Homeಅಂತರಾಷ್ಟ್ರೀಯಇಸ್ರೇಲ್‌-ಗಾಝಾ ಯುದ್ಧದ ವೇಳೆ ಅತ್ಯಧಿಕ ಪತ್ರಕರ್ತರ ಹತ್ಯೆ: ಸಿಪಿಜೆ ವರದಿ

ಇಸ್ರೇಲ್‌-ಗಾಝಾ ಯುದ್ಧದ ವೇಳೆ ಅತ್ಯಧಿಕ ಪತ್ರಕರ್ತರ ಹತ್ಯೆ: ಸಿಪಿಜೆ ವರದಿ

- Advertisement -
- Advertisement -

2023ರಲ್ಲಿ ವಿಶ್ವದಾದ್ಯಂತ ಕೊಲ್ಲಲ್ಪಟ್ಟ 99 ಪತ್ರಕರ್ತರು ಮತ್ತು ಮಾದ್ಯಮ ಕಾರ್ಯಕರ್ತರಲ್ಲಿ ಮುಕ್ಕಾಲು ಭಾಗದಷ್ಟು ಜನರು ಇಸ್ರೇಲ್-ಗಾಝಾ ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರನ್ನು ರಕ್ಷಿಸುವ ಸಮಿತಿ (ಸಿಪಿಜೆ) ತಿಳಿಸಿದ್ದು, ಇಸ್ರೇಲ್‌ ಗಾಝಾದಲ್ಲಿ ನಡೆಸಿರುವ ಹತ್ಯಾಕಾಂಡದಲ್ಲಿ ಪತ್ರಕರ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸಂತ್ರಸ್ತರಾಗಿದ್ದಾರೆ ಎಂಬವುದನ್ನು ವರದಿಯು ಬಹಿರಂಗಪಡಿಸಿದೆ.

ಇದಲ್ಲದೆ 2023ರ ಇಡೀ ವರ್ಷದಲ್ಲಿ ಹತ್ಯೆಗೀಡಾದ ಪತ್ರಕರ್ತರಿಗಿಂತ ಮೂರು ತಿಂಗಳಲ್ಲಿ ಸಂಘರ್ಷವು ಗಾಝಾದಲ್ಲಿ ಹೆಚ್ಚು ಪತ್ರಕರ್ತರನ್ನು ಬಲಿ ತೆಗೆದುಕೊಂಡಿದೆ ಎಂದು CPJ ವರದಿ ಹೇಳಿದೆ. ಗಾಝಾದಲ್ಲಿ ನಾಗರಿಕರಲ್ಲದೆ ಅನೇಕ ಪತ್ರಕರ್ತರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲಲಾಯಿತು, ಆದರೆ ಇಸ್ರೇಲ್‌ ಮಿಲಿಟರಿ ಅಧಿಕಾರಿಗಳು ಪತ್ರಕರ್ತರನ್ನು ಗುರಿಯಾಗಿಸಿಕೊಂಡಿರುವುದನ್ನು ನಿರಾಕರಿಸಿದ್ದಾರೆ ಮತ್ತು ಪತ್ರಕರ್ತರ ಹತ್ಯೆಗಳ ಬಗ್ಗೆ ಪ್ರಶ್ನಿಸಿದಾಗ ಅಲ್ಪ ಮಾಹಿತಿಯನ್ನು ಮಾತ್ರ ನೀಡಿದ್ದಾರೆ ಎಂದು ಹೇಳಿದ್ದಾರೆ.

1997ರಿಂದ 2023ರವರೆಗೆ ಪತ್ರಕರ್ತರ ಹತ್ಯೆಗಳು ವರದಿಯಾದ ದೇಶಗಳಲ್ಲಿ ಭಾರತವು ಸೇರಿದೆ. ಪಟ್ಟಿಯಲ್ಲಿರುವ ಇತರ ದೇಶಗಳಲ್ಲಿ ಇರಾಕ್, ಫಿಲಿಪೈನ್ಸ್, ಮೆಕ್ಸಿಕೊ, ಪಾಕಿಸ್ತಾನ ಮತ್ತು ಸೊಮಾಲಿಯಾ ಸೇರಿವೆ ಎಂದು ವರದಿ ಉಲ್ಲೇಖಿಸಿದೆ.

2023ರ ಜಾಗತಿಕವಾಗಿ ಪತ್ರಕರ್ತರ ಒಟ್ಟು ಸಾವಿನ ಅಂಕಿ-ಅಂಶಗಳು 2015ರಿಂದ ಅತ್ಯಧಿಕವಾಗಿದೆ ಮತ್ತು 2022ರಿಂದ ಸುಮಾರು 44% ಏರಿಕೆಯಾಗಿದೆ. ವರದಿಯ ಪ್ರಕಾರ, ಈ ಸಾವುಗಳು ಪತ್ರಕರ್ತರ ಕರ್ತವ್ಯಕ್ಕೆ ಸಂಬಂಧಿಸಿದೆ, ಪ್ರಸ್ತುತ 8 ಹೆಚ್ಚುವರಿ ಪ್ರಕರಣಗಳು ತನಿಖೆಯಲ್ಲಿವೆ ಎಂದು ವರದಿ ಉಲ್ಲೇಖಿಸಿದೆ.

ಗಾಝಾ, ಇಸ್ರೇಲ್ ಮತ್ತು ಲೆಬನಾನ್‌ನಲ್ಲಿನ ಸಾವುಗಳನ್ನು ಹೊರತುಪಡಿಸಿದರೆ, 2022ಕ್ಕೆ ಹೋಲಿಸಿದರೆ ಪತ್ರಕರ್ತರ ಹತ್ಯೆಗಳು ಗಮನಾರ್ಹವಾಗಿ ಕಡಿಮೆಯಾಗಿದೆ. 2022ರಲ್ಲಿ CPJ ಒಟ್ಟು 69 ಸಾವುಗಳನ್ನು ಪತ್ತೆಹಚ್ಚಿದೆ. ಅದರಲ್ಲಿ 43 ವೃತ್ತಿಗೆ ಸಂಬಂಧಿಸಿದ ಹತ್ಯೆ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ.

ಆದರೆ, ಇಳಿಮುಖವಾಗುತ್ತಿರುವ ಪತ್ರಕರ್ತರ ಸಾವಿನ ಸಂಖ್ಯೆಯು ಪ್ರಪಂಚದ ಇತರ ಭಾಗಗಳಲ್ಲಿ ಪತ್ರಿಕೋದ್ಯಮವು ಸುರಕ್ಷಿತವಾಗಿದೆ ಎಂಬುವುದರ ಸೂಚನೆಯಲ್ಲ. ವಾಸ್ತವವಾಗಿ ಪತ್ರಕರ್ತರ ವಾರ್ಷಿಕ ಜೈಲು ಜನಗಣತಿ, ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಗಳ ಬಗೆಗಿನ ಪ್ರಮುಖ ಸೂಚಕ 2022ರ ದಾಖಲೆಯ ಗರಿಷ್ಠ ಮಟ್ಟಕ್ಕೆ ಹತ್ತಿರದಲ್ಲಿದೆ ಎಂದು ವರದಿಯು ತಿಳಿಸಿದೆ.

ಏಷ್ಯಾದಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಪತ್ರಕರ್ತರು ಜೈಲಿನಲ್ಲಿದ್ದಾರೆ ಎಂದು ವರದಿಯು ತಿಳಿಸಿದೆ. ಸಿಪಿಜೆ 2023ರ ಜೈಲು ಜನಗಣತಿಯಲ್ಲಿ ಭಾರತದಲ್ಲಿ 7 ಪತ್ರಕರ್ತರನ್ನು ಮೌನಗೊಳಿಸಲು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ (UAPA) ಮತ್ತು ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯಿದೆಗಳನ್ನು ಬಳಸಲಾಗಿದೆ ಎಂದು ಸೂಚಿಸುತ್ತದೆ.

ಇದನ್ನು ಓದಿ: ರಾರಾಜಿಸಿದ ಮೋದಿ: ನಿರಾಶೆಗೊಳಿಸಿದ ಬಿಜೆಪಿ ಪ್ರಣಾಳಿಕೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...