Homeಮುಖಪುಟಜಮ್ಮು: ಪ್ರಮುಖ ಕಾಶ್ಮೀರಿ ಪಂಡಿತರ ಸಂಘಟನೆ ಕಾಂಗ್ರೆಸ್‌ನೊಂದಿಗೆ ವಿಲೀನ

ಜಮ್ಮು: ಪ್ರಮುಖ ಕಾಶ್ಮೀರಿ ಪಂಡಿತರ ಸಂಘಟನೆ ಕಾಂಗ್ರೆಸ್‌ನೊಂದಿಗೆ ವಿಲೀನ

- Advertisement -
- Advertisement -

ಕಾಶ್ಮೀರಿ ಪಂಡಿತರ ಸಂಘಟನೆ, ಆಲ್ ಇಂಡಿಯಾ ಕಾಶ್ಮೀರಿ ಹಿಂದೂ ಫೋರಂ (ಎಐಕೆಹೆಚ್‌ಎಫ್) ಶನಿವಾರ ಜಮ್ಮುವಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿದೆ.

ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಕಾರ್ ರಸೂಲ್ ವಾನಿ ಅವರು ಎಐಕೆಹೆಚ್‌ಎಫ್ ಅಧ್ಯಕ್ಷ ರತನ್ ಲಾಲ್ ಭಾನ್ ಮತ್ತು ಇತರ ಪದಾಧಿಕಾರಿಗಳನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಎಐಕೆಹೆಚ್‌ಎಫ್ ಅನ್ನು 1998 ರಲ್ಲಿ ಸ್ಥಾಪಿಸಲಾಯಿತು. ಅದರ ನೂರಾರು ಸದಸ್ಯರು ಕಾಂಗ್ರೆಸ್‌ಗೆ ಸೇರಿರುವುದು ಪಕ್ಷಕ್ಕೆ ದೊಡ್ಡ ಬಲ ಬಂದಂತಾಗಿದೆ ಎಂದು ವಾನಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಎಲ್ಲಾ ಕಾಶ್ಮೀರಿ ಪಂಡಿತ ಸಂಘಟನೆಗಳನ್ನು ಕಾಂಗ್ರೆಸ್‌ ಪಕ್ಷ ಸೇರಲು ಆಹ್ವಾನಿಸಿರುವ ರಸೂಲ್ ವಾನಿ, “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಪಂಡಿತ ಸಮುದಾಯವನ್ನು ‘ಮೂರ್ಖರನ್ನಾಗಿ’ ಮಾಡಿದೆ ಎಂದಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿತ್ತು. ಈ ಮೂಲಕ ಪಂಡಿತರನ್ನು ಮತ ಸೆಳೆಯುವ ವಿಷಯವನ್ನಾಗಿ ಬಳಸಿಕೊಂಡಿತ್ತು. ಆದರೆ, ಕಳೆದ 10 ವರ್ಷದ ಅಧಿಕಾರಾವಧಿಯಲ್ಲಿ ಬಿಜೆಪಿ ಪಂಡಿತ ಸಮುದಾಯಕ್ಕೆ 10 ಪೈಸೆಯ ಕೆಲಸ “ಎಂದು ವಾನಿ ಹೇಳಿದ್ದಾರೆ.

“ಕಳೆದ 10 ವರ್ಷಗಳಿಂದ ಬಿಜೆಪಿಯು ಪಂಡಿತ ಸಮುದಾಯವನ್ನು ಮೂರ್ಖರನ್ನಾಗಿಸುತ್ತಿರುವುದರಿಂದ ಇತರ ಕಾಶ್ಮೀರಿ ಪಂಡಿತ ಗುಂಪುಗಳನ್ನೂ ಕಾಂಗ್ರೆಸ್‌ಗೆ ಬರುವಂತೆ ನಾನು ಮನವಿ ಮಾಡುತ್ತೇನೆ. ನೆಹರು ಕುಟುಂಬವು ಮೂಲತಃ ಕಾಶ್ಮೀರಕ್ಕೆ ಸೇರಿದೆ. ಸ್ಥಳಾಂತರಗೊಂಡ ಪಂಡಿತರ ಬಗ್ಗೆ ಕಾಂಗ್ರೆಸ್ ಹೆಚ್ಚಿನ ಸಹಾನುಭೂತಿ ಹೊಂದಿದೆ” ಎಂದು ವಾನಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವು ಕಾಶ್ಮೀರಿ ಪಂಡಿತರಿಗಾಗಿ ಸಾಕಷ್ಟು ಕೆಲಸ ಮಾಡಿರುವುದರಿಂದ ಕಾಂಗ್ರೆಸ್‌ನೊಂದಿಗೆ ತಮ್ಮ ಸಂಘಟನೆಯನ್ನು ವಿಲೀನಗೊಳಿಸಲು ನಿರ್ಧರಿಸಿದ್ದೇವೆ ಎಂದು ಎಐಕೆಹೆಚ್‌ಎಫ್ ಅಧ್ಯಕ್ಷ ರತನ್ ಲಾಲ್ ಭಾನ್ ಹೇಳಿದ್ದಾರೆ.

“ನಾವು ನಮ್ಮ ಕುಟುಂಬಕ್ಕೆ ಮರಳಿದಂತಹ ಭಾವನೆ ಮೂಡುತ್ತಿದೆ. ಬಿಜೆಪಿ ಪಂಡಿತರನ್ನು ಶೋಷಿಸಿತ್ತಲ್ಲದೆ, ನಮಗಾಗಿ ಏನನ್ನೂ ಮಾಡಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...