Homeಕರ್ನಾಟಕಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್, ಅದರ ನಾಯಕರಿಂದ: ಸಿಎಂ ಸಿದ್ದರಾಮಯ್ಯ

ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್, ಅದರ ನಾಯಕರಿಂದ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್ ಮತ್ತು ಅದರ ನಾಯಕರಿಂದ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಇತಿಹಾಸವನ್ನು ಮರೆಯಬಾರದೆಂದು ನಮಗೆ ಪಾಠ ಮಾಡಿದವರು ಇದೇ ಬಾಬಾಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಅಂಬೇಡ್ಕರ್ ಅವರು ಮತ್ತೆ ಹುಟ್ಟಿ ಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, “ಯಾವ ಆರ್‌ಎಸ್‌ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಹೇಳಬೇಕಾಗಿತ್ತು ಎಂದಿದ್ದಾರೆ.

“ಭಾರತ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ ಏನಂದ್ರೆ, ಅದರಲ್ಲಿ ಭಾರತೀಯತೆ ಎನ್ನುವುದೇ ಇಲ್ಲ ಪುರಾತನ ಭಾರತದ ಕಾನೂನು-ಕಟ್ಟಳೆಗಳಾಗಲಿ, ಸಂರಚನೆಗಳಾಗಲಿ, ನುಡಿಗಟ್ಟುಗಳಾಗಲಿ ಯಾವುದೂ ಇಲ್ಲ. ಸ್ಪಾರ್ತದ ಲೈಕುರ್ಗಸ್ ಅಥವಾ ಪರ್ಸಿಯಾದ ಸೊಲೊನ್ ಬರೆಯುವುದಕ್ಕು ಮೊದಲೇ ಮನು ಈ ನಿಯಮಗಳನ್ನು ಇಲ್ಲಿ ರಚಿಸಿದ್ದರು. ಇವತ್ತಿಗೂ ಮನುಸಂಸ್ಮೃತಿಯಲ್ಲಿ ಮನು ಉಲ್ಲೇಖಿಸಿರುವ ಕಾನೂನುಗಳು ಪ್ರಪಂಚದ ಗೌರವಕ್ಕೆ ಪಾತ್ರವಾಗಿವೆ ಮತ್ತು ಸ್ವಾಭಾವಿಕ ವಿಧೇಯತೆ ಮತ್ತು ಅನುಸರಣೆಯಲ್ಲಿವೆ. ಆದರೆ, ನಮ್ಮ ಸಂವಿಧಾನವನ್ನು ರಚಿಸಿದ ಪಂಡಿತರಿಗೆ ಇದ್ಯಾವುದೂ ಲೆಕ್ಕಕ್ಕಿಲ್ಲ – ಇದು ಆರ್‌ಎಸ್‌ಎಸ್ ಮುಖವಾಣಿಯಾದ “ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದ ಸಾಲುಗಳು” ಎಂದು ಸಿಎಂ ತಿಳಿಸಿದ್ದಾರೆ.

ನರೇಂದ್ರ ಮೋದಿಯವರೇ ಬಾಬಾಸಾಹೇಬ್ ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನಾ ಸಮಿತಿ ನೀಡಿದ ಕರಡು ಪ್ರತಿಯನ್ನು ನಮ್ಮ ದೇಶ ಅಂಗೀಕರಿಸಿದ್ದು 1949ರ ನವಂಬರ್ 26ರಂದು. ಅದಾಗಿ ಕೇವಲ ನಾಲ್ಕೇ ದಿನಕ್ಕೆ ಅಂದರೆ 1949ರ ನವಂಬರ್ 30ರಂದು ನಿಮ್ಮ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್ ಬರೆದಿರುವ ಈ ಸಂಪಾದಕೀಯದ ಬಗ್ಗೆ ಈಗಿನ ನಿಮ್ಮ ನಿಲುವು ಏನು? ಇದನ್ನು ಒಪ್ಪುತ್ತೀರಾ? ನಿರಾಕರಿಸುತ್ತೀರಾ?” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿ ತಂದು ಒಟ್ಟುಗೂಡಿಸಿದ ಕಂತೆಯಾಗಿದ್ದು, ಇದರಲ್ಲಿ ಹಲವಾರು ತೊಡಕುಗಳು ಮತ್ತು ಭಿನ್ನನಿಲುವುಗಳು ಎದ್ದು ಕಾಣುತ್ತವೆ. ನಮ್ಮದು ಅಂತ ಕರೆದುಕೊಳ್ಳುವ ಯಾವ ಭಾರತೀಯ ಅಂಶವೂ ಇದರಲ್ಲಿಲ್ಲ. ನಮ್ಮ ರಾಷ್ಟ್ರೀಯ ಕಾರ್ಯಯೋಜನೆ ಏನು ಮತ್ತು ನಮ್ಮ ಬದುಕಿನ ಮುಖ್ಯ ಧಾತುವೇನು ಎಂಬುದರ ಬಗ್ಗೆ ಇದರ ನಿರ್ದೇಶಕ ತತ್ವಗಳಲ್ಲಿ ಒಂದೇ ಒಂದು ಪದವಿದೆಯೇ? ಇಲ್ಲ!” ಎಂದು ಹೇಳಿದವರು ಗೋಳ್ವಾಲ್ಕರ್ ಅವರು ಎಂದು ಸಿಎಂ ನೆನಪಿಸಿದ್ದಾರೆ.

“ನರೇಂದ್ರ ಮೋದಿ ಅವರೇ, ನೀವು ಗುರೂಜಿ ಎಂದೇ ಗೌರವದಿಂದ ಕರೆಯುವ ಆರ್‌ಎಸ್‌ಎಸ್‌ನ ಎರಡನೇ ಸಂರಸಂಘ ಚಾಲಕರಾದ ಎಂ.ಎಸ್. ಗೋಳ್ವಾಲ್ಕರ್ ನಿಮ್ಮ ‘ಧರ್ಮ ಗ್ರಂಥ’ ವಾದ ಬಂಚ್ ಆಫ್ ಥಾಟ್ಸ್‌ನಲ್ಲಿ ವ್ಯಕ್ತಪಡಿಸಿರುವ ಈ ಅಭಿಪ್ರಾಯವನ್ನು ಇಲ್ಲಿಯವರೆಗೆ ನೀವು ನಿರಾಕರಿಸಿಲ್ಲ. ಈಗಲಾದರೂ ಹೇಳಿ ಈ ಅಭಿಪ್ರಾಯಕ್ಕೆ ನಿಮ್ಮ ಸಹಮತ ಇದೆಯೇ? ಭಿನ್ನಮತ ಇದೆಯೇ?” ಎಂದು ಸಿಎಂ ಕೇಳಿದ್ದಾರೆ.

“ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ – ಸಂಪ್ರದಾಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ. ಇವತ್ತಿಗೂ ಕೋಟ್ಯಂತರ ಹಿಂದೂಗಳು ತಮ್ಮ ಜೀವನ ಮತ್ತು ಆಚರಣೆಗಳಲ್ಲಿ ಅನುಸರಿಸುತ್ತಿರುವ ಕಟ್ಟಳೆಗಳಿಗೆ ಈ ಮನುಸ್ಮೃತಿಯೇ ಮೂಲವಾಗಿದೆ. ಇವತ್ತು ಮನುಸ್ಮೃತಿಯೇ ಹಿಂದೂ ಕಾನೂನು” ಎಂದು ಹೇಳಿದವರು ವಿನಾಯಕ ದಾಮೋದರ ಸಾವರ್ಕರ್ ದೆಹಲಿಯ ಪ್ರಭಾತ್ ಸಂಸ್ಥೆ ಹಿಂದಿಯಲ್ಲಿ ಪ್ರಕಟಿಸಿರುವ ಸಾವರ್ಕರ್ ಸಮಗ್ರ ಬರಹಗಳ ಪುಸ್ತಕದ ಸಂಪುಟ 4ರ 416ನೇ ಪುಟದಲ್ಲಿ ಸಂವಿಧಾನದ ಬಗೆಗಿನ ಸಾವರ್ಕರ್ ಅಭಿಪ್ರಾಯ ಇದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ನರೇಂದ್ರ ಮೋದಿಯವರೇ ನೀವು ಅಧಿಕಾರಕ್ಕೆ ಬಂದ ನಂತರ ನಿಮ್ಮ ಪಕ್ಷ ಮತ್ತು ಪರಿವಾರ ಸಾವರ್ಕರ್ ಅವರನ್ನು ಅಪ್ರತಿಮ ದೇಶಭಕ್ತರೆಂದು ಬಿಂಬಿಸುತ್ತಾ ಬಂದಿದ್ದೀರಿ. ಅವರು ಸಂವಿಧಾನದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಕೂಡಾ ನೀವು ಸಮರ್ಥಿಸಬಹುದು ಎಂದು ಭಾವಿಸಿದ್ದೇನೆ. ಆ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಾದರೆ ಅದನ್ನು ದೇಶದ ಮುಂದೆ ಹೇಳಿಬಿಡಿ” ಎಂದು ಸಿಎಂ ಸವಾಲ್ ಹಾಕಿದ್ದಾರೆ.

ಇದನ್ನೂ ಓದಿ : ಬಡವರಿಗೆ ವಸತಿ, ಶಿಕ್ಷಣ, ವೈದ್ಯಕೀಯ ಸೌಲಭ್ಯ ಸಿಗುವಂತಾಗುವುದೇ ನಿಜವಾದ ಅಭಿವೃದ್ಧಿ: ನ್ಯಾ. ಓಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...