Homeಕರ್ನಾಟಕ'ನಮ್ಮದು ಪ್ರಜಾಪ್ರಭುತ್ವ; ಪ್ರಧಾನಮಂತ್ರಿ ಏಕಚಕ್ರಾಧಿಪತಿ ಅಲ್ಲ..'; ದೇವೇಗೌಡರಿಗೆ 'ಫೆಡರಲಿಸಂ' ಪಾಠ ಮಾಡಿದ ಸಿಎಂ

‘ನಮ್ಮದು ಪ್ರಜಾಪ್ರಭುತ್ವ; ಪ್ರಧಾನಮಂತ್ರಿ ಏಕಚಕ್ರಾಧಿಪತಿ ಅಲ್ಲ..’; ದೇವೇಗೌಡರಿಗೆ ‘ಫೆಡರಲಿಸಂ’ ಪಾಠ ಮಾಡಿದ ಸಿಎಂ

- Advertisement -
- Advertisement -

‘ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು’ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ಒಕ್ಕೂಟ ವ್ಯವಸ್ಥೆಯ (ಫೆಡರಲಿಸಂ) ಮಾಠ ಮಾಡಿದ್ದಾರೆ.

ಏಪ್ರಿಲ್ 14 ರಂದು ಮೈಸೂರಿನಲ್ಲಿ ನಡೆದ ಎನ್‌ಡಿಎ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದರು. ಈ ಕುರಿತು ತಮ್ಮ ಆಕ್ರೋಶ ಹೊರಹಾಕಿರುವ ಸಿಎಂ, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸನ್ಮಾನ್ಯ ಎಚ್.ಡಿ. ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ, ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ. ಒಂದು ಪ್ರಾದೇಶಿಕ ಪಕ್ಷವನ್ನು ಇಷ್ಟು ವರ್ಷಗಳ ಕಾಲ ಮುನ್ನಡೆಸುತ್ತಾ ಬಂದ ನೀವು ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಯವರನ್ನು ಟೀಕಿಸುತ್ತಾ ಬಂದವರು. ಇದೀಗ ಈ ಇಳಿವಯಸ್ಸಿನಲ್ಲಿ ಈ ಬಗೆಯ ಶರಣಾಗತಿಯ ಸ್ಥಿತಿ ಯಾಕೆ ಬಂತು’ ಎಂದು ಪ್ರಶ್ನಿಸಿದ್ದಾರೆ.

‘ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು. ಎರಡೂ ಪದವಿಗಳು ಸಮಾನವಾದುದು, ವಯಸ್ಸಿನ ಹಿರಿ-ಕಿರಿತನಗಳು ಪದವಿಗಳಿಗೆ ಅನ್ವಯವಾಗುವುದಿಲ್ಲ. ಅತಿ ಸಣ್ಣ ವಯಸ್ಸಿಗೆ ಪ್ರಧಾನಿಯಾದ ರಾಜೀವ್ ಗಾಂಧಿಯವರಿದ್ದಾಗಲೂ ಅವರಿಗಿಂತ ಹಿರಿಯರಾದ ಮುಖ್ಯಮಂತ್ರಿಗಳೂ ಇದ್ದರು. ಆಗಲೂ ಪರಸ್ಪರ ಟೀಕೆ-ಟಿಪ್ಪಣಿಗಳು ವಿನಿಮಯವಾಗುತ್ತಿದ್ದವು. ಇಲ್ಲಿಯ ವರೆಗೆ ಯಾರೂ ಕೂಡಾ ನಿಮ್ಮ ರೀತಿಯ ಉಪದ್ವಾಪ್ಯತನದ ಪ್ರಶ್ನೆಗಳನ್ನು ಎತ್ತಿರಲಿಲ್ಲ. ನೀವು ಹಿಂದಿನ ಪ್ರಧಾನಿಗಳನ್ನು ಯಾವ ಯಾವ ರೀತಿಯಲ್ಲಿ ಪ್ರಶ್ನಿಸಿದ್ದೀರಿ, ದೂರಿದ್ದೀರಿ, ಕೆಣಕಿದ್ದೀರಿ ಎನ್ನುವ ಪಟ್ಟಿಯನ್ನು ನಾನು ನಿಮಗೆ ಕೊಡಬಲ್ಲೆ’ ಎಂದು ಹೇಳಿರುವ ಮುಖ್ಯಮಂತ್ರಿಗಳು, ಪ್ರಧಾನಿ ಮೋದಿ ಕುರಿತು ದೇವೇಗೌಡರು ಮಾಡಿರುವ ಟೀಕೆಗಳ ಪತ್ರಿಕಾ ತುಣುಕುಗಳನ್ನು ಹಂಚಿಕೊಂಡಿದ್ದಾರೆ.

‘2002ರ ಗುಜರಾತ್ ಗಲಭೆಯ ಬಗ್ಗೆ ಲೋಕಸಭೆಯಲ್ಲಿ ನಡುರಾತ್ರಿವರೆಗೆ ನಡೆದ ಚರ್ಚೆಯಲ್ಲಿ ನೀವು ಆಗಿನ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಅವರ ವಿರುದ್ಧ ಪ್ರಯೋಗ ಮಾಡಿರುವ ಟೀಕಾಸ್ತ್ರಗಳು ಸದನದ ದಾಖಲೆಯಲ್ಲಿರಬಹುದು. ಇದನ್ನು ಈಗಲೂ ನಾನು ತಪ್ಪೆಂದು ಹೇಳುವುದಿಲ್ಲ. ಇವೆಲ್ಲವೂ ಸಂಸದೀಯ ಪ್ರಜಾಪ್ರಭುತ್ವದ ನಡವಳಿಕೆಗಳ ಭಾಗವಾಗಿರುತ್ತದೆ. ಆಗ ನೀವು ಮುಖ್ಯಮಂತ್ರಿಯೂ ಆಗಿರಲಿಲ್ಲ, ನೀವು ಕೇವಲ ಒಂದು ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾಗಿದ್ದವರು. ಆಗ ಈ ನೂರು ಕೋಟಿ, ಆರು ಕೋಟಿ ವ್ಯತ್ಯಾಸಗಳು ಬಾಧಿಸಿರಲಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

‘ಕೆಲವೇ ತಿಂಗಳುಗಳ ಹಿಂದೆ ನರೇಂದ್ರ ಮೋದಿ ಅವರಿಗಿಂತ ಕನಿಷ್ಠ ಹತ್ತು ವರ್ಷ ಸಣ್ಣವರಾಗಿರುವ ಮತ್ತು ಕೇವಲ ಒಬ್ಬ ಶಾಸಕರಾಗಿರುವ ನಿಮ್ಮ ಮಗ ಎಚ್.ಡಿ.ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಯಾವ ಭಾಷೆ ಬಳಸಿ ತರಾಟೆಗೆ ತೆಗೆದುಕೊಂಡಿದ್ದರೆನ್ನುವುದನ್ನು ನಾಡಿನ ಜನ ಇನ್ನೂ ಮರೆತಿಲ್ಲ, ನಿಮ್ಮ ನೆನಪಲ್ಲಿಯೂ ಇರಬಹುದು. ಆಗ ಯಾಕೆ ನೀವು ನೂರು ಕೋಟಿ ಜನರನ್ನು ಪ್ರತಿನಿಧಿಸುವ ಪ್ರಧಾನಮಂತ್ರಿಯವರನ್ನು ಟೀಕಿಸಬಾರದು ಎಂದು ಮಗನಿಗೆ ಕಿವಿ ಹಿಂಡಿ ಬುದ್ದಿ ಹೇಳಿರಲಿಲ್ಲ? ಇವೆಲ್ಲವೂ ಅನುಕೂಲಶಾಸ್ತ್ರ ಅಷ್ಟೆ ಎನ್ನುವುದು ರಾಜ್ಯದ ಜನರಿಗೆ ತಿಳಿದಿದೆ’ ಎಂದು ಹೇಳಿದ್ದಾರೆ.

‘ರಾಜ್ಯ ಸರ್ಕಾರಕ್ಕೆ ಅನ್ಯಾಯವಾದಾಗ ಅದನ್ನು ವಿರೋಧಿಸಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರನ್ನು ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಇದೇ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ದೇಶ ಕಂಡ ಅತ್ಯಂತ ಸಭ್ಯ ಮತ್ತು ಗೌರವಾರ್ಹ ರಾಜಕೀಯ ನಾಯಕರಾಗಿರುವ ಮನಮೋಹನ್ ಸಿಂಗ್ ವಿರುದ್ಧ ಯಾವ ಭಾಷೆ ಬಳಸಿದ್ದರೆನ್ನುವುದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ.
ನೀವು ದೇಶದ ಪ್ರಧಾನಿಯಾಗಿದ್ದಾಗ ಕನ್ನಡಿಗರು ಎದೆಯುಬ್ಬಿಸಿ ಖುಷಿಪಟ್ಟರು. ನೀವು ರಾಜ್ಯದ ನೆಲ-ಜಲ-ಭಾಷೆಯ ರಕ್ಷಣೆಗಾಗಿ ಕೇಂದ್ರ ಸರ್ಕಾರದ ವಿರುದ್ಧ ಆಯಾ ಕಾಲಗಳ ಪ್ರಧಾನಿಗಳ ವಿರುದ್ಧ ಹೋರಾಟಕ್ಕಿಳಿದಾಗಲೂ ಕನ್ನಡಿಗರು ನಿಮ್ಮನ್ನು ತಲೆಮೇಲೆ ಕೂರಿಸಿ ಕೊಂಡಾಡಿದರು’ ಎಂದಿದ್ದಾರೆ.

‘ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳು ತಮ್ಮ ಪಕ್ಷವನ್ನು ಬೆಂಬಲಿಸುತ್ತಿಲ್ಲ ಎಂಬ ಏಕೈಕ ಕಾರಣಕ್ಕಾಗಿ ಪ್ರಧಾನ ಮಂತ್ರಿಗಳು ಈ ರಾಜ್ಯಗಳ ವಿರುದ್ಧ ಸೇಡು ತೀರಿಸಿಕೊಳ್ಳುವವರಂತೆ ನಡೆದುಕೊಳ್ಳುತ್ತಿರುವ ಸಂದರ್ಭದಲ್ಲಿ ನೀವು ಕೇಂದ್ರದ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರಬೇಕಾಗಿತ್ತು. ದುರ್ದೈವದ ಸಂಗತಿ ಎಂದರೆ ಈಗ ನೀವು ಕೇವಲ ನಿಮ್ಮ ಪಕ್ಷ ಮತ್ತು ಕುಟುಂಬದ ರಾಜಕೀಯ ಉಳಿವಿಗಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಪ್ರಧಾನಮಂತ್ರಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಅವರ ಪರವಾಗಿ ನಮ್ಮ ವಿರುದ್ಧ ಕತ್ತಿ ಬೀಸುತ್ತಿದ್ದೀರಿ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಂಡು ಕನ್ನಡಿಗರಿಗೆ ಕೇಂದ್ರ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿ. ತೆರಿಗೆ ಹಂಚಿಕೆ, ಬರ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರ ಕತ್ತು ಕುಯ್ಯುತ್ತಿದೆ. ಇದರ ವಿರುದ್ಧ ನೀವು ದನಿ ಎತ್ತದೆ ಇರುವುದರಿಂದ ವರ್ತಮಾನದಲ್ಲಿ ನಿಮ್ಮ ಪಕ್ಷಕ್ಕೆ ಒಂದಷ್ಟು ಲಾಭವಾಗಲೂ ಬಹುದು. ಆದರೆ ಇತಿಹಾಸ ನಿಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ; ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಮತದಾರರು ಜಾಗರೂಕರಾಗಿರಿ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...