Homeಮುಖಪುಟಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ '14 ಕೋಟಿ ರೂ.' ವ್ಯಯಿಸಿದ್ದ ಮೋದಿ ಸರಕಾರ!

ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು, ನಿರ್ವಹಿಸಲು ತೆರಿಗೆದಾರರ ಹಣದಿಂದ 14 ಕೋಟಿ ರೂಪಾಯಿ ವೆಚ್ಚ ಮಾಡಿದೆ ಎಂಬ ಸ್ಪೋಟಕ ಮಾಹಿತಿ ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ನಿವೃತ್ತ ಕಮೋಡೋರ್(ಜಲಸೇನಾ ಅಧಿಕಾರಿ) ಲೋಕೇಶ್ ಬಾತ್ರಾ ಅವರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಆರ್‌ಟಿಐ ಈ ಮಹತ್ವದ ಮಾಹಿತಿಯನ್ನು ನೀಡಿದೆ. ಒಟ್ಟು 30 ಹಂತಗಳಲ್ಲಿ 12,04,59,043 ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಮಾರಾಟಕ್ಕೆ ಕಮಿಷನ್ ಆಗಿ ವಿಧಿಸಲಾಗಿದೆ ಮತ್ತು ಬಾಂಡ್‌ಗಳ ಮುದ್ರಣ ವೆಚ್ಚಕ್ಕಾಗಿ 1,93,73,604 ರೂ.ವ್ಯಯಿಸಲಾಗಿದೆ. ಕಮಿಷನ್‌ ಮೊತ್ತವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಲು ಮತ್ತು ನಿರ್ವಹಿಸಲು ವಿಧಿಸುವ ಹಣವನ್ನು ಸೂಚಿಸುತ್ತದೆ. ಇದಲ್ಲದೆ ಮಾಸ್ಕ್-ಎ ಪ್ರಿಂಟ್ ಭದ್ರತೆಯನ್ನು ಪರಿಶೀಲಿಸುವ ಸಾಧನಕ್ಕಾಗಿ ಹೆಚ್ಚುವರಿ 6,720 ರೂ.ಗಳನ್ನು ವಿಧಿಸಲಾಗಿದೆ ಎಂದು ಆರ್ಥಿಕ ವ್ಯವಹಾರಗಳ ಸಚಿವಾಲಯ ಆರ್‌ಟಿಐ ಮೂಲಕ ನೀಡಿದ ಮಾಹಿತಿಯಲ್ಲಿ ತಿಳಿಸಿದೆ.

ನಾಸಿಕ್ ಮೂಲದ ಇಂಡಿಯಾ ಸೆಕ್ಯುರಿಟಿ ಪ್ರೆಸ್ ಈ ಬಾಂಡ್‌ಗಳನ್ನು ಮುದ್ರಿಸುವ ಕಾರ್ಯವನ್ನು ಮಾಡಿದೆ. 1,000, ರೂ, 10,000, ರೂ 1 ಲಕ್ಷ, ರೂ 10 ಲಕ್ಷ ಮತ್ತು ರೂ 1 ಕೋಟಿ ಮೌಲ್ಯದ ಬಾಂಡ್‌ಗಳನ್ನು ಮುದ್ರಿಸಿದೆ.

ಮುದ್ರಿತವಾದ ಚುನಾವಣಾ ಬಾಂಡ್‌ಗಳು

1,000 ರೂ.ಗಳ 2,65,000 ಚುನಾವಣಾ ಬಾಂಡ್‌ಗಳು
10,000 ರೂ.ಗಳ 2,65,000 ಬಾಂಡ್‌ಗಳು
1 ಲಕ್ಷ ಮೌಲ್ಯದ 93,000 ಚುನಾವಣಾ ಬಾಂಡ್‌ಗಳು
10 ಲಕ್ಷ ಮೌಲ್ಯದ 26,000 ಬಾಂಡ್‌ಗಳು
1 ಕೋಟಿಯ 33,000 ಬಾಂಡ್‌ಗಳು

ಈ ಬಾಂಡ್‌ಗಳ ಮುದ್ರಣ ಮತ್ತು ನಿರ್ವಹಣೆಯ ವೆಚ್ಚವನ್ನು ದಾನಿಗಳು ಅಥವಾ ಚುನಾವಣಾ ಬಾಂಡ್‌ ಸ್ವೀಕರಿಸುವವರು ಭರಿಸುವುದಿಲ್ಲ, ಅದು ಸರ್ಕಾರ ಅಂದರೆ ತೆರಿಗೆದಾರರ ಹಣದಿಂದ ಭರಿಸಲಾಗಿದೆ. ಚುನಾವಣಾ ಬಾಂಡ್‌ ಯೋಜನೆಯಲ್ಲಿ, ಬಾಂಡ್ ಖರೀದಿಸುವ ದಾನಿಗಳು ಎಸ್‌ಬಿಐಗೆ ಯಾವುದೇ ಸೇವಾ ಶುಲ್ಕ (ಕಮಿಷನ್) ಮತ್ತು ಬಾಂಡ್‌ಗಳ ಮುದ್ರಣ ವೆಚ್ಚವನ್ನು ಪಾವತಿಸಬೇಕಾಗಿಲ್ಲ, ಸರ್ಕಾರ ಅಥವಾ ಅಂತಿಮವಾಗಿ ತೆರಿಗೆ ಪಾವತಿದಾರರು ಈ ವೆಚ್ಚವನ್ನು ಭರಿಸುತ್ತಾರೆ ಎಂದು ಬಾತ್ರಾ ಹೇಳಿದ್ದಾರೆ.

ಇದಲ್ಲದೆ ತೆರಿಗೆ ಪಾವತಿದಾರರ ವೆಚ್ಚದಲ್ಲಿ ರಾಜಕೀಯ ಪಕ್ಷಗಳ ತೆರಿಗೆ-ಮುಕ್ತ ಪ್ರಯೋಜನಗಳಿಗಾಗಿ ಚುನಾವಣಾ ಬಾಂಡ್‌ ಯೋಜನೆಯನ್ನು ನಿರ್ವಹಿಸಲು ಸರ್ಕಾರಿ ಯಂತ್ರೋಪಕರಣಗಳು ಮತ್ತು ಮಾನವಶಕ್ತಿಯ ಬಳಕೆಗೆ ಭಾರಿ ಮೊತ್ತವನ್ನು ಖರ್ಚು ಮಾಡಲಾಗಿದೆ ಎಂದು ಲೋಕೇಶ್ ಬಾತ್ರಾ ಅವರು ಆರೋಪಿಸಿದ್ದಾರೆ.

ಚುನಾವಣಾ ಬಾಂಡ್‌ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದ ನಂತರ ನರೇಂದ್ರ ಮೋದಿ ಸರ್ಕಾರವು 2024ರಲ್ಲಿ ತಲಾ 1 ಕೋಟಿ ರೂಪಾಯಿಗಳ 8,350 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದೆ ಎಂದು ಬಾತ್ರಾ ಅವರು ಈ ಹಿಂದೆ ಸಲ್ಲಿಸಿದ ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ. ಒಂದು ಎಲೆಕ್ಟೋರಲ್ ಬಾಂಡ್ ಮುದ್ರಣದ ವೆಚ್ಚವು 25 ರೂಪಾಯಿಯಾಗಿದೆ, ಅದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚುವರಿ 6% ಜಿಎಸ್‌ಟಿಯನ್ನು ವಿಧಿಸುತ್ತವೆ.

ಫೆಬ್ರವರಿ 15ರಂದು ಸುಪ್ರೀಂಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತ್ತು. ಇದು ಅಸಂವಿಧಾನಿಕ ಮತ್ತು ಈ ಮಾಹಿತಿಯ ಮತದಾರರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಕರೆದಿರುವ ನ್ಯಾಯಾಲಯವು, ಬಾಂಡ್‌ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು. ಆದರೆ ಎಸ್‌ಬಿಐ ಚುನಾವಣಾ ಬಾಂಡ್‌ ಕುರಿತ ಮಾಹಿತಿ ನೀಡಲು ಕಾಲಾವಕಾಶವನ್ನು ಕೋರಿತ್ತು. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ಎಸ್‌ಬಿಐಗೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡುವಂತೆ ಸುಪ್ರೀಂಕೋರ್ಟ್‌ ಖಡಕ್‌ ಆಗಿ ಸೂಚಿಸಿತ್ತು. ಆ ಬಳಿಕ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದ್ದು, ಬಿಜೆಪಿ ಚುನಾವಣಾ ಬಾಂಡ್‌ ಯೋಜನೆಯಿಂದ ಅತಿ ಹೆಚ್ಚು ಪ್ರಯೋಜನ ಪಡೆದುಕೊಂಡಿದೆ ಎನ್ನುವುದು ಬಯಲಾಗಿತ್ತು.

ಇದನ್ನು ಓದಿ: ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆಂದು ಸಂಭ್ರಮಿಸುವವರಿಗೆ ಆರ್‌ಬಿಐ ಮಾಜಿ ಗವರ್ನರ್ ಎಚ್ಚರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...