Homeಮುಖಪುಟ'ಪ್ಯಾಲೆಸ್ತೀನ್' ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

‘ಪ್ಯಾಲೆಸ್ತೀನ್’ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

- Advertisement -
- Advertisement -

ಪ್ಯಾಲೆಸ್ತೀನ್ ಬಿಕ್ಕಟ್ಟಿನ ಕುರಿತು ಏಪ್ರಿಲ್ 15ರಂದು ನಡೆಯಬೇಕಿದ್ದ ಕವನ ವಾಚನ ಕಾರ್ಯಕ್ರಮವನ್ನು ದೆಹಲಿ ವಿಶ್ವವಿದ್ಯಾಲಯವು ಯಾವುದೇ ಕಾರಣವನ್ನು ನೀಡದೆ ರದ್ದುಗೊಳಿಸಿದೆ ಎಂದು ಕಾರ್ಯಕ್ರಮದ ಸಂಘಟಕರು ಆರೋಪಿಸಿದ್ದಾರೆ.

ಈ ಕುರಿತು ಕಾರ್ಯಕ್ರಮದ ಆಯೋಜಕರಾದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಅಪೂರ್ವಾನಂದ್ ಮತ್ತು ಅರ್ಜುಮಂದ್ ಅರಾ ಮಾತನಾಡಿದ್ದು, ‘ನಾವು ಪ್ಯಾಲೆಸ್ತೀನರ ಪದವನ್ನು ಕೇಳೋಣ’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಮಾರ್ಚ್ 22ರಂದು ನಡೆಸಬೇಕಾಗಿತ್ತು ಮತ್ತು ಅದಕ್ಕೆ ದೆಹಲಿ ವಿಶ್ವವಿದ್ಯಾಲಯವು ಮಾರ್ಚ್ 19ರಂದು ಅನುಮತಿ ನೀಡಿತ್ತು. ಆದರೆ ಹೋಳಿ ಹಬ್ಬದ ಕಾರಣ ಮಾರ್ಚ್ 22 ರಂದು ರಜೆ ಎಂದು ಘೋಷಿಸಿದ್ದರಿಂದ ಸಂಘಟಕರು ಅದನ್ನು ಏಪ್ರಿಲ್ 15ಕ್ಕೆ ಮುಂದೂಡಿದ್ದರು. ಕಾರ್ಯಕ್ರಮದ ಸ್ವರೂಪವನ್ನು ಬದಲಾಯಿಸಲಾಗಿಲ್ಲ, ಆದರೆ ವಿಶ್ವವಿದ್ಯಾನಿಲಯವು ಏಪ್ರಿಲ್ 13ರ ಶನಿವಾರದಂದು ನನಗೆ ಕಳುಹಿಸಿದ ಇ-ಮೇಲ್‌ನಲ್ಲಿ ಕಾರ್ಯಕ್ರಮ ರದ್ದು ಪಡಿಸುವ ಬಗ್ಗೆ ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮ ನಡೆಸಲು ಮಾರ್ಚ್‌ನಲ್ಲಿ ಅನುಮತಿ ನೀಡಿದ್ದು, ಅದನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಆಘಾತವಾಯಿತು. ನಾವು ಅದನ್ನು ಪ್ರಚಾರ ಮಾಡಿದ್ದರಿಂದ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ದರಿಂದ ನನಗೂ ಅವಮಾನವಾಗಿದೆ ಎಂದು ಅಪೂರ್ವಾನಂದ್ ಹೇಳಿದ್ದಾರೆ. ಈ ಕಾರ್ಯಕ್ರಮಕ್ಕೆ ಖ್ಯಾತ ಕವಿ ಅಶೋಕ್ ವಾಜಪೇಯಿ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು, ವಿವಿಯ ಕಲಾ ವಿಭಾಗದಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆಸಲಾಗಿತ್ತು ಎಂದು ಹೇಳಲಾಗಿದೆ.

ಕಾರ್ಯಕ್ರಮಕ್ಕೆ ಅನುಮತಿ ನೀಡದ ಆಡಳಿತದ ವಿರುದ್ಧ ಪ್ರತಿರೋಧದ ಭಾಗವಾಗಿ ಸಂಘಟಕರು ಮತ್ತು ವಿದ್ಯಾರ್ಥಿಗಳು ಕಾರಿಡಾರ್‌ನ ಕೊಠಡಿ ನಂ.22ರಲ್ಲಿ ಪ್ಯಾಲೆಸ್ತೀನ್ ಕುರಿತು ಚರ್ಚೆಗಳನ್ನು ನಡೆಸಲಾಗಿದೆ ಮತ್ತು  ಕವನವನ್ನು ವಾಚಿಸಲಾಗಿದೆ. ನಾವು ಕೋಣೆಯ ಹೊರಗಿನ ಕಾರಿಡಾರ್‌ನಲ್ಲಿ ನಿಂತು ಕವಿತೆಗಳನ್ನು ಓದಿದೆವು. ನಾವು ಕಾಲೇಜಿನಲ್ಲಿ ತೊಂದರೆ ಅಥವಾ ಯಾವುದೇ ಸಮಸ್ಯೆಯನ್ನು ಸೃಷ್ಟಿಸಲು ಬಯಸುವುದಿಲ್ಲ, ಪ್ಯಾಲೆಸ್ತೀನ್‌ ಬಗ್ಗೆ ಕಾರ್ಯಕ್ರಮ ಆಯೋಜಿಸಲು ನಮಗೆ ಅನುಮತಿಸದ ಕಾರಣ ನಾವು ಸಂದೇಶವನ್ನು ಕಳುಹಿಸಲು ಬಯಸಿದ್ದೇವೆ ಎಂದು ಅರ್ಜುಮಂದ್ ಅರಾ ಅವರು ಹೇಳಿದ್ದಾರೆ.

ಇದನ್ನು ಓದಿ: ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...