Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಪ್ರಕಟ: ಈಶಾನ್ಯ ದೆಹಲಿಯಿಂದ ಕಣಕ್ಕಿಳಿದ ಕನ್ಹಯ್ಯಾ ಕುಮಾರ್

ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಪ್ರಕಟ: ಈಶಾನ್ಯ ದೆಹಲಿಯಿಂದ ಕಣಕ್ಕಿಳಿದ ಕನ್ಹಯ್ಯಾ ಕುಮಾರ್

- Advertisement -
- Advertisement -

ಲೋಕಸಭೆ ಚುನಾವಣೆಗೆ ಹತ್ತು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದೆ. ಪಕ್ಷವು ಈಶಾನ್ಯ ದೆಹಲಿಯಿಂದ ಕನ್ಹಯ್ಯಾ ಕುಮಾರ್ ಮತ್ತು ಜಲಂಧರ್‌ನಿಂದ ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಕಣಕ್ಕಿಳಿಸಿದೆ.

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು) ದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಕನ್ಹಯ್ಯಾ ಕುಮಾರ್ (37) ಅವರು ಭೋಜ್‌ಪುರಿ ನಟ-ಗಾಯಕ ಮತ್ತು ಈಶಾನ್ಯ ದೆಹಲಿಯಿಂದ ಬಿಜೆಪಿ ಸಂಸದರಾಗಿರುವ ಮನೋಜ್ ತಿವಾರಿ ಅವರನ್ನು ಎದುರಿಸಲಿದ್ದಾರೆ. ಮೇ 25 ರಂದು ಮತದಾನ ನಡೆಯಲಿದೆ.

2019 ರ ಲೋಕಸಭೆ ಚುನಾವಣೆಯಲ್ಲಿ ಕನ್ಹಯ್ಯಾ ಕುಮಾರ್ ಅವರು ಬಿಹಾರದ ಬೇಗುಸರಾಯ್‌ನಿಂದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ ಅವರು ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ಗಿರಿರಾಜ್ ಸಿಂಗ್ ವಿರುದ್ಧ ಸೋತಿದ್ದರು. ನಂತರ ಅವರು 2021ರಲ್ಲಿ ಕಾಂಗ್ರೆಸ್ ಸೇರಿದರು.

ಮನೋಜ್ ತಿವಾರಿ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನು ಸೋಲಿಸಿದ ನಂತರ ಈಶಾನ್ಯ ದೆಹಲಿ ಕ್ಷೇತ್ರದಿಂದ ಬಿಜೆಪಿಯ ಎರಡು ಬಾರಿ ಸಂಸದರಾಗಿದ್ದಾರೆ.

ಪಕ್ಷದ ಹಿರಿಯ ನಾಯಕ ಜೈ ಪ್ರಕಾಶ್ ಅಗರ್ವಾಲ್ ಅನ್ನು ಚಾಂದಿನಿ ಚೌಕದಿಂದ ಕಾಂಗ್ರೆಸ್ ಕಣಕ್ಕಿಳಿಸಿದೆ. ಅಗರ್ವಾಲ್ ಅವರು ಎರಡು ಬಾರಿಯ ಸಂಸದ ಮತ್ತು ಮಾಜಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಬದಲಿಗೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (ಸಿಎಐಟಿ) ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಅವರನ್ನು ಎದುರಿಸಲಿದ್ದಾರೆ.

ಪಕ್ಷವು ಉದಿತ್ ರಾಜ್ ಅವರನ್ನು ವಾಯುವ್ಯ ದೆಹಲಿಯಿಂದ ಕಣಕ್ಕಿಳಿಸಿದೆ. ಬಿಜೆಪಿಯು ತನ್ನ ಹಾಲಿ ಸಂಸದ ಹನ್ಸ್ ರಾಜ್ ಹನ್ಸ್ ಬದಲಿಗೆ ಯೋಗೇಂದ್ರ ಚಂದೋಲಿಯಾ ಅವರಿಗೆ ಈ ಕ್ಷೇತ್ರದ ಟಿಕೆಟ್ ನೀಡಿದೆ.

ಪಂಜಾಬ್‌ನ ಅಮೃತಸರದಿಂದ ಬಿಜೆಪಿ ಅಭ್ಯರ್ಥಿ ಮತ್ತು ಯುಎಸ್‌ನ ಮಾಜಿ ರಾಯಭಾರಿ ತರಂಜಿತ್ ಸಿಂಗ್ ಸಂಧು ವಿರುದ್ಧ ಗುರ್ಜಿತ್ ಸಿಂಗ್ ಔಜ್ಲಾ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಪಕ್ಷದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಜಲಂಧರ್ ಎಸ್‌ಸಿಗೆ ಮೀಸಲು ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಇದಲ್ಲದೆ, ಫತೇಘರ್ ಸಾಹಿಬ್‌ನಿಂದ ಅಮರ್ ಸಿಂಗ್, ಬಟಿಂಡಾದಿಂದ ಜೀತ್ ಮೊಹಿಂದರ್ ಸಿಂಗ್ ಸಿಧು, ಸಂಗ್ರೂರ್‌ನಿಂದ ಸುಖಪಾಲ್ ಸಿಂಗ್ ಖೈರಾ ಮತ್ತು ಪಟಿಯಾಲದಿಂದ ಧರಂವೀರ್ ಗಾಂಧಿ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ.

ಉತ್ತರ ಪ್ರದೇಶದ ಅಲಹಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಉಜ್ವಲ್ ರೇವತಿ ರಮಣ್ ಸಿಂಗ್ ಅವರನ್ನು ಪಕ್ಷ ಘೋಷಿಸಿದೆ.

ಇದನ್ನೂ ಓದಿ : ಸರ್ವಾಧಿಕಾರ, ಪ್ರತಿ ಪಕ್ಷಗಳ ದಮನದ ಮೂಲಕ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ: ಅರ್ಥಶಾಸ್ತ್ರಜ್ಞ ಜೀನ್ ಡ್ರೆಝ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...