Homeಕರ್ನಾಟಕಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್, ಅದರ ನಾಯಕರಿಂದ: ಸಿಎಂ ಸಿದ್ದರಾಮಯ್ಯ

ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್, ಅದರ ನಾಯಕರಿಂದ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್ ಮತ್ತು ಅದರ ನಾಯಕರಿಂದ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಇತಿಹಾಸವನ್ನು ಮರೆಯಬಾರದೆಂದು ನಮಗೆ ಪಾಠ ಮಾಡಿದವರು ಇದೇ ಬಾಬಾಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಅಂಬೇಡ್ಕರ್ ಅವರು ಮತ್ತೆ ಹುಟ್ಟಿ ಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, “ಯಾವ ಆರ್‌ಎಸ್‌ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಹೇಳಬೇಕಾಗಿತ್ತು ಎಂದಿದ್ದಾರೆ.

“ಭಾರತ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ ಏನಂದ್ರೆ, ಅದರಲ್ಲಿ ಭಾರತೀಯತೆ ಎನ್ನುವುದೇ ಇಲ್ಲ ಪುರಾತನ ಭಾರತದ ಕಾನೂನು-ಕಟ್ಟಳೆಗಳಾಗಲಿ, ಸಂರಚನೆಗಳಾಗಲಿ, ನುಡಿಗಟ್ಟುಗಳಾಗಲಿ ಯಾವುದೂ ಇಲ್ಲ. ಸ್ಪಾರ್ತದ ಲೈಕುರ್ಗಸ್ ಅಥವಾ ಪರ್ಸಿಯಾದ ಸೊಲೊನ್ ಬರೆಯುವುದಕ್ಕು ಮೊದಲೇ ಮನು ಈ ನಿಯಮಗಳನ್ನು ಇಲ್ಲಿ ರಚಿಸಿದ್ದರು. ಇವತ್ತಿಗೂ ಮನುಸಂಸ್ಮೃತಿಯಲ್ಲಿ ಮನು ಉಲ್ಲೇಖಿಸಿರುವ ಕಾನೂನುಗಳು ಪ್ರಪಂಚದ ಗೌರವಕ್ಕೆ ಪಾತ್ರವಾಗಿವೆ ಮತ್ತು ಸ್ವಾಭಾವಿಕ ವಿಧೇಯತೆ ಮತ್ತು ಅನುಸರಣೆಯಲ್ಲಿವೆ. ಆದರೆ, ನಮ್ಮ ಸಂವಿಧಾನವನ್ನು ರಚಿಸಿದ ಪಂಡಿತರಿಗೆ ಇದ್ಯಾವುದೂ ಲೆಕ್ಕಕ್ಕಿಲ್ಲ – ಇದು ಆರ್‌ಎಸ್‌ಎಸ್ ಮುಖವಾಣಿಯಾದ “ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದ ಸಾಲುಗಳು” ಎಂದು ಸಿಎಂ ತಿಳಿಸಿದ್ದಾರೆ.

ನರೇಂದ್ರ ಮೋದಿಯವರೇ ಬಾಬಾಸಾಹೇಬ್ ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನಾ ಸಮಿತಿ ನೀಡಿದ ಕರಡು ಪ್ರತಿಯನ್ನು ನಮ್ಮ ದೇಶ ಅಂಗೀಕರಿಸಿದ್ದು 1949ರ ನವಂಬರ್ 26ರಂದು. ಅದಾಗಿ ಕೇವಲ ನಾಲ್ಕೇ ದಿನಕ್ಕೆ ಅಂದರೆ 1949ರ ನವಂಬರ್ 30ರಂದು ನಿಮ್ಮ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್ ಬರೆದಿರುವ ಈ ಸಂಪಾದಕೀಯದ ಬಗ್ಗೆ ಈಗಿನ ನಿಮ್ಮ ನಿಲುವು ಏನು? ಇದನ್ನು ಒಪ್ಪುತ್ತೀರಾ? ನಿರಾಕರಿಸುತ್ತೀರಾ?” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿ ತಂದು ಒಟ್ಟುಗೂಡಿಸಿದ ಕಂತೆಯಾಗಿದ್ದು, ಇದರಲ್ಲಿ ಹಲವಾರು ತೊಡಕುಗಳು ಮತ್ತು ಭಿನ್ನನಿಲುವುಗಳು ಎದ್ದು ಕಾಣುತ್ತವೆ. ನಮ್ಮದು ಅಂತ ಕರೆದುಕೊಳ್ಳುವ ಯಾವ ಭಾರತೀಯ ಅಂಶವೂ ಇದರಲ್ಲಿಲ್ಲ. ನಮ್ಮ ರಾಷ್ಟ್ರೀಯ ಕಾರ್ಯಯೋಜನೆ ಏನು ಮತ್ತು ನಮ್ಮ ಬದುಕಿನ ಮುಖ್ಯ ಧಾತುವೇನು ಎಂಬುದರ ಬಗ್ಗೆ ಇದರ ನಿರ್ದೇಶಕ ತತ್ವಗಳಲ್ಲಿ ಒಂದೇ ಒಂದು ಪದವಿದೆಯೇ? ಇಲ್ಲ!” ಎಂದು ಹೇಳಿದವರು ಗೋಳ್ವಾಲ್ಕರ್ ಅವರು ಎಂದು ಸಿಎಂ ನೆನಪಿಸಿದ್ದಾರೆ.

“ನರೇಂದ್ರ ಮೋದಿ ಅವರೇ, ನೀವು ಗುರೂಜಿ ಎಂದೇ ಗೌರವದಿಂದ ಕರೆಯುವ ಆರ್‌ಎಸ್‌ಎಸ್‌ನ ಎರಡನೇ ಸಂರಸಂಘ ಚಾಲಕರಾದ ಎಂ.ಎಸ್. ಗೋಳ್ವಾಲ್ಕರ್ ನಿಮ್ಮ ‘ಧರ್ಮ ಗ್ರಂಥ’ ವಾದ ಬಂಚ್ ಆಫ್ ಥಾಟ್ಸ್‌ನಲ್ಲಿ ವ್ಯಕ್ತಪಡಿಸಿರುವ ಈ ಅಭಿಪ್ರಾಯವನ್ನು ಇಲ್ಲಿಯವರೆಗೆ ನೀವು ನಿರಾಕರಿಸಿಲ್ಲ. ಈಗಲಾದರೂ ಹೇಳಿ ಈ ಅಭಿಪ್ರಾಯಕ್ಕೆ ನಿಮ್ಮ ಸಹಮತ ಇದೆಯೇ? ಭಿನ್ನಮತ ಇದೆಯೇ?” ಎಂದು ಸಿಎಂ ಕೇಳಿದ್ದಾರೆ.

“ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ – ಸಂಪ್ರದಾಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ. ಇವತ್ತಿಗೂ ಕೋಟ್ಯಂತರ ಹಿಂದೂಗಳು ತಮ್ಮ ಜೀವನ ಮತ್ತು ಆಚರಣೆಗಳಲ್ಲಿ ಅನುಸರಿಸುತ್ತಿರುವ ಕಟ್ಟಳೆಗಳಿಗೆ ಈ ಮನುಸ್ಮೃತಿಯೇ ಮೂಲವಾಗಿದೆ. ಇವತ್ತು ಮನುಸ್ಮೃತಿಯೇ ಹಿಂದೂ ಕಾನೂನು” ಎಂದು ಹೇಳಿದವರು ವಿನಾಯಕ ದಾಮೋದರ ಸಾವರ್ಕರ್ ದೆಹಲಿಯ ಪ್ರಭಾತ್ ಸಂಸ್ಥೆ ಹಿಂದಿಯಲ್ಲಿ ಪ್ರಕಟಿಸಿರುವ ಸಾವರ್ಕರ್ ಸಮಗ್ರ ಬರಹಗಳ ಪುಸ್ತಕದ ಸಂಪುಟ 4ರ 416ನೇ ಪುಟದಲ್ಲಿ ಸಂವಿಧಾನದ ಬಗೆಗಿನ ಸಾವರ್ಕರ್ ಅಭಿಪ್ರಾಯ ಇದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ನರೇಂದ್ರ ಮೋದಿಯವರೇ ನೀವು ಅಧಿಕಾರಕ್ಕೆ ಬಂದ ನಂತರ ನಿಮ್ಮ ಪಕ್ಷ ಮತ್ತು ಪರಿವಾರ ಸಾವರ್ಕರ್ ಅವರನ್ನು ಅಪ್ರತಿಮ ದೇಶಭಕ್ತರೆಂದು ಬಿಂಬಿಸುತ್ತಾ ಬಂದಿದ್ದೀರಿ. ಅವರು ಸಂವಿಧಾನದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಕೂಡಾ ನೀವು ಸಮರ್ಥಿಸಬಹುದು ಎಂದು ಭಾವಿಸಿದ್ದೇನೆ. ಆ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಾದರೆ ಅದನ್ನು ದೇಶದ ಮುಂದೆ ಹೇಳಿಬಿಡಿ” ಎಂದು ಸಿಎಂ ಸವಾಲ್ ಹಾಕಿದ್ದಾರೆ.

ಇದನ್ನೂ ಓದಿ : ಬಡವರಿಗೆ ವಸತಿ, ಶಿಕ್ಷಣ, ವೈದ್ಯಕೀಯ ಸೌಲಭ್ಯ ಸಿಗುವಂತಾಗುವುದೇ ನಿಜವಾದ ಅಭಿವೃದ್ಧಿ: ನ್ಯಾ. ಓಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...