Homeಮುಖಪುಟನಿರುದ್ಯೋಗ, ಹಣದುಬ್ಬರದ ಬಗ್ಗೆ ಉಲ್ಲೇಖವಿಲ್ಲ: ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷಗಳ ನಾಯಕರು ಏನೇನು ಹೇಳಿದ್ರು?

ನಿರುದ್ಯೋಗ, ಹಣದುಬ್ಬರದ ಬಗ್ಗೆ ಉಲ್ಲೇಖವಿಲ್ಲ: ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷಗಳ ನಾಯಕರು ಏನೇನು ಹೇಳಿದ್ರು?

- Advertisement -
- Advertisement -

ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಬಗ್ಗೆ ವಿರೋಧ ಪಕ್ಷಗಳು ಭಾನುವಾರ  ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿಯ ಭರವಸೆಗಳು ಸುಳ್ಳಿನಿಂದ ತುಂಬಿಕೊಂಡಿದೆ ಮತ್ತು ವಿಶ್ವಾಸಾರ್ಹವಲ್ಲ ಎಂದು ಹೇಳಿದ್ದು, ಕೇಸರಿ ಪಕ್ಷವು ಪ್ರಣಾಳಿಕೆಯಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವನ್ನು ನಿರ್ಲಕ್ಷಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ.

ಪ್ರಣಾಳಿಕೆಯು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ವಿಶೇಷ ಗಮನವನ್ನು ಹರಿಸಿದೆ. ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ಜಾರಿಗೆ ತರಲು ಮತ್ತು ಏಕಕಾಲದಲ್ಲಿ ಚುನಾವಣೆಗಳನ್ನು(ಒಂದು ರಾಷ್ಟ್ರ, ಒಂದು ಚುನಾವಣೆ) ನಡೆಸುವುದಾಗಿ ಬಿಜೆಪಿಯು ಭರವಸೆ ನೀಡಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಣದುಬ್ಬರ ಮತ್ತು ನಿರುದ್ಯೋಗ ಬಿಜೆಪಿಯ ಪ್ರಣಾಳಿಕೆಯಿಂದ “ಕಾಣೆಯಾಗಿದೆ” ಎಂದು ಹೇಳಿದ್ದಾರೆ. ಜನರ ಜೀವನಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚಿಸಲು ಬಿಜೆಪಿ ಬಯಸುವುದಿಲ್ಲ. ಇಂಡಿಯಾ ಮೈತ್ರಿ ಕೂಟದ ಯೋಜನೆ ತುಂಬಾ ಸ್ಪಷ್ಟವಾಗಿದೆ. 30 ಲಕ್ಷ ಹುದ್ದೆಗಳಿಗೆ ನೇಮಕಾತಿ ಮತ್ತು ಪ್ರತಿ ವಿದ್ಯಾವಂತ ಯುವಕನಿಗೆ 1 ಲಕ್ಷ ರೂಪಾಯಿಗಳ ಶಾಶ್ವತ ಉದ್ಯೋಗ ನೀಡುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಬಾರಿ ಯುವಕರು ಪ್ರಧಾನಿ ಮೋದಿಯವರ ಬಲೆಗೆ ಬೀಳುವುದಿಲ್ಲ, ಅವರು ಈಗ ಕಾಂಗ್ರೆಸ್‌ನ ಕೈಗಳನ್ನು ಬಲಪಡಿಸುತ್ತಾರೆ ಮತ್ತು ದೇಶದಲ್ಲಿ ‘ಉದ್ಯೋಗ ಕ್ರಾಂತಿ’ಗೆ ನೆರವಾಗುತ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿಯ ಪ್ರಣಾಳಿಕೆಯು ಕೇವಲ ಬಾಯಿ ಮಾತಿಗೆ ಮಾತ್ರ ಅವರ ನಿಜವಾದ ಪ್ರಣಾಳಿಕೆ, ‘ಸಂವಿಧಾನ್ ಬದ್ಲೋ ಪತ್ರ’ (ಸಂವಿಧಾನದ ಬದಲಿಸುವ ಪ್ರಣಾಳಿಕೆ) ಎಂದು ಆರೋಪಿಸಿದರು. ನೆನಪಿಡಿ, ಬಿಜೆಪಿ ದೇಶ, ಸಮಾಜ, ಪ್ರಜಾಪ್ರಭುತ್ವದ ವಿರುದ್ಧ ಈ ಎಲ್ಲ ಷಡ್ಯಂತ್ರಗಳನ್ನು ತಳಮಟ್ಟದಿಂದ ಪ್ರಾರಂಭಿಸುತ್ತದೆ. ಆರಂಭದಲ್ಲಿ ಉನ್ನತ ನಾಯಕರು ಜನರ ಮುಂದೆ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸುತ್ತಾರೆ, ಆದರೆ ರಾತ್ರಿಯಲ್ಲಿ ಅವರು ಸಂವಿಧಾನವನ್ನು ನಾಶಮಾಡಲು ಸ್ಕ್ರಿಪ್ಟ್ ಬರೆಯುತ್ತಾರೆ. ಸಂಪೂರ್ಣ ಅಧಿಕಾರ ಸಿಕ್ಕ ನಂತರ ಸಂವಿಧಾನದ ಮೇಲೆ ದಾಳಿ ನಡೆಸುತ್ತಾರೆ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವು “ಭಾರತದ ಆತ್ಮ” ಎಂದು ಹೇಳಿದ ಪ್ರಿಯಾಂಕ ಗಾಂಧಿ ಬಿಜೆಪಿಯನ್ನು ಸೋಲಿಸಲು ಎಲ್ಲಾ ವಿರೋಧ ಪಕ್ಷಗಳು ಒಂದಾಗಬೇಕು ಎಂದು ಹೇಳಿದರು.

ಇಂದು ನಾವೆಲ್ಲರೂ ಒಗ್ಗೂಡಿ ಬಿಜೆಪಿಯ ಸಂವಿಧಾನ ಬದಲಾವಣೆ ಮಿಷನ್‌ನ್ನು ತಿರಸ್ಕರಿಸಬೇಕಾಗಿದೆ ಮತ್ತು ದೇಶವನ್ನು ಸಂವಿಧಾನದಿಂದ ನಡೆಸಲಾಗುವುದು ಮತ್ತು ಸಂವಿಧಾನವನ್ನು ಬದಲಾಯಿಸುವ ಉದ್ದೇಶ ಹೊಂದಿರುವವರನ್ನು ನಾವು ಒಟ್ಟಾಗಿ ಸೋಲಿಸುತ್ತೇವೆ ಎಂದು ಗಟ್ಟಿಯಾಗಿ ಹೇಳಬೇಕಾಗಿದೆ ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಅನುಕೂಲವಾಗುವ ಯಾವುದೇ ಕೆಲಸವನ್ನು ಅವರು ಮಾಡುತ್ತಿಲ್ಲ. ಬಿಜೆಪಿಯ ಪ್ರಣಾಳಿಕೆಯನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ನರೇಂದ್ರ ಮೋದಿ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದರು, ಅವರು ಎಂಎಸ್‌ಪಿ ಹೆಚ್ಚಿಸುವುದಾಗಿ ಮತ್ತು ಕಾನೂನುಬದ್ಧ ಗ್ಯಾರಂಟಿ ನೀಡುವುದಾಗಿ ಹೇಳಿದ್ದರು. ಅವರು ತಮ್ಮ ಅಧಿಕಾರಾದಲ್ಲಿದ್ದರೂ ಅಂತಹ ಯಾವುದೇ ದೊಡ್ಡ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯ ಪ್ರಣಾಳಿಕೆಗೆ ‘ಸಂಕಲ್ಪ ಪತ್ರ’  ಎಂದು ಹೆಸರಿಟ್ಟಿರುವುದಕ್ಕೆ ಕಾಂಗ್ರೆಸ್ ನಾಯಕ ಪವನ್ ಖೇರಾ ಆಕ್ಷೇಪವನ್ನು ವ್ಯಕ್ತಪಡಿಸಿದ್ದು, ಅದಕ್ಕೆ ‘ಮಾಫಿನಾಮಾ’  ಎಂದು ಹೆಸರಿಡಬೇಕು ಎಂದು ಹೇಳಿದ್ದಾರೆ.ದೇಶದ ದಲಿತರು, ರೈತರು, ಯುವಕರು ಮತ್ತು ಬುಡಕಟ್ಟು ಜನರಲ್ಲಿ ಮೋದಿಜಿ ಕ್ಷಮೆ ಕೇಳಬೇಕಿತ್ತು. ಕೇಸರಿ ಪಕ್ಷದ ಪ್ರಣಾಳಿಕೆಯು ವಿಶ್ವಾಸಾರ್ಹವಲ್ಲ. 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಬರೆದುಕೊಂಡಿದ್ದಾರೆ. ಆಗ ಎಲ್ಲಿರುತ್ತೀರಿ? 5 ವರ್ಷಗಳ ಖಾತೆ ಕೊಡಿ. ಅವರು ತುಂಬಾ ಸುಳ್ಳು ಹೇಳಿದ್ದಾರೆ, ಈಗ ಯಾರೂ ಅವರನ್ನು ನಂಬುವುದಿಲ್ಲ ಎಂದು ಖೇರಾ ಹೇಳಿದ್ದಾರೆ.

ಯುವಕರು ಉದ್ಯೋಗ ಹುಡುಕುತ್ತಿದ್ದಾರೆ, ಹಣದುಬ್ಬರ ಹೆಚ್ಚುತ್ತಿದೆ, ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಅವರು ಚಿಂತಿಸುವುದಿಲ್ಲ, 10 ವರ್ಷಗಳಲ್ಲಿ ಈ ವ್ಯಕ್ತಿಗೆ ಬಡವರಿಗಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ, ಅವರ ಪ್ರಣಾಳಿಕೆಯನ್ನು ನಂಬುವುದು ಸರಿಯಲ್ಲ ಎಂದು ಖೇರಾ ಹೇಳಿದ್ದಾರೆ.

ಬಿಜೆಪಿಯ ಪ್ರಣಾಳಿಕೆಯು ನಕಲಿ ಭರವಸೆಗಳ ದಾಖಲೆ ಮತ್ತು ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ  ಗಮನಹರಿಸಿಲ್ಲ ಎಂದು ದೆಹಲಿ ಸಚಿವೆ ಮತ್ತು ಎಎಪಿ ನಾಯಕ ಅತಿಶಿ ಹೇಳಿದ್ದಾರೆ. ನಿರುದ್ಯೋಗದಿಂದ ಜನರು ಕಂಗಾಲಾಗಿದ್ದಾರೆ. (ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆ 300 ರೂ.ನಿಂದ 1,200 ರೂ.ಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 55 ರಿಂದ 90 ರೂ.ಗೆ ಏರಿಕೆಯಾಗಿದೆ. ಪ್ರತಿ ಕುಟುಂಬವು ಖರ್ಚು ವೆಚ್ಚಗಳಿಗೆ ತೊಂದರೆ ಎದುರಿಸುತ್ತಿದೆ. ಈ ನಕಲಿ ಭರವಸೆಗಳನ್ನು ಇಂದು ಬಿಜೆಪಿ ಬಿಡುಗಡೆ ಮಾಡಿರುವುದನ್ನು ಈಗ ಯಾರೂ ನಂಬುವುದಿಲ್ಲ ಎಂದು  ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಮನೀಶ್ ತಿವಾರಿ, ಬಿಜೆಪಿಯ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹಣದುಬ್ಬರದ ಬಗ್ಗೆ ಗಮನ ಹರಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...