Homeಅಂತರಾಷ್ಟ್ರೀಯಇಸ್ರೇಲ್‌-ಗಾಝಾ ಯುದ್ಧದ ವೇಳೆ ಅತ್ಯಧಿಕ ಪತ್ರಕರ್ತರ ಹತ್ಯೆ: ಸಿಪಿಜೆ ವರದಿ

ಇಸ್ರೇಲ್‌-ಗಾಝಾ ಯುದ್ಧದ ವೇಳೆ ಅತ್ಯಧಿಕ ಪತ್ರಕರ್ತರ ಹತ್ಯೆ: ಸಿಪಿಜೆ ವರದಿ

- Advertisement -
- Advertisement -

2023ರಲ್ಲಿ ವಿಶ್ವದಾದ್ಯಂತ ಕೊಲ್ಲಲ್ಪಟ್ಟ 99 ಪತ್ರಕರ್ತರು ಮತ್ತು ಮಾದ್ಯಮ ಕಾರ್ಯಕರ್ತರಲ್ಲಿ ಮುಕ್ಕಾಲು ಭಾಗದಷ್ಟು ಜನರು ಇಸ್ರೇಲ್-ಗಾಝಾ ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರನ್ನು ರಕ್ಷಿಸುವ ಸಮಿತಿ (ಸಿಪಿಜೆ) ತಿಳಿಸಿದ್ದು, ಇಸ್ರೇಲ್‌ ಗಾಝಾದಲ್ಲಿ ನಡೆಸಿರುವ ಹತ್ಯಾಕಾಂಡದಲ್ಲಿ ಪತ್ರಕರ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸಂತ್ರಸ್ತರಾಗಿದ್ದಾರೆ ಎಂಬವುದನ್ನು ವರದಿಯು ಬಹಿರಂಗಪಡಿಸಿದೆ.

ಇದಲ್ಲದೆ 2023ರ ಇಡೀ ವರ್ಷದಲ್ಲಿ ಹತ್ಯೆಗೀಡಾದ ಪತ್ರಕರ್ತರಿಗಿಂತ ಮೂರು ತಿಂಗಳಲ್ಲಿ ಸಂಘರ್ಷವು ಗಾಝಾದಲ್ಲಿ ಹೆಚ್ಚು ಪತ್ರಕರ್ತರನ್ನು ಬಲಿ ತೆಗೆದುಕೊಂಡಿದೆ ಎಂದು CPJ ವರದಿ ಹೇಳಿದೆ. ಗಾಝಾದಲ್ಲಿ ನಾಗರಿಕರಲ್ಲದೆ ಅನೇಕ ಪತ್ರಕರ್ತರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲಲಾಯಿತು, ಆದರೆ ಇಸ್ರೇಲ್‌ ಮಿಲಿಟರಿ ಅಧಿಕಾರಿಗಳು ಪತ್ರಕರ್ತರನ್ನು ಗುರಿಯಾಗಿಸಿಕೊಂಡಿರುವುದನ್ನು ನಿರಾಕರಿಸಿದ್ದಾರೆ ಮತ್ತು ಪತ್ರಕರ್ತರ ಹತ್ಯೆಗಳ ಬಗ್ಗೆ ಪ್ರಶ್ನಿಸಿದಾಗ ಅಲ್ಪ ಮಾಹಿತಿಯನ್ನು ಮಾತ್ರ ನೀಡಿದ್ದಾರೆ ಎಂದು ಹೇಳಿದ್ದಾರೆ.

1997ರಿಂದ 2023ರವರೆಗೆ ಪತ್ರಕರ್ತರ ಹತ್ಯೆಗಳು ವರದಿಯಾದ ದೇಶಗಳಲ್ಲಿ ಭಾರತವು ಸೇರಿದೆ. ಪಟ್ಟಿಯಲ್ಲಿರುವ ಇತರ ದೇಶಗಳಲ್ಲಿ ಇರಾಕ್, ಫಿಲಿಪೈನ್ಸ್, ಮೆಕ್ಸಿಕೊ, ಪಾಕಿಸ್ತಾನ ಮತ್ತು ಸೊಮಾಲಿಯಾ ಸೇರಿವೆ ಎಂದು ವರದಿ ಉಲ್ಲೇಖಿಸಿದೆ.

2023ರ ಜಾಗತಿಕವಾಗಿ ಪತ್ರಕರ್ತರ ಒಟ್ಟು ಸಾವಿನ ಅಂಕಿ-ಅಂಶಗಳು 2015ರಿಂದ ಅತ್ಯಧಿಕವಾಗಿದೆ ಮತ್ತು 2022ರಿಂದ ಸುಮಾರು 44% ಏರಿಕೆಯಾಗಿದೆ. ವರದಿಯ ಪ್ರಕಾರ, ಈ ಸಾವುಗಳು ಪತ್ರಕರ್ತರ ಕರ್ತವ್ಯಕ್ಕೆ ಸಂಬಂಧಿಸಿದೆ, ಪ್ರಸ್ತುತ 8 ಹೆಚ್ಚುವರಿ ಪ್ರಕರಣಗಳು ತನಿಖೆಯಲ್ಲಿವೆ ಎಂದು ವರದಿ ಉಲ್ಲೇಖಿಸಿದೆ.

ಗಾಝಾ, ಇಸ್ರೇಲ್ ಮತ್ತು ಲೆಬನಾನ್‌ನಲ್ಲಿನ ಸಾವುಗಳನ್ನು ಹೊರತುಪಡಿಸಿದರೆ, 2022ಕ್ಕೆ ಹೋಲಿಸಿದರೆ ಪತ್ರಕರ್ತರ ಹತ್ಯೆಗಳು ಗಮನಾರ್ಹವಾಗಿ ಕಡಿಮೆಯಾಗಿದೆ. 2022ರಲ್ಲಿ CPJ ಒಟ್ಟು 69 ಸಾವುಗಳನ್ನು ಪತ್ತೆಹಚ್ಚಿದೆ. ಅದರಲ್ಲಿ 43 ವೃತ್ತಿಗೆ ಸಂಬಂಧಿಸಿದ ಹತ್ಯೆ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ.

ಆದರೆ, ಇಳಿಮುಖವಾಗುತ್ತಿರುವ ಪತ್ರಕರ್ತರ ಸಾವಿನ ಸಂಖ್ಯೆಯು ಪ್ರಪಂಚದ ಇತರ ಭಾಗಗಳಲ್ಲಿ ಪತ್ರಿಕೋದ್ಯಮವು ಸುರಕ್ಷಿತವಾಗಿದೆ ಎಂಬುವುದರ ಸೂಚನೆಯಲ್ಲ. ವಾಸ್ತವವಾಗಿ ಪತ್ರಕರ್ತರ ವಾರ್ಷಿಕ ಜೈಲು ಜನಗಣತಿ, ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಗಳ ಬಗೆಗಿನ ಪ್ರಮುಖ ಸೂಚಕ 2022ರ ದಾಖಲೆಯ ಗರಿಷ್ಠ ಮಟ್ಟಕ್ಕೆ ಹತ್ತಿರದಲ್ಲಿದೆ ಎಂದು ವರದಿಯು ತಿಳಿಸಿದೆ.

ಏಷ್ಯಾದಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಪತ್ರಕರ್ತರು ಜೈಲಿನಲ್ಲಿದ್ದಾರೆ ಎಂದು ವರದಿಯು ತಿಳಿಸಿದೆ. ಸಿಪಿಜೆ 2023ರ ಜೈಲು ಜನಗಣತಿಯಲ್ಲಿ ಭಾರತದಲ್ಲಿ 7 ಪತ್ರಕರ್ತರನ್ನು ಮೌನಗೊಳಿಸಲು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ (UAPA) ಮತ್ತು ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯಿದೆಗಳನ್ನು ಬಳಸಲಾಗಿದೆ ಎಂದು ಸೂಚಿಸುತ್ತದೆ.

ಇದನ್ನು ಓದಿ: ರಾರಾಜಿಸಿದ ಮೋದಿ: ನಿರಾಶೆಗೊಳಿಸಿದ ಬಿಜೆಪಿ ಪ್ರಣಾಳಿಕೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...