Homeಮುಖಪುಟ'ಇದು ಗಲಭೆಕೋರರು, ದಂಗೆಕೋರರು ಮತ್ತು ಲೂಟಿಕೋರರ ಸರ್ಕಾರ..'; ಬಿಜೆಪಿ ವಿರುದ್ಧ ಕಿಡಿಕಾರಿದ ಮಮತಾ ಬ್ಯಾನರ್ಜಿ

‘ಇದು ಗಲಭೆಕೋರರು, ದಂಗೆಕೋರರು ಮತ್ತು ಲೂಟಿಕೋರರ ಸರ್ಕಾರ..’; ಬಿಜೆಪಿ ವಿರುದ್ಧ ಕಿಡಿಕಾರಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಕೇಂದ್ರವು ಗಲಭೆಕೋರರು, ದಂಗೆಕೋರರು ಮತ್ತು ಲೂಟಿಕೋರರ ಸರ್ಕಾರವಾಗಿದೆ” ಎಂದು ಆಕ್ರೋಶ ಹೊರಹಾಕಿದರು.

ಕಳೆದ ವರ್ಷದಿಂದ ಭಾರೀ ಜನಾಂಗೀಯ ಹಿಂಸಾಚಾರ ಕಂಡಿರುವ ಮಣಿಪುರದ ಪಕ್ಕದ ರಾಜ್ಯವಾದ ಅಸ್ಸಾಂನ ಸಿಲ್ಚಾರ್‌ನಲ್ಲಿ ತನ್ನ ಪಕ್ಷದ ಅಭ್ಯರ್ಥಿಯ ಪರವಾಗಿ ಮಾತನಾಡಿದ ಅವರು “ಪ್ರಧಾನಿ ನರೇಂದ್ರ ಮೋದಿ ನಿಮಗೆ ನ್ಯಾಯ ನೀಡುತ್ತಾರೆ ಎಂದು ನೀವು ಭಾವಿಸುತ್ತೀರಾ” ಎಂದು ಜನರನ್ನು ಪ್ರಶ್ನಿಸಿದರು.

ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬ್ಯಾನರ್ಜಿ, “ಈ ಚುನಾವಣೆ ಭಯಾನಕವಾಗಲಿದೆ. ನೀವು ಈ ರೀತಿಯ ಕಳಂಕಿತ ಚುನಾವಣೆಯನ್ನು ನೋಡಿಲ್ಲ. ಇದು ಏಜೆನ್ಸಿಯ ಸರ್ಕಾರ, ಏಜೆನ್ಸಿಗಾಗಿ ಮತ್ತು ಏಜೆನ್ಸಿಯಿಂದ” ಎಂದು ಹೇಳಿದರು.

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವನ್ನು ಕುರಿತು ಮಾತನಾಡಿದ ಅವರು, “ಮೋದಿ ನಿಮಗೆ ನ್ಯಾಯ ಕೊಡುತ್ತಾರೆ ಎಂದು ನೀವು ಭಾವಿಸುತ್ತೀರಾ? ನೀವು ಇದನ್ನು ನಂಬುತ್ತೀರಾ? ನೀವು ಈಗ ಸಾಯುತ್ತಿದ್ದೀರಿ ಎಂದು ನೀವು ಭಾವಿಸಿದರೆ, ನೀವು ಅದನ್ನು ನಂಬಬಹುದು. ಆದರೆ, ಮೋದಿ ಯಾರಿಗಾದರೂ ಏನಾದರೂ ಮಾಡುತ್ತಾರೆ ಎಂಬ ನಂಬಿಕೆಯೂ ಬೇಡ. ಏಕೆಂದರೆ ಇದು ಗಲಭೆಕೋರರ, ದುರುಳರ, ಲೂಟಿಕೋರರ ಸರ್ಕಾರ, ಇದು ಜುಮ್ಲಾಬಾಜ್ ಸರ್ಕಾರ; ಅವರು ಕ್ಷಮೆಗೆ ಅರ್ಹರಲ್ಲ” ಎಂದು ಆಕ್ರೋಶ ಹೊರಹಾಕಿದರು.

ಇಂಡಿಯಾ ಮೈತ್ರಿ ಕುರಿತು ಮಾತನಾಡಿ, “ಒಟ್ಟಾಗಿರುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಮೈತ್ರಿ ಎಂದರೆ ತೃಣಮೂಲ ಕಾಂಗ್ರೆಸ್. ನಾವು ಇಂಡಿಯಾಕ್ಕೆ ದಾರಿ ತೋರಿಸುತ್ತೇವೆ. ಬಂಗಾಳದಲ್ಲಿ ನಾವು ಬಿಜೆಪಿ ವಿರುದ್ಧ ಏಕಾಂಗಿಯಾಗಿ ಹೋರಾಡುತ್ತಿದ್ದೇವೆ. ಕಾಂಗ್ರೆಸ್ ಅಥವಾ ಬಿಜೆಪಿ ಇಲ್ಲ, ಕಾಂಗ್ರೆಸ್ ಅಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತದೆ. ಅಖಿಲ ಭಾರತ ಮಟ್ಟದಲ್ಲಿ ನಾವು ಇಂಡಿಯಾಕ್ಕೆ ನಾಯಕತ್ವವನ್ನು ನೀಡುತ್ತೇವೆ” ಎಂದರು.

ಸಿಲ್ಚಾರ್ ಕ್ಷೇತ್ರದ ಕುರಿತು:

ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ರಾಧೇಶ್ಯಾಮ್ ಬಿಸ್ವಾಸ್ ಅವರು ಸಿಲ್ಚಾರ್ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿಗೆ. 90ರ ದಶಕದವರೆಗೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಸಿಲ್ಚಾರ್, ನಂತರದ ದಿನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಜಿದ್ದಾಜಿದ್ದಿನ ಕ್ಷೇತ್ರವಾಗಿದೆ.

ಬಿಜೆಪಿಯ ರಾಜ್‌ದೀಪ್ ರಾಯ್ ಹಾಲಿ ಸಂಸದರಾಗಿದ್ದು, ಪಕ್ಷವು ಈಗಾಗಲೇ ಅರ್ಧದಷ್ಟು ಗೆದ್ದಿದೆ ಎಂದು ಪರಿಗಣಿಸಿರುವ ಯುದ್ಧಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. ಆದಾಗ್ಯೂ, ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಬದಲಾಯಿಸಿದೆ. ಅಸ್ಸಾಂ ಸಚಿವ ಪರಿಮಳ್ ಸುಕ್ಲಬಾದ್ಯ ಅವರನ್ನು ಕಣಕ್ಕಿಳಿಸಲು ಆಯ್ಕೆ ಮಾಡಿದ್ದು, ಅವರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಸೂರ್ಯಕಾಂತ ಸರ್ಕಾರ್ ಅವರನ್ನು ಹೆಸರಿಸಿದೆ.

ಇದನ್ನೂ ಓದಿ; ಭೀಮಾ ಕೋರೆಗಾಂವ್ ಪ್ರಕರಣ: 6 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಶೋಮಾ ಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...