Homeಅಂತರಾಷ್ಟ್ರೀಯಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು ಯುಎಸ್‌, ಇಸ್ರೇಲ್‌ ಅಲ್ಲ: ವರದಿ

- Advertisement -
- Advertisement -

ಇಸ್ರೇಲ್‌ ಮೇಲೆ ಇರಾನ್‌ ಏಪ್ರಿಲ್ 13ರಂದು ಕ್ಷಿಪಣಿಗಳನ್ನು ಉಡಾವಣೆ ಮಾಡಿತ್ತು. ಇರಾನ್ ಇಸ್ರೇಲ್ ಕಡೆಗೆ ಉಡಾಯಿಸಿದ ಬಹುಪಾಲು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಯುನೈಟೆಡ್ ಸ್ಟೇಟ್ಸ್ ತಡೆದು ಹೊಡೆದುರುಳಿಸಿತು, ಇಸ್ರೇಲ್ ಅಲ್ಲ ಎಂದು ದಾಳಿಯ ಡೇಟಾವನ್ನು ವಿಶ್ಲೇಷಿಸುವ ವರದಿ ಹೇಳಿದೆ.

ಅಮೆರಿಕದ ಸುದ್ದಿವಾಹಿನಿ ದಿ ಇಂಟರ್‌ಸೆಪ್ಟ್‌ನೊಂದಿಗೆ ಮಾತನಾಡಿದ ಯುಎಸ್ ಮಿಲಿಟರಿ ಅಧಿಕಾರಿಗಳು, ಇಸ್ರೇಲ್ ತಲುಪುವ ಮೊದಲು ಇರಾನ್‌ ಉಡಾಯಿಸದ ಅರ್ಧಕ್ಕಿಂತ ಹೆಚ್ಚು ಕ್ಷಿಪಣಿಗಳನ್ನು ಇಸ್ರೇಲ್‌ ತಲುಪುವ ಮೊದಲು ಯುಎಸ್ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ.

ಮೊದಲ ಬಾರಿಗೆ, ಇರಾನ್ ಶನಿವಾರ ಇಸ್ರೇಲ್ ಮೇಲೆ ನೇರ ದಾಳಿ ನಡೆಸಿದೆ. 300ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಇಸ್ರೇಲ್‌ ಕಡೆ ಹಾರಿಸಿದೆ. ದಾಳಿಯ ನಂತರ ಮಿತ್ರರಾಷ್ಟ್ರಗಳಾದ US, ಜೋರ್ಡಾನ್, ಫ್ರಾನ್ಸ್ ಮತ್ತು ಬ್ರಿಟನ್ ಸಹಾಯದಿಂದ 99 ಪ್ರತಿಶತಕ್ಕಿಂತ ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್‌ ಹೇಳಿತ್ತು.

ಇರಾನ್‌ನ ಅರ್ಧದಷ್ಟು ಶಸ್ತ್ರಾಸ್ತ್ರಗಳು ಕೆಲವು ರೀತಿಯ ತಾಂತ್ರಿಕ ವೈಫಲ್ಯವನ್ನು ಅನುಭವಿಸಿವೆ. ಉಳಿದ ಕ್ಷಿಪಣಿಗಳಲ್ಲಿ 80ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಯುಎಸ್ ನಾಶಪಡಿಸಿದೆ ಎಂದು ಯುಎಸ್ ಮಿಲಿಟರಿ ಪ್ರಾಥಮಿಕವಾಗಿ ಅಂದಾಜಿಸಿದೆ.

ಆದರೆ ಯುಎಸ್‌ ಎಲ್ಲಿ ಈ ಕ್ಷಿಪಣಿಗಳನ್ನು ತಡೆದಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಸೌದಿ ಅರೇಬಿಯಾದಲ್ಲಿ ಯುಎಸ್ ಸಕ್ರಿಯ ಮಿಲಿಟರಿ ನೆಲೆಯನ್ನು ಹೊಂದಿದೆ. ಇಸ್ರೇಲ್ ರಕ್ಷಣಾ ಪಡೆ (IDF) ಈ ಕುರಿತು ಹೇಳಿಕೆಯನ್ನು ಹೊರಡಿಸಿದ್ದು, ಸರಿಸುಮಾರು 25 ಕ್ರೂಸ್ ಕ್ಷಿಪಣಿಗಳನ್ನು ಐಎಎಫ್ (ಇಸ್ರೇಲಿ ಏರ್ ಫೋರ್ಸ್) ಫೈಟರ್ ಜೆಟ್‌ಗಳು ದೇಶದ ಗಡಿಯ ಹೊರಗೆ ತಡೆಹಿಡಿದಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ನ ರಾಯಲ್ ಏರ್ ಫೋರ್ಸ್ (RAF) ಹಲವಾರು ಇರಾನಿನ ಕ್ಷಿಪಣಿಗಳನ್ನು ತಡೆದಿದೆ ಎಂದು ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ, ಆದರೆ ಜೋರ್ಡಾನ್ ಸರ್ಕಾರವು ಇರಾನಿನ ಶಸ್ತ್ರಾಸ್ತ್ರಗಳನ್ನು ಉರುಳಿಸಿರುವ ಬಗ್ಗೆ ಮಾಹಿತಿ ನೀಡಿದೆ, ಆದರೆ ಉರುಳಿಸಿದ ಕ್ಷಿಪಣಿಗಳ ಬಗ್ಗೆ ಯಾವುದೇ ಸ್ಪಷ್ಟ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿಲ್ಲ.

ಇಸ್ರೇಲ್ ಪ್ರಕಾರ, ಇರಾನ್ 330ಡ್ರೋನ್‌ಗಳು, ಕ್ರೂಸ್ ಕ್ಷಿಪಣಿಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾವಣೆ ಮಾಡಿದೆ. ಇದರಲ್ಲಿ 30 ಕ್ರೂಸ್ ಕ್ಷಿಪಣಿಗಳು, ಸರಿಸುಮಾರು 180 ಶಾಹೆಡ್ ಡ್ರೋನ್‌ಗಳು ಮತ್ತು 120 ಎಮಾಡ್ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಒಳಗೊಂಡಿತ್ತು. ಇದರಲ್ಲಿ ಎಲ್ಲಾ ಡ್ರೋನ್‌ಗಳು ಮತ್ತು  ಕ್ಷಿಪಣಿಗಳನ್ನು ಇರಾನ್ ಭೂಪ್ರದೇಶದಿಂದ ಉಡಾಯಿಸಲಾಗಿದ್ದರೆ, ಕೆಲವು ಕ್ಷಿಪಣಿಗಳನ್ನು ಯೆಮೆನ್‌ನಿಂದ ಉಡಾವಣೆ ಮಾಡಲಾಗಿದೆ.

ಎಪ್ರಿಲ್ 1ರಂದು ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಕಾರ ತೀರಿಸುವುದಾಗಿ ಇರಾನ್‌ ಹೇಳಿತ್ತು.  ಇದರ ಬೆನ್ನಲಿ ಇಸ್ರೇಲ್ ಲೆಬನಾನ್‌ ಮೇಲೂ ವೈಮಾನಿಕ ದಾಳಿಯನ್ನು ನಡೆಸಿತ್ತು. ದಕ್ಷಿಣ ಲೆಬನಾನ್‍ನ ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ `ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಮೃತಪಟ್ಟಿದ್ದರು. ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಿದ್ದ ಇಸ್ರೇಲ್‌ನಿಂದ ಲೆಬನಾನ್‌, ಇರಾನ್‌ ಗುರಿಯಾಗಿಸಿಕೊಂಡು ನಡೆದಿದ್ದ ದಾಳಿ ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಹಟ್ಟು ಹಾಕಿತ್ತು.

ಇದನ್ನು ಓದಿ: ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...