ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ ಎಂದು ಇಸ್ರೇಲ್ ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹಮಾಸ್, ಹೆಜ್ಬುಲ್ಲಾ ಮತ್ತು ಹೌತಿ  ಯೆಮನ್‌ನ ಗುಂಪು ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ. ತಮ್ಮ ದೇಶವು ಯಾವುದೇ  ರೀತಿಯ ಪ್ರತಿಕ್ರಿಯೆಗೆ ಸಿದ್ದವಾಗಿದೆ ಎಂದು ಇಸ್ರೇಲ್‌ ಹೇಳಿಕೊಂಡಿದೆ.

ಇಸ್ರೇಲ್‌-ಗಾಝಾ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟಾಗಿದೆ. ಇಸ್ರೇಲ್‌, ಇರಾನ್‌ ರಾಯಭಾರಿ ಕಚೇರಿ ಮೇಲೆ ನಡೆಸಿದ ದಾಳಿಯು ಈ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ 33,175 ಮಂದಿ ಸಾವನ್ನಪ್ಪಿದ್ದಾರೆ. ಮೃತರದಲ್ಲಿ ಮೂರನೇ ಎರಡರಷ್ಟು ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಇಸ್ರೇಲ್‌ ಗಾಝಾದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಮಧ್ಯೆ ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಇಬ್ಬರು ಕಮಾಂಡರ್‌ಗಳು ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಐಆರ್‌ಜಿಸಿಯ ಎಲೈಟ್ ಕುಡ್ಸ್ ಫೋರ್ಸ್‌ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಅವರು ಸಾವನ್ನಪ್ಪಿದ್ದರು. ಇದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ನೀಡುವುದಾಗಿ ಇರಾನ್‌ ಹೇಳಿತ್ತು. ಇದಲ್ಲದೆ ಇಸ್ರೇಲ್‌- ಲೆಬನಾನ್‌ ಮೇಲೆ ಇತ್ತೀಚೆಗೆ ವೈಮಾನಿಕ ದಾಳಿಯನ್ನು ನಡೆಸಿದೆ. ದಾಳಿಯಲ್ಲಿ ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದು, ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.

ಇರಾನ್ ನಿನ್ನೆ ಇಸ್ರೇಲ್ ಮೇಲೆ ವಾಯುದಾಳಿ ಆರಂಭಿಸಿತ್ತು, ಇಸ್ರೇಲ್‌ನತ್ತ ಇರಾನ್ ತನ್ನ ಭೂ ಪ್ರದೇಶದಿಂದ ಯುಎವಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಸೇನಾ ವಕ್ತಾರ ಡೇನಿಯಲ್ ಹಗಾರಿ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನು ಓದಿ: ನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...