Homeಮುಖಪುಟಬಿಜೆಪಿಗೆ ಮುಳುವಾದ 'ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ

ಬಿಜೆಪಿಗೆ ಮುಳುವಾದ ‘ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ

- Advertisement -
- Advertisement -

ಕೇರಳ ಸ್ಟೋರಿ ಎಂಬ ಕಲ್ಪಿತ ಚಲನಚಿತ್ರ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಆ ಸ್ಟೋರಿಯಿಂದ ಬಿಜೆಪಿಗೆ ಬೀಳಬೇಕಿದ್ದ ಮತಗಳು ಕೂಡ ಈಗ ಸಿಗದಂತಾಗಿದೆ ಎಂದು ಕೇರಳದ ಮಲಪ್ಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಎಂ ಅಬ್ದುಲ್ ಸಲಾಂ ಅಸಹಾಯಕತೆ ತೋಡಿಕೊಂಡಿದ್ದಾರೆ.

ಡಾ ಎಂ ಅಬ್ದುಲ್ ಸಲಾಂ ಎನ್‌ಡಿಎ ಮೈತ್ರಿಕೂಟದ ಕೇರಳದ ಏಕೈಕ ಮುಸ್ಲಿಂ ಅಭ್ಯರ್ಥಿಯಾಗಿದ್ದಾರೆ. ಕಳೆದ ಬಾರಿ ಮೋದಿ ಕೇರಳಕ್ಕೆ ಚುನಾವಣೆ ಪ್ರಚಾರಕ್ಕೆ ಬಂದಾಗ ಸಲಾಂ ಅವರನ್ನು ಆಹ್ವಾನಿಸಿಲ್ಲ ಎಂದು ಹೇಳಲಾಗಿತ್ತು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇರಳದಲ್ಲಿ ‘ಕೇರಳ ಸ್ಟೋರಿ ಚಲನಚಿತ್ರ’ವನ್ನು ದೂರದರ್ಶನ ಪ್ರಸಾರ ಮಾಡುವ ಬಗ್ಗೆ ಕೇರಳ ಕಾಂಗ್ರೆಸ್ ‘ಭಾರತೀಯ ಚುನಾವಣಾ ಆಯೋಗ’ವನ್ನು (ಇಸಿಐ) ಸಂಪರ್ಕಿಸಿ ದೂರು ನೀಡಿತ್ತು. ದೂರದರ್ಶನದ ನಿರ್ಧಾರವು ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ವಿರೋಧ ಪಕ್ಷವಾದ ಕಾಂಗ್ರೆಸ್ ಎರಡರಿಂದಲೂ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಬಿಜೆಪಿ ಅಭ್ಯರ್ಥಿಯೇ ಈ ಕಲ್ಪಿತ ಸಿನಿಮಾ ಪ್ರದರ್ಶನದಿಂದ ಬಿಜೆಪಿ ವೋಟ್‌ ಬ್ಯಾಂಕ್‌ಗೆ ಹಾನಿಯಾಗಿದೆ ಎಂದು ಹೇಳಿದ್ದಾರೆ.

ಕೇರಳ ಸ್ಟೋರಿ ಸಿನಿಮಾ ಪ್ರದರ್ಶಿಸುವುದರಿಂದ ಮುಸ್ಲಿಮರು ಬಿಜೆಪಿಯಿಂದ ದೂರವಾಗುತ್ತಾರೆ. ಚುನಾವಣಾ ಸಂದರ್ಭವಾಗಿರುವ ಹಿನ್ನೆಲೆ ಮತಗಳ ಮೇಲೆ ಪ್ರಭಾವ ಬೀರುತ್ತದೆ. ಮಲಪ್ಪುರಂ ಕ್ಷೇತ್ರದಲ್ಲಿ ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರವಾಗಿದೆ ಎಂದು ಹೇಳಿದ್ದಾರೆ. ನನಗೆ ಶೇ.70ರಷ್ಟು ಮುಸ್ಲಿಮರಿರುವ ಜಿಲ್ಲೆಯಿಂದ ಟಿಕೆಟ್‌ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಶೇ.5ರಷ್ಟು ಮತ ಪಡೆದಿದೆ. ಈ ವಿದಾತ್ಮಕ ಸಿನಿಮಾದಿಂದ ಈ ಕ್ಷೇತ್ರದಲ್ಲಿ ನಾನು ಅನುಭವಿಸುತ್ತಿರುವ ಸಮಸ್ಯೆಯನ್ನು ಚೆನ್ನಾಗಿ ಊಹಿಸಬಹುದು ಎಂದು ಹೇಳಿದ್ದಾರೆ.

ಕೇರಳದ ಸ್ಟೋರಿ ಸಿನಿಮಾ ಆರಂಭದಿಂದಲೂ ವಿವಾದಾತ್ಮಕವಾಗಿದೆ. ಇದು ಕೇರಳವನ್ನು ತಪ್ಪಾಗಿ ಪ್ರತಿನಿಧಿಸುತ್ತದೆ ಮತ್ತು ಕೇರಳದ ಮುಸ್ಲಿಂ ಸಮುದಾಯಗಳ ಬಗ್ಗೆ ತಪ್ಪು ಸಂದೇಶ ನೀಡುತ್ತದೆ. ಈ ಚಲನಚಿತ್ರವನ್ನು ಇತ್ತೀಚೆಗೆ ಭಾರತದ ಸರ್ಕಾರಿ ಸ್ವಾಮ್ಯದ ದೂರದರ್ಶನ ಪ್ರಸಾರಕ್ಕಾಗಿ ಆಯ್ಕೆ ಮಾಡಿತ್ತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಸೇರಿದಂತೆ ಹಲವಾರು ರಾಜಕಾರಣಿಗಳು ಚಲನಚಿತ್ರವನ್ನು ಟೀಕಿಸಿದ್ದರು.

ಇದು ಪಕ್ಷದ ನಿಲುವಲ್ಲ, ಕೇವಲ ನನ್ನ ವೈಯಕ್ತಿಕ ಅಭಿಪ್ರಾಯ ಎಂದ ಡಾ ಎಂ ಅಬ್ದುಲ್ ಸಲಾಂ, ಮತಬ್ಯಾಂಕ್ ನಡುವೆ ಹಗೆತನವನ್ನು ಹುಟ್ಟುಹಾಕಲು ಇದು ಸೂಕ್ತ ಸಮಯವಲ್ಲ ಎಂದು ನಾನು ನಂಬುತ್ತೇನೆ. 70% ಮುಸ್ಲಿಮರು ಮತಬ್ಯಾಂಕ್ ಹೊಂದಿರುವ ಕ್ಷೇತ್ರದಲ್ಲಿ ನಾನು ಮುಸ್ಲಿಮರ ಶತ್ರು ಎಂಬ ಹಣೆಪಟ್ಟಿ ಹೊಂದಲು ಬಯಸುವುದಿಲ್ಲ ಎಂದು ಹೇಳಿದರು. ಕೇರಳ ಸ್ಟೋರಿ ಚಿತ್ರದ ಕುರಿತು ಮಾತನಾಡಿದ ಅವರು, ನಾನು ಸಿನಿಮಾವನ್ನು ನೋಡಿಲ್ಲ ಮತ್ತು ಚಿತ್ರದ ವಿಷಯದ ಬಗ್ಗೆ ಧನಾತ್ಮಕ ಅಥವಾ ಋಣಾತ್ಮಕ ನಿಲುವನ್ನು ತೆಗೆದುಕೊಳ್ಳುತ್ತಿಲ್ಲ. ಇದೊಂದು ಕಥೆ. ಕಥೆಯು ವಾಸ್ತವವನ್ನು ಆಧರಿಸಿರಬಹುದು ಅಥವಾ ಕಾಲ್ಪನಿಕ ಕಥೆಯನ್ನು ಆಧರಿಸಿರಬಹುದು. ಆದ್ದರಿಂದ ಗೊಂದಲವು ತುಂಬಾ ಇದೆ, ಏಕೆಂದರೆ ಕಥೆಯ ನೈಜತೆಯ ಬಗ್ಗೆ ನಿಮಗೆ ತಿಳಿದಿಲ್ಲ, ಅದು ನಿಜವೋ ಅಥವಾ ಕಾಲ್ಪನಿಕವೋ, ನಾನು ಕೇರಳ ಕಥೆಯನ್ನು ನೋಡಿಲ್ಲ ಮತ್ತು ನಾನು ಈ ಬಗ್ಗೆ ಪ್ರಚಾರ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಜಾರಿಗೊಳಿಸುವ ಭರವಸೆಯ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈಗ ಸಿಎಎ ನಿಯಮಗಳನ್ನು ತಿಳಿಸಲಾಗಿದೆ. ಇದು ಅಲ್ಪಸಂಖ್ಯಾತರಲ್ಲಿ ಸಾಕಷ್ಟು ಗೊಂದಲ ಮತ್ತು ಆಕ್ರೋಶವನ್ನು ಸೃಷ್ಟಿಸಿದೆ. ಆದರೆ ನೀವು ಕಾಯಿದೆಯನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದರೆ, ಅದು ಜನರನ್ನು ಎಂದೂ ದೇಶ ತೊರೆಯಲು ಹೇಳುವುದಿಲ್ಲ ಎಂದು ನಿಮಗೆ ಅರಿವಾಗುತ್ತದೆ. ಇದು ಅರ್ಹ ಜನರನ್ನು ದೇಶಕ್ಕೆ ಸೇರಿಸುವುದಕ್ಕಾಗಿದೆ. ವಿರೋಧ ಪಕ್ಷಗಳು ಈ ಬಗ್ಗೆ ಗೊಂದಲ ಸೃಷ್ಟಿಸಿದೆ. ನಾವು ಗೊಂದಲವನ್ನು ನಿವಾರಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಪ್ರಚಾರದ ವೇಳೆ ಮಹಿಳೆಯೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಸ್ಥಳದಿಂದ ಕಾಲ್ಕಿತ್ತ ಬಿಜೆಪಿ ಸಂಸದ ಪಿಸಿ ಮೋಹನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...