Homeಮುಖಪುಟ'ಚುನಾವಣಾ ಬಾಂಡ್‌ ಬಗ್ಗೆ ಮಾತನಾಡುವಾಗ ಮೋದಿಯ ಕೈ ನಡುಗುತ್ತಿತ್ತು, ಇದು ದೇಶದ ಅತಿದೊಡ್ಡ ಹಗರಣ': ರಾಹುಲ್‌...

‘ಚುನಾವಣಾ ಬಾಂಡ್‌ ಬಗ್ಗೆ ಮಾತನಾಡುವಾಗ ಮೋದಿಯ ಕೈ ನಡುಗುತ್ತಿತ್ತು, ಇದು ದೇಶದ ಅತಿದೊಡ್ಡ ಹಗರಣ’: ರಾಹುಲ್‌ ಗಾಂಧಿ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ,  ಚುನಾವಣಾ ಬಾಂಡ್‌ ವಿಶ್ವದ ಅತಿದೊಡ್ಡ ಸುಲಿಗೆ ದಂಧೆ ಮತ್ತು ವಿಶ್ವದ ಅತಿದೊಡ್ಡ ಹಗರಣ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹಲ್‌ ಗಾಂಧಿ, ಮೋದಿ ಅವರು ಇತ್ತೀಚೆಗೆ ಸುದ್ದಿ ಸಂಸ್ಥೆ ANIಗೆ ನೀಡಿದ ಸಂದರ್ಶನವನ್ನು ಉಲ್ಲೇಖಿಸಿದ್ದಾರೆ, ಚುನಾವಣಾ ಬಾಂಡ್ ಯೋಜನೆಯನ್ನು ಸಮರ್ಥಿಸುವಾಗ ಪ್ರಧಾನಿ ಹೆದರುತ್ತಿದ್ದರು, ಇದನ್ನು ಸುಪ್ರೀಂಕೋರ್ಟ್ ಅಸಂವಿಧಾನಿಕ ಎಂದು ರದ್ದುಗೊಳಿಸಿದೆ. ಚುನಾವಣಾ ಬಾಂಡ್‌ಗಳು ವ್ಯಕ್ತಿಗಳು ಮತ್ತು ಕಂಪೆನಿಗಳಿಗೆ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣ ನೀಡಲು ಅವಕಾಶ ಮಾಡಿಕೊಟ್ಟವು ಎಂದು ಹೇಳಿದ್ದಾರೆ.

ಒಂದೂವರೆ ಗಂಟೆಗಳ ಸಂದರ್ಶನದಲ್ಲಿ ಅವರು ಚುನಾವಣಾ ಬಾಂಡ್‌ಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಲು ಪ್ರಯತ್ನಿಸಿದರು. ಚುನಾವಣಾ ಬಾಂಡ್‌ಗಳ ಬಗ್ಗೆ ಮಾತನಾಡುವಾಗ ಅವರ ಕೈಗಳು ನಡುಗುತ್ತಿದ್ದವು. ಏಕೆಂದರೆ ಎಲೆಕ್ಟೋರಲ್ ಬಾಂಡ್ ಯೋಜನೆಯು ವಿಶ್ವದ ಅತಿದೊಡ್ಡ ಹಗರಣವಾಗಿದೆ ಎಂದು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಪ್ರಚಾರ ನಡೆಸುತ್ತಿದ್ದ ರಾಹುಲ್‌ ಗಾಂಧಿ ಹೇಳಿದ್ದಾರೆ.

ಚುನಾವಣಾ ಬಾಂಡ್‌ ಯೋಜನೆಯನ್ನು ಪರಿಚಯಿಸಿದಾಗ, ಇದು ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದ್ದರು. ಆದರೆ, ಬಿಜೆಪಿ ಸರ್ಕಾರವು ದಾನಿಗಳ ವಿವರಗಳನ್ನು ಮತ್ತು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ದೇಣಿಗೆಗಳ ಸಂಖ್ಯೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸುವ ಮೊದಲು ಮರೆಮಾಚಿತ್ತು. ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಾರ್ವಜನಿಕಗೊಳಿಸಿದಾಗ, ಕಂಪನಿಯೊಂದು ಸರ್ಕಾರಿ ಗುತ್ತಿಗೆಯನ್ನು ಪಡೆದುಕೊಂಡ ನಂತರ ಮರುದಿನವೇ ಚುನಾವಣಾ ಬಾಂಡ್‌ಗಳ ಮೂಲಕ (ಬಿಜೆಪಿಗೆ) ಕೋಟಿಗಳನ್ನು ನೀಡಿದೆ ಎಂದು ತೋರಿಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ಜಾರಿ ಇಲಾಖೆ (ಇಡಿ) ತನಿಖೆಯನ್ನು ನಡೆಸುತ್ತಿರುವ ಆರೋಪಿತ ಕಂಪನಿಗಳು ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದರು ಮತ್ತು ಆ ಬಳಿಕ ತನಿಖೆ ನೆನೆಗುದಿಗೆ ಬಿದ್ದಿದೆ. ಸಣ್ಣ ಪುಂಡರು ಇಂತಹ ಕೆಲಸಗಳನ್ನು ಮಾಡುತ್ತಾರೆ, ಯಾರನ್ನಾದರೂ ಬೆದರಿಸಿ ಹಣ ಪಡೆಯುತ್ತಾರೆ. ಸರ್ಕಾರ ಕಂಪೆನಿಗಳಿಗೆ ಬೆದರಿಕೆ ಹಾಕಿ ಹಣ ಪಡೆದಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ, ಇದೇ ಮಾದರಿಯಲ್ಲಿ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಒಕ್ಕೂಟವೂ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸಿಕೊಂಡಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ತಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ, ಮಹಿಳೆಯರಿಗೆ ತಿಂಗಳಿಗೆ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ.ಗಳನ್ನು ದೇಶದ ಬಡ ಕುಟುಂಬದ ಹಿರಿಯ ಮಹಿಳೆಯರ ಖಾತೆಗೆ ಜಮಾ ಮಾಡಲಿದ್ದೇವೆ. ದಿನದ 24 ಗಂಟೆ ದುಡಿಯುವ ಮಹಿಳೆಯರಿಗೆ ಅನುಕೂಲ ಕಲ್ಪಿಸುವ ಇದು ಕ್ರಾಂತಿಕಾರಿ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ.

ಮೋದಿ ಸರಕಾರ ಶ್ರೀಮಂತರ ಕೋಟ್ಯಂತರ ರೂ.ಸಾಲಮನ್ನಾ ಮಾಡಿದೆ. ಅನ್ನದಾತರ ಸಾಲಮನ್ನಾ ಮಾಡಲು ಸಾಧ್ಯವಾಗುವುದಿಲ್ಲ ಏಕೆ? ಎಂದು ಪ್ರಶ್ನಿಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಿದೆ. ಬೆಳೆಗಳಿಗೆ ಸ್ವಾಮಿನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ನಿಗದಿ ಮಾಡಲಿದ್ದು, ಬೆಳೆ ವಿಮಾ ಪರಿಹಾರವನ್ನು 30 ದಿನದಲ್ಲಿ ಪಾವತಿಸಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...