Homeಮುಖಪುಟ'ಚುನಾವಣಾ ಬಾಂಡ್‌ ಬಗ್ಗೆ ಮಾತನಾಡುವಾಗ ಮೋದಿಯ ಕೈ ನಡುಗುತ್ತಿತ್ತು, ಇದು ದೇಶದ ಅತಿದೊಡ್ಡ ಹಗರಣ': ರಾಹುಲ್‌...

‘ಚುನಾವಣಾ ಬಾಂಡ್‌ ಬಗ್ಗೆ ಮಾತನಾಡುವಾಗ ಮೋದಿಯ ಕೈ ನಡುಗುತ್ತಿತ್ತು, ಇದು ದೇಶದ ಅತಿದೊಡ್ಡ ಹಗರಣ’: ರಾಹುಲ್‌ ಗಾಂಧಿ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ,  ಚುನಾವಣಾ ಬಾಂಡ್‌ ವಿಶ್ವದ ಅತಿದೊಡ್ಡ ಸುಲಿಗೆ ದಂಧೆ ಮತ್ತು ವಿಶ್ವದ ಅತಿದೊಡ್ಡ ಹಗರಣ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹಲ್‌ ಗಾಂಧಿ, ಮೋದಿ ಅವರು ಇತ್ತೀಚೆಗೆ ಸುದ್ದಿ ಸಂಸ್ಥೆ ANIಗೆ ನೀಡಿದ ಸಂದರ್ಶನವನ್ನು ಉಲ್ಲೇಖಿಸಿದ್ದಾರೆ, ಚುನಾವಣಾ ಬಾಂಡ್ ಯೋಜನೆಯನ್ನು ಸಮರ್ಥಿಸುವಾಗ ಪ್ರಧಾನಿ ಹೆದರುತ್ತಿದ್ದರು, ಇದನ್ನು ಸುಪ್ರೀಂಕೋರ್ಟ್ ಅಸಂವಿಧಾನಿಕ ಎಂದು ರದ್ದುಗೊಳಿಸಿದೆ. ಚುನಾವಣಾ ಬಾಂಡ್‌ಗಳು ವ್ಯಕ್ತಿಗಳು ಮತ್ತು ಕಂಪೆನಿಗಳಿಗೆ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣ ನೀಡಲು ಅವಕಾಶ ಮಾಡಿಕೊಟ್ಟವು ಎಂದು ಹೇಳಿದ್ದಾರೆ.

ಒಂದೂವರೆ ಗಂಟೆಗಳ ಸಂದರ್ಶನದಲ್ಲಿ ಅವರು ಚುನಾವಣಾ ಬಾಂಡ್‌ಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಲು ಪ್ರಯತ್ನಿಸಿದರು. ಚುನಾವಣಾ ಬಾಂಡ್‌ಗಳ ಬಗ್ಗೆ ಮಾತನಾಡುವಾಗ ಅವರ ಕೈಗಳು ನಡುಗುತ್ತಿದ್ದವು. ಏಕೆಂದರೆ ಎಲೆಕ್ಟೋರಲ್ ಬಾಂಡ್ ಯೋಜನೆಯು ವಿಶ್ವದ ಅತಿದೊಡ್ಡ ಹಗರಣವಾಗಿದೆ ಎಂದು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಪ್ರಚಾರ ನಡೆಸುತ್ತಿದ್ದ ರಾಹುಲ್‌ ಗಾಂಧಿ ಹೇಳಿದ್ದಾರೆ.

ಚುನಾವಣಾ ಬಾಂಡ್‌ ಯೋಜನೆಯನ್ನು ಪರಿಚಯಿಸಿದಾಗ, ಇದು ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದ್ದರು. ಆದರೆ, ಬಿಜೆಪಿ ಸರ್ಕಾರವು ದಾನಿಗಳ ವಿವರಗಳನ್ನು ಮತ್ತು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ದೇಣಿಗೆಗಳ ಸಂಖ್ಯೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸುವ ಮೊದಲು ಮರೆಮಾಚಿತ್ತು. ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಾರ್ವಜನಿಕಗೊಳಿಸಿದಾಗ, ಕಂಪನಿಯೊಂದು ಸರ್ಕಾರಿ ಗುತ್ತಿಗೆಯನ್ನು ಪಡೆದುಕೊಂಡ ನಂತರ ಮರುದಿನವೇ ಚುನಾವಣಾ ಬಾಂಡ್‌ಗಳ ಮೂಲಕ (ಬಿಜೆಪಿಗೆ) ಕೋಟಿಗಳನ್ನು ನೀಡಿದೆ ಎಂದು ತೋರಿಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ಜಾರಿ ಇಲಾಖೆ (ಇಡಿ) ತನಿಖೆಯನ್ನು ನಡೆಸುತ್ತಿರುವ ಆರೋಪಿತ ಕಂಪನಿಗಳು ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದರು ಮತ್ತು ಆ ಬಳಿಕ ತನಿಖೆ ನೆನೆಗುದಿಗೆ ಬಿದ್ದಿದೆ. ಸಣ್ಣ ಪುಂಡರು ಇಂತಹ ಕೆಲಸಗಳನ್ನು ಮಾಡುತ್ತಾರೆ, ಯಾರನ್ನಾದರೂ ಬೆದರಿಸಿ ಹಣ ಪಡೆಯುತ್ತಾರೆ. ಸರ್ಕಾರ ಕಂಪೆನಿಗಳಿಗೆ ಬೆದರಿಕೆ ಹಾಕಿ ಹಣ ಪಡೆದಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ, ಇದೇ ಮಾದರಿಯಲ್ಲಿ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಒಕ್ಕೂಟವೂ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸಿಕೊಂಡಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ತಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ, ಮಹಿಳೆಯರಿಗೆ ತಿಂಗಳಿಗೆ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ.ಗಳನ್ನು ದೇಶದ ಬಡ ಕುಟುಂಬದ ಹಿರಿಯ ಮಹಿಳೆಯರ ಖಾತೆಗೆ ಜಮಾ ಮಾಡಲಿದ್ದೇವೆ. ದಿನದ 24 ಗಂಟೆ ದುಡಿಯುವ ಮಹಿಳೆಯರಿಗೆ ಅನುಕೂಲ ಕಲ್ಪಿಸುವ ಇದು ಕ್ರಾಂತಿಕಾರಿ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ.

ಮೋದಿ ಸರಕಾರ ಶ್ರೀಮಂತರ ಕೋಟ್ಯಂತರ ರೂ.ಸಾಲಮನ್ನಾ ಮಾಡಿದೆ. ಅನ್ನದಾತರ ಸಾಲಮನ್ನಾ ಮಾಡಲು ಸಾಧ್ಯವಾಗುವುದಿಲ್ಲ ಏಕೆ? ಎಂದು ಪ್ರಶ್ನಿಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಿದೆ. ಬೆಳೆಗಳಿಗೆ ಸ್ವಾಮಿನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ನಿಗದಿ ಮಾಡಲಿದ್ದು, ಬೆಳೆ ವಿಮಾ ಪರಿಹಾರವನ್ನು 30 ದಿನದಲ್ಲಿ ಪಾವತಿಸಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...