Homeಮುಖಪುಟಪ್ರಧಾನಿ ಮೋದಿ ದೇಶದ ಶ್ರೀಮಂತ ಉದ್ಯಮಿಗಳ 'ಸಾಧನ': ರಾಹುಲ್ ಗಾಂಧಿ

ಪ್ರಧಾನಿ ಮೋದಿ ದೇಶದ ಶ್ರೀಮಂತ ಉದ್ಯಮಿಗಳ ‘ಸಾಧನ’: ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಕೆಲವೇಕೆಲವು ಶ್ರೀಮಂತ ಉದ್ಯಮಿಗಳ ಸಾಧನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದ ನೈಜ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ಸೆಳೆಯುವುದು, ಭಾರತದ ಶ್ರೀಮಂತ ಉದ್ಯಮಿಗಳನ್ನು ರಕ್ಷಿಸುವುದು ಮತ್ತು ಅವರ ಬ್ಯಾಂಕ್ ಸಾಲಗಳನ್ನು ಮನ್ನಾ ಮಾಡುವುದು ಮೋದಿಯವರ ಕೆಲಸ ಎಂದು ಅವರು ಆರೋಪಿಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಐದಾರು ದೊಡ್ಡ, ಶ್ರೀಮಂತ ಉದ್ಯಮಿಗಳ ಸಾಧನ; ದೇಶದ 20-25 ಜನರಿಗೆ ಸುಮಾರು 16 ಲಕ್ಷ ಕೋಟಿ ರೂ.ಗಳನ್ನು ನೀಡಿದ್ದಾರೆ” ಎಂದು ಅವರು ಕಿಡಿಕಾರಿದರು.

“ದೇಶದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ನಿರುದ್ಯೋಗ ಅಥವಾ ಬೆಲೆ ಏರಿಕೆಯ ಬಗ್ಗೆ ಅವರು ಮಾತನಾಡುವುದಿಲ್ಲ” ಎಂದು ಪಕ್ಷದ ಬೆಂಬಲಿಗರು, ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಇಂದು ತಮ್ಮ ಸ್ವಕ್ಷೇತ್ರ ವಯನಾಡಿನಲ್ಲಿ ಮಾತನಾಡಿದರು.

‘ಚುನಾವಣಾ ಬಾಂಡ್‌ಗಳು ಪಿಎಂ ಮೋದಿ ನಡೆಸಿದ ಸುಲಿಗೆಯ ಒಂದು ರೂಪವಾಗಿದೆ. ಬಿಜೆಪಿ ಮತ್ತು ಆರೆಸ್ಸೆಸ್ ಸಂವಿಧಾನವನ್ನು ನಾಶಪಡಿಸಲು ಮತ್ತು ಬದಲಾಯಿಸಲು ಪ್ರಯತ್ನಿಸುತ್ತಿವೆ. 2024 ರ ಲೋಕಸಭೆ ಚುನಾವಣೆಯ ಏಕೈಕ ದೊಡ್ಡ ವಿಷಯ ಮತ್ತು ಇತರ ಎಲ್ಲ ವಿಷಯಗಳು ಅದರಿಂದ ಹೊರಹೊಮ್ಮಿವೆ’ ಎಂದು ಹೇಳಿದರು.

ಅವರು ದಕ್ಷಿಣ ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಪ್ರಚಾರದ ಭಾಗವಾಗಿ ಬೆಳಿಗ್ಗೆ 11.30 ರ ಸುಮಾರಿಗೆ ಇಲ್ಲಿನ ಕೇರಳದ ಕೊಡಿಯತ್ತೂರಿನಿಂದ ಬೃಹತ್ ರೋಡ್ ಶೋ ನಡೆಸಿದರು. ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಅವರು ಸಾಗುತ್ತಿದ್ದ ವಾಹನದ ಹಿಂದೆಮುಂದೆ ಓಡಿದರು.

ಅವರು ತೆರೆದ ಕಾರಿನ ಮೇಲೆ ಕುಳಿತುಕೊಂಡು ರಸ್ತೆಯ ಎರಡೂ ಬದಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರತ್ತ ಕೈ ಬೀಸುತ್ತಾ ಸಾಗಿದರು. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರ ಭಾವಚಿತ್ರವಿರುವ ಫಲಕಗಳನ್ನು ಹಿಡಿದುಕೊಂಡು ಘೋಷಣೆ ಕೂಗಿದರು.

ವಯನಾಡಿನಿಂದ ಮತ್ತೊಮ್ಮೆ ಗೆಲ್ಲುವ ನಿರೀಕ್ಷೆಯಲ್ಲಿರುವ ರಾಹುಲ್ ಗಾಂಧಿ, ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಎರಡನೇ ಬಾರಿಗೆ ಕ್ಷೇತ್ರಕ್ಕೆ ಬಂದಿದ್ದಾರೆ. ಕಾಂಗ್ರೆಸ್ ನಾಯಕ ಈ ತಿಂಗಳ ಆರಂಭದಲ್ಲಿ ವಯನಾಡಿನಲ್ಲಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿ, ಬೃಹತ್ ರೋಡ್ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಅವರು ವಯನಾಡ್‌ನಿಂದ 4,31,770 ಮತಗಳ ದಾಖಲೆಯ ಅಂತರದಿಂದ ಗೆದ್ದಿದ್ದರು. ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ; ಪತಂಜಲಿ ದಾರಿ ತಪ್ಪಿಸುವ ಜಾಹೀರಾತು ಪ್ರಕರಣ; ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ರಾಮ್‌ದೇವ್‌ಗೆ ಸುಪ್ರೀಂ ತಪರಾಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...