HomeUncategorizedFact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು...

Fact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿಂ ಅಸ್ಲಂ: ಸ್ವಚ್ಚ ಇರುವವರು, ನಾವು ಅವರ ಅಂಗಡಿಯಿಂದ ಸಿಹಿ ತಿನಿಸು ಖರೀದಿಸಬಹುದು.”
“ಹಿಂದೂ ಅಪ್ಪನ್ : ಸ್ವಚ್ಚ ಇಲ್ಲದಿರುವವರು, ಇವರಿಂದ ಯಾರೂ ಕೂಡ ಸಿಹಿ ತಿನಿಸು ಖರೀದಿಸಬಾರದು.”

“ಮುಸ್ಲಿಂ ಆದಿಲ್: ಸ್ವಚ್ಚವಾಗಿರುವವರು, ಮತ್ತು ಒಳ್ಳೆಯ ಗುಣ ನಡತೆ ಹೊಂದಿರುವವರು”
“ಹಿಂದೂ ಅಭಿಮನ್ಯು : ಸ್ವಚ್ಚ ಇಲ್ಲದಿರುವವರು, ಅವರು ಸ್ನಾನ ಮಾಡಲ್ಲ, ಕೆಟ್ಟ ವಾಸನೆ ಬರುತ್ತಾರೆ.”

“ಇದು ಕೇರಳದ ಶಾಲೆಗಳಲ್ಲಿ ಮಕ್ಕಳಿಗೆ ಮಾಡುವ ಪಾಠ. ಇದು ಕಮ್ಯುನಿಷ್ಠರು ಸಣ್ಣ ಮಕ್ಕಳನ್ನು ಬ್ರೈನ್ ವಾಶ್ ಮಾಡುವ ರೀತಿ” ಎಂದು ಪ್ರತಿಪಾದಿಸಿ ಮಿ.ಸಿನ್ಹ (ಮೋದಿ ಫ್ಯಾಮಿಲಿ) ಎಂಬ ಎಕ್ಸ್ ಬಳಕೆದಾರ ಪುಸ್ತಕವೊಂದರ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೇರಳದ ಸರ್ಕಾರ ಅಧಿಕೃತವಾಗಿ ಶಾಲಾ ಮಕ್ಕಳಿಗೆ ವಿತರಿಸಿದ ಪಾಠ ಪುಸ್ತಕಗಳಲ್ಲಿ ಈ ರೀತಿಯಿದೆ ಎಂಬರ್ಥದಲ್ಲಿ ಸಿನ್ಹ ಸುದ್ದಿ ಹಬ್ಬಿಸಿದ್ದಾರೆ.

ಫ್ಯಾಕ್ಟ್‌ ಚೆಕ್ : ಎಕ್ಸ್ ಪೋಸ್ಟ್‌ನಲ್ಲಿರುವ ಹೇಳಿರುವ ವಿಷಯದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದಾಗ, ಇದು ಕೇರಳದ ಪೀಸ್ ಇಂಟರ್ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಗಳ ಪಠ್ಯ ಪುಸ್ತಕದ ಫೋಟೋ ಎಂದು ಗೊತ್ತಾಗಿದೆ.

ಕೇರಳದ ಎರ್ನಾಕುಲಂ ಕೆಂದ್ರವಾಗಿ ಕಾರ್ಯಾಚರಿಸುತ್ತಿದ್ದ ‘ಪೀಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌’ ರಾಜ್ಯಾದ್ಯಂತ ಪೀಸ್ ಇಂಟರ್ನ್ಯಾಷನಲ್ ಎಂಬ ಹೆಸರಿನ ಹಲವು ಶಾಲೆಗಳನ್ನು ನಡೆಸುತ್ತಿತ್ತು.

ಅಕ್ಟೋಬರ್ 8, 2016 ರಂದು ಮಲಯಾಳಂ ಸುದ್ದಿ ವೆಬ್‌ಸೈಟ್‌ ‘ಆನ್ ಮನೋರಮಾ‘ದಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಾವು ಮೇಲೆ ಉಲ್ಲೇಖಿಸಿದ ಆಕ್ಷೇಪಾರ್ಹ ವಿಷಯವನ್ನು ಬೋಧಿಸಿದ್ದಕ್ಕಾಗಿ ಪೀಸ್ ಎಜುಕೇಷನಲ್ ಫೌಂಡೇಶನ್ ನಡೆಸುತ್ತಿದ್ದ ಎರ್ನಾಕುಲಂನ ತಮ್ಮನಮ್‌ಲ್ಲಿದ್ದ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 4, 2018 ರಂದು ‘ಮಾತೃಭೂಮಿ‘ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿ ಪ್ರಕಾರ, ಪಠ್ಯ ಪುಸ್ತಕದಲ್ಲಿ ಆಕ್ಷೇಪಾರ್ಹ ಮತ್ತು ಜಾತ್ಯತೀತವಲ್ಲದ ವಿಷಯ ಪ್ರಕಟಿಸಿ, ಬೋಧಿಸಿದ ಎರ್ನಾಕುಲಂನ ಪೀಸ್ ಇಂಟರ್‌ನ್ಯಾಷನಲ್ ಸ್ಕೂಲ್ ಅನ್ನು ಮುಚ್ಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ 

ಕೋಮು ವಿಷಯಗಳನ್ನು ಕಲಿಸಿದ್ದಕ್ಕಾಗಿ ಎರ್ನಾಕುಲಂನ ವಿವಾದಾತ್ಮಕ ಪೀಸ್ ಇಂಟರ್ನ್ಯಾಷನಲ್ ಶಾಲೆಯನ್ನು ಮುಚ್ಚಲು ಕೇರಳ ಸರ್ಕಾರ 2018ರ ಜನವರಿಯಲ್ಲಿ ಆದೇಶಿಸಿತ್ತು. ಎರ್ನಾಕುಲಂ ಶಾಖೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ಸ್ಥಳಾಂತರಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಸುವ ಪಠ್ಯಕ್ರಮದ ಭಾಗವಾಗಿರುವ ಆಕ್ಷೇಪಾರ್ಹ ವಿಷಯಗಳೊಂದಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿದ್ದಕ್ಕಾಗಿ ಕೊಚ್ಚಿ ನಗರ ಪೊಲೀಸರು ಡಿಸೆಂಬರ್ 3, 2016 ರಂದು ಮುಂಬೈ ಮೂಲದ ಮೂವರು ಪ್ರಕಾಶಕರನ್ನು ಬಂಧಿಸಿದ್ದರು ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಹೇಳಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಎಕ್ಸ್ ಬಳಕೆದಾರ ಸಿನ್ಹ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಕೇರಳದ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಅವರು ” ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ. “ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ. ಇದು ರಾಜ್ಯದ ವಿರುದ್ಧ ದ್ವೇಷ ಹರಡುವ ಮತ್ತೊಂದು ಪ್ರಯತ್ನವಾಗಿದೆ. ನಮ್ಮ ಪರಿಚಯವಿರುವವರಿಗೆ ಕೇರಳಿಗರ ನಡುವಿನ ಸೌಹಾರ್ದತೆ ಮತ್ತು ಏಕತೆ ಅರ್ಥವಾಗುತ್ತದೆ. ದ್ವೇಷಕ್ಕೆ ಅವಕಾಶವಿಲ್ಲ, ಕೋಮುವಾದಿ ಕಾರ್ಯಸೂಚಿ ರಾಜ್ಯದಲ್ಲಿ ಬೇರೂರಲು ಏಕೆ ವಿಫಲವಾಗಿದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೇನೆಂದರೆ, ಎಕ್ಸ್ ಬಳಕೆದಾರ ಸಿನ್ಹ ಹಂಚಿಕೊಂಡ ಶಾಲಾ ಪಠ್ಯ ಪುಸ್ತಕದ ಫೋಟೋ ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿದ ಅಥವಾ ವಿತರಿಸಿದ ಪುಸ್ತಕದ್ದಲ್ಲ. ಇದು ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ವಿತರಿಸಿದ್ದ ಪುಸ್ತಕ. ಆ ಶಾಲೆಯನ್ನು ಮುಚ್ಚಲು ಕಮ್ಯುನಿಷ್ಠ್ ಪಕ್ಷದ ನೇತೃತ್ವದ ಕೇರಳ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2018ರ ಜನವರಿಯಲ್ಲಿ ಆದೇಶಿಸಿದ್ದರು.

ಹಲವು ಆರೋಪಗಳು ಕೇಳಿ ಬಂದ ಬಳಿಕ ಕೇರಳದ ಎಲ್ಲಾ ಪೀಸ್ ಇಂಟರ್ನ್ಯಾಷನಲ್ ಶಾಲೆಗಳನ್ನು ಮುಚ್ಚಲಾಗಿದೆ ಎಂಬ ವರದಿಗಳಿವೆ. ಈ ಬಗ್ಗೆ ಖಚಿತ ಮಾಹಿತಿ ನಮಗೆ ಲಭ್ಯವಾಗಿಲ್ಲ. ಈ ಪೀಸ್ ಇಂಟರ್ನ್ಯಾಷನಲ್ ಶಾಲೆಗಳ ಮಾಲೀಕ ಎಂ.ಎಂ ಅಕ್ಬರ್. ಈ ವ್ಯಕ್ತಿಯನ್ನು ಕೇರಳದ ಝಾಕಿರ್ ನಾಯ್ಕ್ ಎಂದೇ ಹೇಳಲಾಗುತ್ತದೆ. ಇಸ್ಲಾಮಿಕ್ ವಿದ್ವಾಂಸ ಎಂದು ಗುರುತಿಸಿಕೊಂಡಿದ್ದ ಝಾಕಿರ್ ನಾಯ್ಕ್‌ ಪ್ರಸ್ತುತ ಹೊರ ದೇಶದಲ್ಲಿದ್ದಾರೆ. ಝಾಕಿರ್ ನಾಯ್ಕ್ ಮತ್ತು ಎಂ.ಎಂ ಅಕ್ಬರ್ ಇಬ್ಬರೂ ಕೂಡ ಇಸ್ಲಾಮಿನ ನೂತನವಾದಿ ಪಂಗಡ ಎಂದು ಗುರುತಿಸಲಾಗಿರುವ ಸಲಫಿ ಸಿದ್ದಾಂತದ ಬೋಧಕರಾಗಿದ್ದಾರೆ. ಇವರ ವಾದಗಳನ್ನು ಸುನ್ನೀ ಪಂಥದ ಮುಸ್ಲಿಮರು ಕಟುವಾಗಿ ವಿರೋಧಿಸುತ್ತಾರೆ. ಝಾಕಿರ್ ನಾಯ್ಕ್‌ ಕೂಡ ಪೀಸ್ ಹೆಸರಿನ ಸಂಸ್ಥೆಗಳನ್ನು ನಡೆಸುತ್ತಿದ್ದರು. ಅವುಗಳ ಮೇಲೆಯೂ ಹಲವು ಆರೋಪಗಳು ಕೇಳಿ ಬಂದಿತ್ತು.

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...