Homeಮುಖಪುಟಇಬ್ಬರು ಸ್ವಯಂ ಸೇವಕರ ಹತ್ಯೆ: ಮಣಿಪುರ, ದೆಹಲಿಯಲ್ಲಿ ಕುಕಿ-ಝೋ ಮಹಿಳೆಯರಿಂದ ಪ್ರತಿಭಟನೆ

ಇಬ್ಬರು ಸ್ವಯಂ ಸೇವಕರ ಹತ್ಯೆ: ಮಣಿಪುರ, ದೆಹಲಿಯಲ್ಲಿ ಕುಕಿ-ಝೋ ಮಹಿಳೆಯರಿಂದ ಪ್ರತಿಭಟನೆ

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ. ಚುನಾವಣೆ ಬಹಿಷ್ಕರಿಸಲು ನಿರ್ಧಾರ

- Advertisement -
- Advertisement -

ಶನಿವಾರ (ಏ.13) ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕುಕಿ ಸಮುದಾಯದ ಇಬ್ಬರು ‘ಗ್ರಾಮ ಸ್ವಯಂ ಸೇವಕರು’ ಕೊಲ್ಲಲ್ಪಟ್ಟಿದ್ದಾರೆ. ಇದನ್ನು ಖಂಡಿಸಿ ಮಣಿಪುರದ ಚುರಾಚಂದ್‌ಪುರ, ಕಾಂಗ್‌ಪೊಕ್ಪಿ ಜಿಲ್ಲೆಗಳಾದ್ಯಂತ ಮತ್ತು ನವ ದೆಹಲಿಯಲ್ಲಿ ಕುಕಿ-ಝೋ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿ ಎನ್‌ಸಿಆರ್‌ನಲ್ಲಿರುವ ಕುಕಿ ವಿದ್ಯಾರ್ಥಿಗಳ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಮಣಿಪುರಕ್ಕೆ ಭೇಟಿ ನೀಡಬೇಕು ಮತ್ತು ಸಂಘರ್ಷವನ್ನು ಶಮನಗೊಳಿಸುವುದಾಗಿ ಭರವಸೆ ನೀಡಬೇಕು ಎಂದು ಆಗ್ರಹಿಸಿದೆ.

ಮಣಿಪುರದಲ್ಲಿ ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇದು ಕಾಂಗ್‌ಪೋಕ್ಪಿ ಮತ್ತು ಚುರಾಚಂದ್‌ಪುರದಲ್ಲಿ ಕುಕಿ-ಝೋ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಜನಾಕ್ರೋಶವಿರುವ ಕಾರಣ ರಾಜಕೀಯ ಪಕ್ಷಗಳು ಬೀದಿಗಿಳಿದು ಚುನಾವಣಾ ಪ್ರಚಾರ ನಡೆಸಲು ಹೆದರುತ್ತಿವೆ. ರಹಸ್ಯ ಮಾರ್ಗಗಳ ಮೂಲಕ ಮತದಾರರನ್ನು ಓಲೈಸುವ ಪ್ರಯತ್ನ ಮಾಡುತ್ತಿವೆ. ಈ ಕಾರಣದಿಂದ ಮಣಿಪುರದಲ್ಲಿ ಈ ಬಾರಿ ಚುನಾವಣೆಯ ಉತ್ಸಾಹ ಕಾಣುತ್ತಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಒಂದು ಬಾರಿಯೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಇದೀಗ ಚುನಾವಣೆ ಬರುವಾಗ ಗೃಹ ಸಚಿವ ಅಮಿತ್ ಶಾ ಅವರು ಪ್ರಚಾರಕ್ಕಾಗಿ ಇಂಫಾಲಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿತ್ತು. ಈ ನಡುವೆ ಹಿಂಸಾಚಾರ ಮತ್ತು ಪ್ರತಿಭಟನೆಗಳು ಭುಗಿಲೆದ್ದಿವೆ.

ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ಔಟರ್ ಮಣಿಪುರದ ಮಾಜಿ ಸಂಸದೆ ಕಿಮ್ ಗ್ಯಾಂಗ್ಟೆ ಮತ್ತು ದೆಹಲಿಯ ಕುಕಿ-ಝೋಮಿ ಮಹಿಳಾ ವೇದಿಕೆಯ ಮುಖಂಡರು ಸೇರಿದಂತೆ ಕುಕಿ-ಝೋ ಮಹಿಳೆಯರ ಗುಂಪು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು “ಗ್ಲೋಬಲ್ ಕುಕಿ-ಝೋಮಿ-ಹ್ಮಾರ್ ಮಹಿಳಾ ಸಮುದಾಯ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

“ಈ ಬಾರಿಯ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಮೂಲಕ ಸಾಂವಿಧಾನಿಕ ಮತ್ತು ಕಾನೂನುಬದ್ಧ ನಮ್ಮ ಹಕ್ಕನ್ನು ಚಲಾಯಿಸುತ್ತಿಲ್ಲ ಎಂದು ಭಾರವಾದ ಮನಸ್ಸಿನಿಂದ ತಿಳಿಸುತ್ತಿದ್ದೇವೆ. ಈ ನಿರ್ಧಾರ ಸುಮ್ಮನೆ ತೆಗೆದುಕೊಂಡಿಲ್ಲ. ಪ್ರಸ್ತುತ ಇರುವ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಿಂದ ನಾವು ನಂಬಿಕೆ ಕಳೆದುಕೊಂಡಿದ್ದೇವೆ ಮತ್ತು ಭ್ರಮನಿರಸನಗೊಂಡಿದ್ದೇವೆ” ಎಂದು ಕುಕಿ-ಝೋಮಿ ಮಹಿಳಾ ವೇದಿಕೆ ಸದಸ್ಯರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಚುರಾಚಂದ್‌ಪುರದ ಮೋಟ್‌ಬಂಗ್ ಪ್ರದೇಶದಲ್ಲಿ ಕುಕಿ-ಝೋ ನಾಗರಿಕ ಸಮಾಜ ಸಂಘಟನೆಗಳು ಮತ್ತು ಬುಡಕಟ್ಟು ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆ ನಡೆಸಿವೆ. ಅಲ್ಲಿ ಸಾವಿರಾರು ಜನರು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು, ತಮ್ಮ ಇಬ್ಬರು ಗ್ರಾಮ ಸ್ವಯಂ ಸೇವಕರ ಅಮಾನವೀಯ ಹತ್ಯೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಡಕಟ್ಟು ಏಕತಾ ಸಮಿತಿಯು ಕಾಂಗ್‌ಪೋಕ್ಪಿ ಜಿಲ್ಲೆಯಾದ್ಯಂತ ಒಂದು ದಿನದ ಬಂದ್‌ಗೆ ಕರೆ ನೀಡಿದೆ. ಚುರಾಚಂದ್‌ಪುರದ ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) ಜಿಲ್ಲೆಯ ಡಿಸಿ ಕಚೇರಿ ಎದುರಿನ ಆಟದ ಮೈದಾನದಲ್ಲಿರುವ ‘ಸ್ಮರಣೆಯ ಗೋಡೆ’ (Wall of Remembrance) ಬಳಿ ಮೇಣದಬತ್ತಿ ಹೊತ್ತಸಿ ಆಹೋರಾತ್ರಿ ಪ್ರತಿಭಟನೆ ನಡೆಸಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ, ಕೆಎಸ್‌ಒದ ದೆಹಲಿ ಎನ್‌ಸಿಆರ್ ಘಟಕ ಮತ್ತು ದೆಹಲಿಯ ಕುಕಿ-ಝೋ ಮಹಿಳಾ ವೇದಿಕೆ ಭಾನುವಾರ ಬೆಳಿಗ್ಗೆ ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ನೂರಾರು ಜನರು ಮಣಿಪುರದ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ‘ಬೀರೆನ್‌ ಸಿಂಗ್ ಬಹು ಜನಾಂಗೀಯ ರಾಜ್ಯವನ್ನು ಮುನ್ನಡೆಸಲು ಅಸಮರ್ಥರು’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ ಡಿಸಿಪಿ ದೇವೇಶ್ ಕುಮಾರ್ ಅವರು, “ಮಣಿಪುರದ ಕೇವಲ 10-15 ಮಂದಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಜಮಾಯಿಸಿದ್ದರು. ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವರಿಗೆ ಪೂರ್ವಾನುಮತಿ ಇಲ್ಲದ ಕಾರಣ, ಮೈದಾನದಿಂದ ಹೊರ ಹೋಗಿ ಪ್ರತಿಭಟನೆಗೆ ಅನುಮತಿ ಪಡೆಯುವಂತೆ ಅವರಿಗೆ ತಿಳಿಸಲಾಯಿತು. ಎಲ್ಲಾ ಪ್ರತಿಭಟನಾಕಾರರು ಸ್ಥಳದಿಂದ ತೆರಳಿದರು” ಎಂದು ಹೇಳಿದ್ದಾರೆ.

ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನೂರಾರು ಜನರು ಕಪ್ಪು ಬಟ್ಟೆ ಧರಿಸಿ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿರುವುದು ಕಾಣಬಹುದು.

ಒಟ್ಟಿನಲ್ಲಿ, ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಸಮುದಾಯದ ಇಬ್ಬರು ಸ್ವಯಂ ಸೇವಕರನ್ನು ಶನಿವಾರ ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅದನ್ನು ಖಂಡಿಸಿ ಮಣಿಪುರದ ಕಾಂಗ್‌ಪೋಕ್ಪಿ ಮತ್ತು ಚುರಾಚಂದ್‌ಪುರ ಜಿಲ್ಲೆಗಳಲ್ಲಿ ಮತ್ತು ದೆಹಲಿಯಲ್ಲಿ ಪ್ರತಿಭಟನೆಗಳು ನಡೆದಿವೆ. ಆದರೆ, ಈ ವಿಚಾರ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿಲ್ಲ.

ಇದನ್ನೂ ಓದಿ : ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಪ್ರಕಟ: ಈಶಾನ್ಯ ದೆಹಲಿಯಿಂದ ಕಣಕ್ಕಿಳಿದ ಕನ್ಹಯ್ಯಾ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...