Homeಮುಖಪುಟಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

ಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಚುನಾವಣಾ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರರಾಗಿದ್ದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಲಂಚ ಪ್ರಕರಣದಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ.

966 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರನಾಗಿದ್ದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ವಿರುದ್ಧ ಜಗದಾಲ್ಪುರ ಅಂತರ್ಗತ ಉಕ್ಕು ತಯಾರಿಕಾ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ 174 ಕೋಟಿ ಬಿಲ್ ಮಂಜೂರು ಮಾಡಲು 78 ಲಕ್ಷ ಲಂಚ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಭಾಗಿಯಾದ ಎನ್‌ಐಎಸ್‌ಪಿ ಹಾಗೂ ಎನ್‌ಎಂಡಿಸಿ ಹಾಗೂ ಎಂಇಕಾನ್‌ ಅಧಿಕಾರಿಗಳ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್ 21 ರಂದು ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಮೇಘಾ ಇಂಜಿನಿಯರಿಂಗ್ ಚುನಾವಣಾ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರರಾಗಿದ್ದಾರೆ  ಮತ್ತು ಬಿಜೆಪಿಗೆ 586 ಕೋಟಿ ರೂ. ದೇಣಿಗೆಯನ್ನು ಈ ಕಂಪೆನಿ ನೀಡಿತ್ತು. ಇದಲ್ಲದೆ ಕಂಪೆನಿಯು ಬಿಆರ್‌ಎಸ್‌ಗೆ ರೂ 195 ಕೋಟಿ, ಡಿಎಂಕೆಗೆ 85 ಕೋಟಿ ರೂ. ಮತ್ತು ವೈಎಸ್‌ಆರ್‌ಸಿಪಿಗೆ  37 ಕೋಟಿ ರೂ. ದೇಣಿಗೆ ನೀಡಿದೆ. ಟಿಡಿಪಿ ಕಂಪನಿಯಿಂದ ಸುಮಾರು 25 ಕೋಟಿ ರೂ., ಕಾಂಗ್ರೆಸ್ 17 ಕೋಟಿ ರೂ. ದೇಣಿಗೆಯನ್ನು ಪಡೆದಿದೆ.

ಶನಿವಾರ ದಾಖಲಾದ ಎಫ್‌ಐಆರ್‌ನ ಪ್ರಕಾರ, ಇಂಟೆಕ್‌ವೆಲ್ ಮತ್ತು ಪಂಪ್‌ಹೌಸ್ ಮತ್ತು ಕ್ರಾಸ್ ಕಂಟ್ರಿ ಪೈಪ್‌ಲೈನ್ ಕಾಮಗಾರಿಗೆ ಸಂಬಂಧಿಸಿದ 315 ಕೋಟಿ ರೂ.ಗಳ ಯೋಜನೆಯಲ್ಲಿ ಲಂಚದ ಆರೋಪದ ಬಗ್ಗೆ ಸಿಬಿಐ 2023 ಆಗಸ್ಟ್ 10ರಂದು ಪ್ರಾಥಮಿಕ ತನಿಖೆ ನಡೆಸಿತ್ತು. ಈ ಕುರಿತ ವರದಿ ಆಧರಿಸಿ ಮಾರ್ಚ್ 18ರಂದು ಪ್ರಕರಣ ದಾಖಲಿಸಲು ನಿರ್ಧರಿಸಲಾಯಿತು. ಅದರಂತೆ ಮಾರ್ಚ್ 31ರಂದು ಪ್ರಕರಣ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಸಿಬಿಐ ಎಫ್‌ಐಆರ್‌ ಎನ್‌ಐಎಸ್‌ಪಿ ಮತ್ತು ಎನ್‌ಎಂಡಿಸಿ ಲಿಮಿಟೆಡ್‌ನ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಪ್ರಶಾಂತ್ ದಾಶ್, ನಿರ್ದೇಶಕ (ಉತ್ಪಾದನೆ) ಡಿಕೆ ಮೊಹಾಂತಿ, ಡಿಜಿಎಂ ಪಿಕೆ ಭುಯಾನ್, ಡಿಎಂ ನರೇಶ್ ಬಾಬು, ಹಿರಿಯ ವ್ಯವಸ್ಥಾಪಕ ಸುಬ್ರೊ ಬ್ಯಾನರ್ಜಿ, ನಿವೃತ್ತ ಸಿಜಿಎಂ (ಹಣಕಾಸು) ಎಲ್ ಕೃಷ್ಣ ಮೋಹನ್, ಕೆ ರಾಜಶೇಖರ್, ಸೋಮನಾಥ್ ಘೋಷ್ ಸೇರಿದಂತೆ ಎಂಟು ಅಧಿಕಾರಿಗಳನ್ನು ಹೆಸರಿಸಿದೆ.

ಏಜೆನ್ಸಿಯು MECON ಲಿಮಿಟೆಡ್‌ನ ಇಬ್ಬರು ಅಧಿಕಾರಿಗಳನ್ನು ಹೆಸರಿಸಿದೆ. ಎಂಇಕಾನ್‌ ಕಂಪನಿಯ ಸಹಾಯಕ ಮುಖ್ಯ ವ್ಯವಸ್ಥಾಪಕ ಸಂಜೀವ್ ಸಹಾಯ್ ಹಾಗೂ ಡಿಜಿಎಂ ಇಲ್ಲವರಸು ಇವರು 73 ಇನ್‌ವಾಯ್ಸ್‌ಗಳಿರುವ 174.41 ಕೋಟಿ ಮೊತ್ತವನ್ನು ಬಿಡುಗಡೆ ಮಾಡಲು ಮೇಘಾ ಎಂಜಿನಿಯರಿಂಗ್ ಕಂಪನಿಯ ಮುಖ್ಯ ವ್ಯವಸ್ಥಾಪಕ ಸುಭಾಶ್ ಚಂದ್ರ ಸಂಗ್ರಾಸ್ ಅವರಿಂದ 5.01 ಲಕ್ಷ ಲಂಚ ಸ್ವೀಕರಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಇದನ್ನು ಓದಿ: ಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...