Homeಕರ್ನಾಟಕ'ನಮ್ಮದು ಪ್ರಜಾಪ್ರಭುತ್ವ; ಪ್ರಧಾನಮಂತ್ರಿ ಏಕಚಕ್ರಾಧಿಪತಿ ಅಲ್ಲ..'; ದೇವೇಗೌಡರಿಗೆ 'ಫೆಡರಲಿಸಂ' ಪಾಠ ಮಾಡಿದ ಸಿಎಂ

‘ನಮ್ಮದು ಪ್ರಜಾಪ್ರಭುತ್ವ; ಪ್ರಧಾನಮಂತ್ರಿ ಏಕಚಕ್ರಾಧಿಪತಿ ಅಲ್ಲ..’; ದೇವೇಗೌಡರಿಗೆ ‘ಫೆಡರಲಿಸಂ’ ಪಾಠ ಮಾಡಿದ ಸಿಎಂ

- Advertisement -
- Advertisement -

‘ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು’ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ಒಕ್ಕೂಟ ವ್ಯವಸ್ಥೆಯ (ಫೆಡರಲಿಸಂ) ಮಾಠ ಮಾಡಿದ್ದಾರೆ.

ಏಪ್ರಿಲ್ 14 ರಂದು ಮೈಸೂರಿನಲ್ಲಿ ನಡೆದ ಎನ್‌ಡಿಎ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದರು. ಈ ಕುರಿತು ತಮ್ಮ ಆಕ್ರೋಶ ಹೊರಹಾಕಿರುವ ಸಿಎಂ, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸನ್ಮಾನ್ಯ ಎಚ್.ಡಿ. ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ, ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ. ಒಂದು ಪ್ರಾದೇಶಿಕ ಪಕ್ಷವನ್ನು ಇಷ್ಟು ವರ್ಷಗಳ ಕಾಲ ಮುನ್ನಡೆಸುತ್ತಾ ಬಂದ ನೀವು ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಯವರನ್ನು ಟೀಕಿಸುತ್ತಾ ಬಂದವರು. ಇದೀಗ ಈ ಇಳಿವಯಸ್ಸಿನಲ್ಲಿ ಈ ಬಗೆಯ ಶರಣಾಗತಿಯ ಸ್ಥಿತಿ ಯಾಕೆ ಬಂತು’ ಎಂದು ಪ್ರಶ್ನಿಸಿದ್ದಾರೆ.

‘ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು. ಎರಡೂ ಪದವಿಗಳು ಸಮಾನವಾದುದು, ವಯಸ್ಸಿನ ಹಿರಿ-ಕಿರಿತನಗಳು ಪದವಿಗಳಿಗೆ ಅನ್ವಯವಾಗುವುದಿಲ್ಲ. ಅತಿ ಸಣ್ಣ ವಯಸ್ಸಿಗೆ ಪ್ರಧಾನಿಯಾದ ರಾಜೀವ್ ಗಾಂಧಿಯವರಿದ್ದಾಗಲೂ ಅವರಿಗಿಂತ ಹಿರಿಯರಾದ ಮುಖ್ಯಮಂತ್ರಿಗಳೂ ಇದ್ದರು. ಆಗಲೂ ಪರಸ್ಪರ ಟೀಕೆ-ಟಿಪ್ಪಣಿಗಳು ವಿನಿಮಯವಾಗುತ್ತಿದ್ದವು. ಇಲ್ಲಿಯ ವರೆಗೆ ಯಾರೂ ಕೂಡಾ ನಿಮ್ಮ ರೀತಿಯ ಉಪದ್ವಾಪ್ಯತನದ ಪ್ರಶ್ನೆಗಳನ್ನು ಎತ್ತಿರಲಿಲ್ಲ. ನೀವು ಹಿಂದಿನ ಪ್ರಧಾನಿಗಳನ್ನು ಯಾವ ಯಾವ ರೀತಿಯಲ್ಲಿ ಪ್ರಶ್ನಿಸಿದ್ದೀರಿ, ದೂರಿದ್ದೀರಿ, ಕೆಣಕಿದ್ದೀರಿ ಎನ್ನುವ ಪಟ್ಟಿಯನ್ನು ನಾನು ನಿಮಗೆ ಕೊಡಬಲ್ಲೆ’ ಎಂದು ಹೇಳಿರುವ ಮುಖ್ಯಮಂತ್ರಿಗಳು, ಪ್ರಧಾನಿ ಮೋದಿ ಕುರಿತು ದೇವೇಗೌಡರು ಮಾಡಿರುವ ಟೀಕೆಗಳ ಪತ್ರಿಕಾ ತುಣುಕುಗಳನ್ನು ಹಂಚಿಕೊಂಡಿದ್ದಾರೆ.

‘2002ರ ಗುಜರಾತ್ ಗಲಭೆಯ ಬಗ್ಗೆ ಲೋಕಸಭೆಯಲ್ಲಿ ನಡುರಾತ್ರಿವರೆಗೆ ನಡೆದ ಚರ್ಚೆಯಲ್ಲಿ ನೀವು ಆಗಿನ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಅವರ ವಿರುದ್ಧ ಪ್ರಯೋಗ ಮಾಡಿರುವ ಟೀಕಾಸ್ತ್ರಗಳು ಸದನದ ದಾಖಲೆಯಲ್ಲಿರಬಹುದು. ಇದನ್ನು ಈಗಲೂ ನಾನು ತಪ್ಪೆಂದು ಹೇಳುವುದಿಲ್ಲ. ಇವೆಲ್ಲವೂ ಸಂಸದೀಯ ಪ್ರಜಾಪ್ರಭುತ್ವದ ನಡವಳಿಕೆಗಳ ಭಾಗವಾಗಿರುತ್ತದೆ. ಆಗ ನೀವು ಮುಖ್ಯಮಂತ್ರಿಯೂ ಆಗಿರಲಿಲ್ಲ, ನೀವು ಕೇವಲ ಒಂದು ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾಗಿದ್ದವರು. ಆಗ ಈ ನೂರು ಕೋಟಿ, ಆರು ಕೋಟಿ ವ್ಯತ್ಯಾಸಗಳು ಬಾಧಿಸಿರಲಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

‘ಕೆಲವೇ ತಿಂಗಳುಗಳ ಹಿಂದೆ ನರೇಂದ್ರ ಮೋದಿ ಅವರಿಗಿಂತ ಕನಿಷ್ಠ ಹತ್ತು ವರ್ಷ ಸಣ್ಣವರಾಗಿರುವ ಮತ್ತು ಕೇವಲ ಒಬ್ಬ ಶಾಸಕರಾಗಿರುವ ನಿಮ್ಮ ಮಗ ಎಚ್.ಡಿ.ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಯಾವ ಭಾಷೆ ಬಳಸಿ ತರಾಟೆಗೆ ತೆಗೆದುಕೊಂಡಿದ್ದರೆನ್ನುವುದನ್ನು ನಾಡಿನ ಜನ ಇನ್ನೂ ಮರೆತಿಲ್ಲ, ನಿಮ್ಮ ನೆನಪಲ್ಲಿಯೂ ಇರಬಹುದು. ಆಗ ಯಾಕೆ ನೀವು ನೂರು ಕೋಟಿ ಜನರನ್ನು ಪ್ರತಿನಿಧಿಸುವ ಪ್ರಧಾನಮಂತ್ರಿಯವರನ್ನು ಟೀಕಿಸಬಾರದು ಎಂದು ಮಗನಿಗೆ ಕಿವಿ ಹಿಂಡಿ ಬುದ್ದಿ ಹೇಳಿರಲಿಲ್ಲ? ಇವೆಲ್ಲವೂ ಅನುಕೂಲಶಾಸ್ತ್ರ ಅಷ್ಟೆ ಎನ್ನುವುದು ರಾಜ್ಯದ ಜನರಿಗೆ ತಿಳಿದಿದೆ’ ಎಂದು ಹೇಳಿದ್ದಾರೆ.

‘ರಾಜ್ಯ ಸರ್ಕಾರಕ್ಕೆ ಅನ್ಯಾಯವಾದಾಗ ಅದನ್ನು ವಿರೋಧಿಸಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರನ್ನು ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಇದೇ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ದೇಶ ಕಂಡ ಅತ್ಯಂತ ಸಭ್ಯ ಮತ್ತು ಗೌರವಾರ್ಹ ರಾಜಕೀಯ ನಾಯಕರಾಗಿರುವ ಮನಮೋಹನ್ ಸಿಂಗ್ ವಿರುದ್ಧ ಯಾವ ಭಾಷೆ ಬಳಸಿದ್ದರೆನ್ನುವುದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ.
ನೀವು ದೇಶದ ಪ್ರಧಾನಿಯಾಗಿದ್ದಾಗ ಕನ್ನಡಿಗರು ಎದೆಯುಬ್ಬಿಸಿ ಖುಷಿಪಟ್ಟರು. ನೀವು ರಾಜ್ಯದ ನೆಲ-ಜಲ-ಭಾಷೆಯ ರಕ್ಷಣೆಗಾಗಿ ಕೇಂದ್ರ ಸರ್ಕಾರದ ವಿರುದ್ಧ ಆಯಾ ಕಾಲಗಳ ಪ್ರಧಾನಿಗಳ ವಿರುದ್ಧ ಹೋರಾಟಕ್ಕಿಳಿದಾಗಲೂ ಕನ್ನಡಿಗರು ನಿಮ್ಮನ್ನು ತಲೆಮೇಲೆ ಕೂರಿಸಿ ಕೊಂಡಾಡಿದರು’ ಎಂದಿದ್ದಾರೆ.

‘ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳು ತಮ್ಮ ಪಕ್ಷವನ್ನು ಬೆಂಬಲಿಸುತ್ತಿಲ್ಲ ಎಂಬ ಏಕೈಕ ಕಾರಣಕ್ಕಾಗಿ ಪ್ರಧಾನ ಮಂತ್ರಿಗಳು ಈ ರಾಜ್ಯಗಳ ವಿರುದ್ಧ ಸೇಡು ತೀರಿಸಿಕೊಳ್ಳುವವರಂತೆ ನಡೆದುಕೊಳ್ಳುತ್ತಿರುವ ಸಂದರ್ಭದಲ್ಲಿ ನೀವು ಕೇಂದ್ರದ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರಬೇಕಾಗಿತ್ತು. ದುರ್ದೈವದ ಸಂಗತಿ ಎಂದರೆ ಈಗ ನೀವು ಕೇವಲ ನಿಮ್ಮ ಪಕ್ಷ ಮತ್ತು ಕುಟುಂಬದ ರಾಜಕೀಯ ಉಳಿವಿಗಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಪ್ರಧಾನಮಂತ್ರಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಅವರ ಪರವಾಗಿ ನಮ್ಮ ವಿರುದ್ಧ ಕತ್ತಿ ಬೀಸುತ್ತಿದ್ದೀರಿ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಂಡು ಕನ್ನಡಿಗರಿಗೆ ಕೇಂದ್ರ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿ. ತೆರಿಗೆ ಹಂಚಿಕೆ, ಬರ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರ ಕತ್ತು ಕುಯ್ಯುತ್ತಿದೆ. ಇದರ ವಿರುದ್ಧ ನೀವು ದನಿ ಎತ್ತದೆ ಇರುವುದರಿಂದ ವರ್ತಮಾನದಲ್ಲಿ ನಿಮ್ಮ ಪಕ್ಷಕ್ಕೆ ಒಂದಷ್ಟು ಲಾಭವಾಗಲೂ ಬಹುದು. ಆದರೆ ಇತಿಹಾಸ ನಿಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ; ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಮತದಾರರು ಜಾಗರೂಕರಾಗಿರಿ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...