Homeಕರ್ನಾಟಕಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ 'ಕಾಂಗ್ರೆಸ್‌' ಸರಕಾರದ 'ಗ್ಯಾರಂಟಿ ಯೋಜನೆ' ಬಗ್ಗೆ ತೇಜಸ್ವಿ ಸೂರ್ಯ...

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

- Advertisement -
- Advertisement -

ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು ‘ಮತಿ ಹೀನ ಉಚಿತ ಕೊಡುಗೆ’ ಎಂದು ಹೇಳಿಕೊಂಡು ಜನಸಾಮಾನ್ಯರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕ ಸರಕಾರ ಅಭಿವೃದ್ಧಿ ಹಾಗೂ ಮೂಲಭೂತ ಯೋಜನೆಗಳ ಹಣವನ್ನು ಮತಿ ಹೀನ ಉಚಿತ ಕೊಡುಗೆಗೆ ಬಳಸುತ್ತಿದೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ದಿವಾಳಿಯಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆಯ ಅವಧಿಯಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ  ತರಲಾಗಿತ್ತು. ಇದರಂತೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ 2000ರೂ. ಮತ್ತು ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‌ ಉಚಿತ ವಿದ್ಯುತ್‌, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪ್ರತಿ ತಿಂಗಳು 10ಕೆಜಿ ಅಕ್ಕಿ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಧನಸಹಾಯ ಮತ್ತು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿತ್ತು. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದಲ್ಲಿ ಉತ್ತಮವಾದ ಸ್ಪಂದನೆ ವ್ಯಕ್ತವಾಗಿತ್ತು. ಬಡ ಜನರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಸಿಕ್ಕಿದ ಹಣದಿಂದ ಆಹಾರ ಸಾಮಾಗ್ರಿಗಳ ಖರೀದಿ, ಔಷಧಿಗಳಿಗೆ, ಮಕ್ಕಳ ವಿಧ್ಯಾಭ್ಯಾಸಕ್ಕೆ ಸಹಕಾರಿ ಯಾಗಿತ್ತು. ಎಲ್ಲೆಡೆ ಪ್ರಯಾಣಕ್ಕೆ ಪುರುಷರನ್ನೇ ಆಶ್ರಯಿಸಬೇಕಿದ್ದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯಿಂದ ಆಶಾಭಾವನೆ ಮೂಡಿತ್ತು. ಗೃಹಜ್ಯೋತಿ ಯೋಜನೆಯಿಂದ ಬಡ ಜನರಿಗೆ ವಿದ್ಯುತ್‌ ಬಿಲ್‌ ಕಟ್ಟುವುದರಿಂದ ವಿನಾಯಿತಿ ನೀಡಿತ್ತು, ಯುವನಿಧಿ ಯೋಜನೆಯು ನಿರುದ್ಯೋಗಿ ಯುವಕರಿಗೆ ಆಶ್ರಯವನ್ನು ನೀಡಿತ್ತು.

ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ಹೆಚ್ಚು ಫಲಪ್ರದವಾಗಿದೆ ಎಂಬುವುದು ಇತ್ತೀಚೆಗೆ ರಾಜ್ಯದಾದ್ಯಂತ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಗಳು ಬಹಿರಂಗಪಡಿಸಿದ್ದವು, ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಮಾವೇಶಗಳಲ್ಲಿ ಭಾಗವಹಿಸಿದ್ದ ಮಹಿಳೆಯರು ತಮಗೆ ಗ್ಯಾರಂಟಿ ಯೋಜನೆ ಹೇಗೆ ಸಹಕಾರಿಯಾಯಿತು ಎಂಬುವುದನ್ನು ಬಿಚ್ಟಿಟ್ಟಿದ್ದರು.

ಫಾತಿಮಾ ರೋಡ್ರಿಗ್ರಸ್ ಎಂಬವರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಾ, ನಾನು ಗೃಹಲಕ್ಷ್ಮೀ ಯೋಜನೆಯಿಂದ ಲಾಭ ಪಡೆದಿದ್ದೇನೆ. ಸಿಂಗಲ್ ಪೇರೆಂಟ್ ಆಗಿದ್ದು, ನನಗೆ ಲಂಗ್ಸ್ ಪ್ರಾಬ್ಲಮ್ ಇರುವುದರಿಂದ ಸರಿಯಾಗಿ ಕೆಲಸ ಮಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಬಂದ ಮೇಲೆ ನನ್ನ ಮಗನ ಶಾಲಾ ಶುಲ್ಕ ಕಟ್ಟಿದ್ದೇನೆ, ನನ್ನ ಮೆಡಿಸನ್​ಗೆ ಅವಶ್ಯಕವಾದ ಹಣವನ್ನು ಪಡೆದಿದ್ದೇನೆ. ನನ್ನ ಕಷ್ಟವನ್ನು ನೋಡಿ ಅಂಗನವಾಡಿ ಕಾರ್ಯಕರ್ತರು ನನಗೆ ಗೃಹಲಕ್ಷ್ಮೀ ಹಣ ಸಿಗುವ ಹಾಗೆ ಮಾಡಿದ್ದಾರೆ. ಸರ್ಕಾರ ಮಾಡಿದ ಈ ಯೋಜನೆ ನನಗೆ ಸಾಕಷ್ಟು ಉಪಯೋಗ ಮಾಡಿಕೊಟ್ಟಿದೆ ಎಂದಿದ್ದಾರೆ.

ಭದ್ರಾವತಿ ಶಾಲಿನಿಯವರು ಮಾತನಾಡ್ತಾ , ನಾನು ಭದ್ರಾವತಿಗೆ ಶಿವಮೊಗ್ಗಕ್ಕೆ ಹೌಸ್ ಕೀಪಿಂಗ್ ಕೆಲಸಕ್ಕೆ ಬರುತ್ತಿದ್ದೆ. ಪ್ರತಿ ತಿಂಗಳು ಒಂದುವರೆ ಸಾವಿರ ಖರ್ಚಾಗುತ್ತಿತ್ತು. ಇದೀಗ ಶಕ್ತಿ ಯೋಜನೆ ಬಂದಿದ್ದರಿಂದ ನನಗೆ ಈ ಹಣವನ್ನು ಮನೆಯ ಖರ್ಚಿಗೆ ಉಪಯೋಗಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ ಪುತ್ತೂರಿನ ಅಸ್ಮಾ, ನನ್ನ ಪತಿ ನನ್ನನ್ನು ಬಿಟ್ಟು ಮೂರು ವರ್ಷಗಳು ಕಳೆದಿದೆ, ನನಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ, ಅವರನ್ನು ಸಾಕುವುದು ನನಗೆ ದೊಡ್ಡ ಸವಾಲಾಗಿತ್ತು, ಇದೀಗ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆ ಬಂದ ಬಳಿಕ ನನಗೆ ಮಕ್ಕಳಿಗೆ ಅನ್ನ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವೃದ್ಧೆಯ ಮಗ ಅನಾರೋಗ್ಯದಿಂದ ನಿಧನರಾಗಿದ್ದರು. ಮಗನ ಮೃತದೇಹದ ಮುಂದೆ ಕಣ್ಣೀರು ಹಾಕಿದ ವೃದ್ಧೆ, “ಯವ್ವಾ, ನೀ ಬದುಕಾಕ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು” ಎಂದು ಮಗ  ಸಾಯುವ ಮೊದಲು ಹೇಳಿದ್ದ ಎನ್ನುವ ವಿಚಾರವನ್ನು ಆ ತಾಯಿ ತನ್ನ ಪುತ್ರನ ಸಾವಿನ ನೋವಿನ ನಡುವೆ ನೆನಪು ಮಾಡಿಕೊಂಡು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಸರಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಕಣ್ಣುತೆರೆಯುವಂತೆ ಮಾಡಿತ್ತು.

ಗ್ಯಾರಂಟಿ ಯೋಜನೆಯಲ್ಲಿ ಘೋಷಿಸಿದ್ದಂತೆ ರಾಜ್ಯದ ಜನರಿಗೆ 10ಕೆಜಿ ಉಚಿತ ಅಕ್ಕಿ ನೀಡಲು, ರಾಜ್ಯದ  ಕಾಂಗ್ರೆಸ್‌ ಸರಕಾರ ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಎಫ್‌ಸಿಐ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದರು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಕೇಂದ್ರದ ಬಿಜೆಪಿ ಸರಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ರಾಜಕೀಯ ಮಾಡಿತ್ತು. ಇದರಿಂದ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡಲು ಸಮಸ್ಯೆಯಾಗಿತ್ತು. ಇದಕ್ಕೆ ರಾಜ್ಯ ಸರಕಾರ 5 ಕೆ.ಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿಯ ಹಣ ಜನರ ಖಾತೆಗೆ ಜಮೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಿಜೆಪಿಯ ನಿದ್ದೆಗೆಡಿಸಿರುವ ಜೊತೆಗೆ ಬಿಜೆಪಿಗೆ ಭಾರೀ ಹೊಡೆತವನ್ನು ನೀಡುರುವುದು ನಿಜ. ಅದಕ್ಕಾಗಿಯೇ ‘ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ’ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರವನ್ನು ನಡೆಸಿಕೊಂಡು ಬಂದಿರುವುದನ್ನು ಗಮನಿಸಬಹುದಾಗಿದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಭಾರೀ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ, ಬಿಜೆಪಿಯ ಸಿಎಎ, ಒಂದು ರಾಷ್ಟ್ರ, ಒಂದು ಚುನಾವಣೆಯಂತಹ ವಿಭಜನೀಯ ಕಾನೂನುಗಳು, ನೀತಿಗಳ ಭರವಸೆಗಳ ನಡುವೆ ಕಾಂಗ್ರೆಸ್‌ನ ಜನಸ್ನೇಹಿ ಯೋಜನೆಗಳು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ತಲೆನೋವು ಸೃಷ್ಟಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...