Homeಮುಖಪುಟಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

ಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಚುನಾವಣಾ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರರಾಗಿದ್ದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಲಂಚ ಪ್ರಕರಣದಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ.

966 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರನಾಗಿದ್ದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ವಿರುದ್ಧ ಜಗದಾಲ್ಪುರ ಅಂತರ್ಗತ ಉಕ್ಕು ತಯಾರಿಕಾ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ 174 ಕೋಟಿ ಬಿಲ್ ಮಂಜೂರು ಮಾಡಲು 78 ಲಕ್ಷ ಲಂಚ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಭಾಗಿಯಾದ ಎನ್‌ಐಎಸ್‌ಪಿ ಹಾಗೂ ಎನ್‌ಎಂಡಿಸಿ ಹಾಗೂ ಎಂಇಕಾನ್‌ ಅಧಿಕಾರಿಗಳ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್ 21 ರಂದು ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಮೇಘಾ ಇಂಜಿನಿಯರಿಂಗ್ ಚುನಾವಣಾ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರರಾಗಿದ್ದಾರೆ  ಮತ್ತು ಬಿಜೆಪಿಗೆ 586 ಕೋಟಿ ರೂ. ದೇಣಿಗೆಯನ್ನು ಈ ಕಂಪೆನಿ ನೀಡಿತ್ತು. ಇದಲ್ಲದೆ ಕಂಪೆನಿಯು ಬಿಆರ್‌ಎಸ್‌ಗೆ ರೂ 195 ಕೋಟಿ, ಡಿಎಂಕೆಗೆ 85 ಕೋಟಿ ರೂ. ಮತ್ತು ವೈಎಸ್‌ಆರ್‌ಸಿಪಿಗೆ  37 ಕೋಟಿ ರೂ. ದೇಣಿಗೆ ನೀಡಿದೆ. ಟಿಡಿಪಿ ಕಂಪನಿಯಿಂದ ಸುಮಾರು 25 ಕೋಟಿ ರೂ., ಕಾಂಗ್ರೆಸ್ 17 ಕೋಟಿ ರೂ. ದೇಣಿಗೆಯನ್ನು ಪಡೆದಿದೆ.

ಶನಿವಾರ ದಾಖಲಾದ ಎಫ್‌ಐಆರ್‌ನ ಪ್ರಕಾರ, ಇಂಟೆಕ್‌ವೆಲ್ ಮತ್ತು ಪಂಪ್‌ಹೌಸ್ ಮತ್ತು ಕ್ರಾಸ್ ಕಂಟ್ರಿ ಪೈಪ್‌ಲೈನ್ ಕಾಮಗಾರಿಗೆ ಸಂಬಂಧಿಸಿದ 315 ಕೋಟಿ ರೂ.ಗಳ ಯೋಜನೆಯಲ್ಲಿ ಲಂಚದ ಆರೋಪದ ಬಗ್ಗೆ ಸಿಬಿಐ 2023 ಆಗಸ್ಟ್ 10ರಂದು ಪ್ರಾಥಮಿಕ ತನಿಖೆ ನಡೆಸಿತ್ತು. ಈ ಕುರಿತ ವರದಿ ಆಧರಿಸಿ ಮಾರ್ಚ್ 18ರಂದು ಪ್ರಕರಣ ದಾಖಲಿಸಲು ನಿರ್ಧರಿಸಲಾಯಿತು. ಅದರಂತೆ ಮಾರ್ಚ್ 31ರಂದು ಪ್ರಕರಣ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಸಿಬಿಐ ಎಫ್‌ಐಆರ್‌ ಎನ್‌ಐಎಸ್‌ಪಿ ಮತ್ತು ಎನ್‌ಎಂಡಿಸಿ ಲಿಮಿಟೆಡ್‌ನ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಪ್ರಶಾಂತ್ ದಾಶ್, ನಿರ್ದೇಶಕ (ಉತ್ಪಾದನೆ) ಡಿಕೆ ಮೊಹಾಂತಿ, ಡಿಜಿಎಂ ಪಿಕೆ ಭುಯಾನ್, ಡಿಎಂ ನರೇಶ್ ಬಾಬು, ಹಿರಿಯ ವ್ಯವಸ್ಥಾಪಕ ಸುಬ್ರೊ ಬ್ಯಾನರ್ಜಿ, ನಿವೃತ್ತ ಸಿಜಿಎಂ (ಹಣಕಾಸು) ಎಲ್ ಕೃಷ್ಣ ಮೋಹನ್, ಕೆ ರಾಜಶೇಖರ್, ಸೋಮನಾಥ್ ಘೋಷ್ ಸೇರಿದಂತೆ ಎಂಟು ಅಧಿಕಾರಿಗಳನ್ನು ಹೆಸರಿಸಿದೆ.

ಏಜೆನ್ಸಿಯು MECON ಲಿಮಿಟೆಡ್‌ನ ಇಬ್ಬರು ಅಧಿಕಾರಿಗಳನ್ನು ಹೆಸರಿಸಿದೆ. ಎಂಇಕಾನ್‌ ಕಂಪನಿಯ ಸಹಾಯಕ ಮುಖ್ಯ ವ್ಯವಸ್ಥಾಪಕ ಸಂಜೀವ್ ಸಹಾಯ್ ಹಾಗೂ ಡಿಜಿಎಂ ಇಲ್ಲವರಸು ಇವರು 73 ಇನ್‌ವಾಯ್ಸ್‌ಗಳಿರುವ 174.41 ಕೋಟಿ ಮೊತ್ತವನ್ನು ಬಿಡುಗಡೆ ಮಾಡಲು ಮೇಘಾ ಎಂಜಿನಿಯರಿಂಗ್ ಕಂಪನಿಯ ಮುಖ್ಯ ವ್ಯವಸ್ಥಾಪಕ ಸುಭಾಶ್ ಚಂದ್ರ ಸಂಗ್ರಾಸ್ ಅವರಿಂದ 5.01 ಲಕ್ಷ ಲಂಚ ಸ್ವೀಕರಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಇದನ್ನು ಓದಿ: ಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...