Homeಮುಖಪುಟನಿರುದ್ಯೋಗ, ಹಣದುಬ್ಬರದ ಬಗ್ಗೆ ಉಲ್ಲೇಖವಿಲ್ಲ: ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷಗಳ ನಾಯಕರು ಏನೇನು ಹೇಳಿದ್ರು?

ನಿರುದ್ಯೋಗ, ಹಣದುಬ್ಬರದ ಬಗ್ಗೆ ಉಲ್ಲೇಖವಿಲ್ಲ: ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷಗಳ ನಾಯಕರು ಏನೇನು ಹೇಳಿದ್ರು?

- Advertisement -
- Advertisement -

ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಬಗ್ಗೆ ವಿರೋಧ ಪಕ್ಷಗಳು ಭಾನುವಾರ  ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿಯ ಭರವಸೆಗಳು ಸುಳ್ಳಿನಿಂದ ತುಂಬಿಕೊಂಡಿದೆ ಮತ್ತು ವಿಶ್ವಾಸಾರ್ಹವಲ್ಲ ಎಂದು ಹೇಳಿದ್ದು, ಕೇಸರಿ ಪಕ್ಷವು ಪ್ರಣಾಳಿಕೆಯಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವನ್ನು ನಿರ್ಲಕ್ಷಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ.

ಪ್ರಣಾಳಿಕೆಯು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ವಿಶೇಷ ಗಮನವನ್ನು ಹರಿಸಿದೆ. ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ಜಾರಿಗೆ ತರಲು ಮತ್ತು ಏಕಕಾಲದಲ್ಲಿ ಚುನಾವಣೆಗಳನ್ನು(ಒಂದು ರಾಷ್ಟ್ರ, ಒಂದು ಚುನಾವಣೆ) ನಡೆಸುವುದಾಗಿ ಬಿಜೆಪಿಯು ಭರವಸೆ ನೀಡಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಣದುಬ್ಬರ ಮತ್ತು ನಿರುದ್ಯೋಗ ಬಿಜೆಪಿಯ ಪ್ರಣಾಳಿಕೆಯಿಂದ “ಕಾಣೆಯಾಗಿದೆ” ಎಂದು ಹೇಳಿದ್ದಾರೆ. ಜನರ ಜೀವನಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚಿಸಲು ಬಿಜೆಪಿ ಬಯಸುವುದಿಲ್ಲ. ಇಂಡಿಯಾ ಮೈತ್ರಿ ಕೂಟದ ಯೋಜನೆ ತುಂಬಾ ಸ್ಪಷ್ಟವಾಗಿದೆ. 30 ಲಕ್ಷ ಹುದ್ದೆಗಳಿಗೆ ನೇಮಕಾತಿ ಮತ್ತು ಪ್ರತಿ ವಿದ್ಯಾವಂತ ಯುವಕನಿಗೆ 1 ಲಕ್ಷ ರೂಪಾಯಿಗಳ ಶಾಶ್ವತ ಉದ್ಯೋಗ ನೀಡುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಬಾರಿ ಯುವಕರು ಪ್ರಧಾನಿ ಮೋದಿಯವರ ಬಲೆಗೆ ಬೀಳುವುದಿಲ್ಲ, ಅವರು ಈಗ ಕಾಂಗ್ರೆಸ್‌ನ ಕೈಗಳನ್ನು ಬಲಪಡಿಸುತ್ತಾರೆ ಮತ್ತು ದೇಶದಲ್ಲಿ ‘ಉದ್ಯೋಗ ಕ್ರಾಂತಿ’ಗೆ ನೆರವಾಗುತ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿಯ ಪ್ರಣಾಳಿಕೆಯು ಕೇವಲ ಬಾಯಿ ಮಾತಿಗೆ ಮಾತ್ರ ಅವರ ನಿಜವಾದ ಪ್ರಣಾಳಿಕೆ, ‘ಸಂವಿಧಾನ್ ಬದ್ಲೋ ಪತ್ರ’ (ಸಂವಿಧಾನದ ಬದಲಿಸುವ ಪ್ರಣಾಳಿಕೆ) ಎಂದು ಆರೋಪಿಸಿದರು. ನೆನಪಿಡಿ, ಬಿಜೆಪಿ ದೇಶ, ಸಮಾಜ, ಪ್ರಜಾಪ್ರಭುತ್ವದ ವಿರುದ್ಧ ಈ ಎಲ್ಲ ಷಡ್ಯಂತ್ರಗಳನ್ನು ತಳಮಟ್ಟದಿಂದ ಪ್ರಾರಂಭಿಸುತ್ತದೆ. ಆರಂಭದಲ್ಲಿ ಉನ್ನತ ನಾಯಕರು ಜನರ ಮುಂದೆ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸುತ್ತಾರೆ, ಆದರೆ ರಾತ್ರಿಯಲ್ಲಿ ಅವರು ಸಂವಿಧಾನವನ್ನು ನಾಶಮಾಡಲು ಸ್ಕ್ರಿಪ್ಟ್ ಬರೆಯುತ್ತಾರೆ. ಸಂಪೂರ್ಣ ಅಧಿಕಾರ ಸಿಕ್ಕ ನಂತರ ಸಂವಿಧಾನದ ಮೇಲೆ ದಾಳಿ ನಡೆಸುತ್ತಾರೆ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವು “ಭಾರತದ ಆತ್ಮ” ಎಂದು ಹೇಳಿದ ಪ್ರಿಯಾಂಕ ಗಾಂಧಿ ಬಿಜೆಪಿಯನ್ನು ಸೋಲಿಸಲು ಎಲ್ಲಾ ವಿರೋಧ ಪಕ್ಷಗಳು ಒಂದಾಗಬೇಕು ಎಂದು ಹೇಳಿದರು.

ಇಂದು ನಾವೆಲ್ಲರೂ ಒಗ್ಗೂಡಿ ಬಿಜೆಪಿಯ ಸಂವಿಧಾನ ಬದಲಾವಣೆ ಮಿಷನ್‌ನ್ನು ತಿರಸ್ಕರಿಸಬೇಕಾಗಿದೆ ಮತ್ತು ದೇಶವನ್ನು ಸಂವಿಧಾನದಿಂದ ನಡೆಸಲಾಗುವುದು ಮತ್ತು ಸಂವಿಧಾನವನ್ನು ಬದಲಾಯಿಸುವ ಉದ್ದೇಶ ಹೊಂದಿರುವವರನ್ನು ನಾವು ಒಟ್ಟಾಗಿ ಸೋಲಿಸುತ್ತೇವೆ ಎಂದು ಗಟ್ಟಿಯಾಗಿ ಹೇಳಬೇಕಾಗಿದೆ ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಅನುಕೂಲವಾಗುವ ಯಾವುದೇ ಕೆಲಸವನ್ನು ಅವರು ಮಾಡುತ್ತಿಲ್ಲ. ಬಿಜೆಪಿಯ ಪ್ರಣಾಳಿಕೆಯನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ನರೇಂದ್ರ ಮೋದಿ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದರು, ಅವರು ಎಂಎಸ್‌ಪಿ ಹೆಚ್ಚಿಸುವುದಾಗಿ ಮತ್ತು ಕಾನೂನುಬದ್ಧ ಗ್ಯಾರಂಟಿ ನೀಡುವುದಾಗಿ ಹೇಳಿದ್ದರು. ಅವರು ತಮ್ಮ ಅಧಿಕಾರಾದಲ್ಲಿದ್ದರೂ ಅಂತಹ ಯಾವುದೇ ದೊಡ್ಡ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯ ಪ್ರಣಾಳಿಕೆಗೆ ‘ಸಂಕಲ್ಪ ಪತ್ರ’  ಎಂದು ಹೆಸರಿಟ್ಟಿರುವುದಕ್ಕೆ ಕಾಂಗ್ರೆಸ್ ನಾಯಕ ಪವನ್ ಖೇರಾ ಆಕ್ಷೇಪವನ್ನು ವ್ಯಕ್ತಪಡಿಸಿದ್ದು, ಅದಕ್ಕೆ ‘ಮಾಫಿನಾಮಾ’  ಎಂದು ಹೆಸರಿಡಬೇಕು ಎಂದು ಹೇಳಿದ್ದಾರೆ.ದೇಶದ ದಲಿತರು, ರೈತರು, ಯುವಕರು ಮತ್ತು ಬುಡಕಟ್ಟು ಜನರಲ್ಲಿ ಮೋದಿಜಿ ಕ್ಷಮೆ ಕೇಳಬೇಕಿತ್ತು. ಕೇಸರಿ ಪಕ್ಷದ ಪ್ರಣಾಳಿಕೆಯು ವಿಶ್ವಾಸಾರ್ಹವಲ್ಲ. 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಬರೆದುಕೊಂಡಿದ್ದಾರೆ. ಆಗ ಎಲ್ಲಿರುತ್ತೀರಿ? 5 ವರ್ಷಗಳ ಖಾತೆ ಕೊಡಿ. ಅವರು ತುಂಬಾ ಸುಳ್ಳು ಹೇಳಿದ್ದಾರೆ, ಈಗ ಯಾರೂ ಅವರನ್ನು ನಂಬುವುದಿಲ್ಲ ಎಂದು ಖೇರಾ ಹೇಳಿದ್ದಾರೆ.

ಯುವಕರು ಉದ್ಯೋಗ ಹುಡುಕುತ್ತಿದ್ದಾರೆ, ಹಣದುಬ್ಬರ ಹೆಚ್ಚುತ್ತಿದೆ, ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಅವರು ಚಿಂತಿಸುವುದಿಲ್ಲ, 10 ವರ್ಷಗಳಲ್ಲಿ ಈ ವ್ಯಕ್ತಿಗೆ ಬಡವರಿಗಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ, ಅವರ ಪ್ರಣಾಳಿಕೆಯನ್ನು ನಂಬುವುದು ಸರಿಯಲ್ಲ ಎಂದು ಖೇರಾ ಹೇಳಿದ್ದಾರೆ.

ಬಿಜೆಪಿಯ ಪ್ರಣಾಳಿಕೆಯು ನಕಲಿ ಭರವಸೆಗಳ ದಾಖಲೆ ಮತ್ತು ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ  ಗಮನಹರಿಸಿಲ್ಲ ಎಂದು ದೆಹಲಿ ಸಚಿವೆ ಮತ್ತು ಎಎಪಿ ನಾಯಕ ಅತಿಶಿ ಹೇಳಿದ್ದಾರೆ. ನಿರುದ್ಯೋಗದಿಂದ ಜನರು ಕಂಗಾಲಾಗಿದ್ದಾರೆ. (ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆ 300 ರೂ.ನಿಂದ 1,200 ರೂ.ಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 55 ರಿಂದ 90 ರೂ.ಗೆ ಏರಿಕೆಯಾಗಿದೆ. ಪ್ರತಿ ಕುಟುಂಬವು ಖರ್ಚು ವೆಚ್ಚಗಳಿಗೆ ತೊಂದರೆ ಎದುರಿಸುತ್ತಿದೆ. ಈ ನಕಲಿ ಭರವಸೆಗಳನ್ನು ಇಂದು ಬಿಜೆಪಿ ಬಿಡುಗಡೆ ಮಾಡಿರುವುದನ್ನು ಈಗ ಯಾರೂ ನಂಬುವುದಿಲ್ಲ ಎಂದು  ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಮನೀಶ್ ತಿವಾರಿ, ಬಿಜೆಪಿಯ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹಣದುಬ್ಬರದ ಬಗ್ಗೆ ಗಮನ ಹರಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...