Homeಮುಖಪುಟದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ...

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ ಪತ್ನಿ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು ಹೇಳಿರುವ ಅವರ ಸಂದೇಶವನ್ನು ಜನರಿಗೆ ನೆನಪಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ಯಾರು?

ಅಡ್ಮಿರಲ್ ರಾಮದಾಸ್ ಅವರು ಸೆಪ್ಟೆಂಬರ್ 5, 1933ರಂದು ಬಾಂಬೆಯ ಮಾಟುಂಗಾದಲ್ಲಿ ಜನಿಸಿದರು. ಅವರ ಆರಂಭಿಕ ಶಿಕ್ಷಣ ದೆಹಲಿಯಲ್ಲಿ ಪ್ರೆಸೆಂಟೇಶನ್ ಕಾನ್ವೆಂಟ್ ಮತ್ತು ರಾಮ್ಜಾಸ್ ಕಾಲೇಜಿನಲ್ಲಿ ನಡೆದಿತ್ತು. ಅವರು 1949ರಲ್ಲಿ ಕ್ಲೆಮೆಂಟ್ ಟೌನ್ ಡೆಹ್ರಾಡೂನ್‌ನಲ್ಲಿರುವ ಆರ್ಮ್ಡ್ ಫೋರ್ಸಸ್ ಅಕಾಡೆಮಿಯ ಜಂಟಿ ಸೇವೆಗಳ ವಿಭಾಗಕ್ಕೆ ಸೇರಿದ್ದಾರೆ, ಸೆಪ್ಟೆಂಬರ್ 1953ರಲ್ಲಿ ಭಾರತೀಯ ನೌಕಾಪಡೆಗೆ ನೇಮಕಗೊಂಡಿದ್ದರು. ಇವರು ಕೊಚ್ಚಿಯಲ್ಲಿ ನೌಕಾ ಅಕಾಡೆಮಿಯನ್ನು ಸ್ಥಾಪಿಸಿದ್ದರು. 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಪ್ರಮುಖ ಪಾತ್ರ ವಹಿಸಿದ INS ಬಿಯಾಸ್‌ಗೆ ಕಮಾಂಡಿಂಗ್ ಆಗಿದ್ದರು. ಪಶ್ಚಿಮ ಜರ್ಮನಿಯ ಬಾನ್‌ನಲ್ಲಿ ಭಾರತೀಯ ನೌಕಾಪಡೆಯ ಪ್ರಮುಖ ಅಧಿಕಾರಿಯಾಗಿ ಆಗಿ ಸೇವೆ ಸಲ್ಲಿಸಿದ್ದರು. ಪೂರ್ವ ನೌಕಾ ಕಮಾಂಡ್‌ನ ಫ್ಲೀಟ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ ಮತ್ತು ದಕ್ಷಿಣ ಮತ್ತು ಪೂರ್ವ ನೌಕಾ ಕಮಾಂಡ್‌ಗಳೆರಡಕ್ಕೂ ಕಮಾಂಡರ್ ಆಗಿದ್ದರು. ಅವರು 13ನೇ ಚೀಫ್ ಆಫ್ ನೇವಲ್ ಸ್ಟಾಫ್ (CNS) ಆಗಿ 30ನೇ ನವೆಂಬರ್ 1990 ರಂದು ಅಧಿಕಾರ ವಹಿಸಿಕೊಂಡಿದ್ದರು. ಅವರು 1993ರಲ್ಲಿ ಭಾರತೀಯ ನೌಕಾಪಡೆಯಿಂದ ನಿವೃತ್ತರಾಗಿದ್ದರು.

ನಿವೃತ್ತಿಯ ನಂತರ, ಅಡ್ಮಿರಲ್ ರಾಮದಾಸ್ ಅವರು ಮಹಾರಾಷ್ಟ್ರದ ಅಲಿಬಾಗ್‌ನ ಭೈಮಾಲಾ ಗ್ರಾಮದಲ್ಲಿ ವಾಸಿಸುತ್ತಿದ್ದರು. 1971ರ ಯುದ್ಧ ಕಾರ್ಯಾಚರಣೆಗಳಲ್ಲಿ ಅವರ ಶೌರ್ಯ ಕೃತ್ಯಗಳನ್ನು ಗುರುತಿಸಿ ಮಹಾರಾಷ್ಟ್ರ ಸರ್ಕಾರವು ಅವರಿಗೆ ನೀಡಿದ ಭೂಮಿಯಲ್ಲಿ ನೆಲೆಸಿದ್ದರು. ಅಲ್ಲಿ ಅವರು ಮತ್ತು ಅವರ ಪತ್ನಿ ಲಲಿತಾ ರಾಮದಾಸ್ ಅವರು ವೈವಿಧ್ಯಮಯ ಕೃಷಿ ಕಾರ್ಯವನ್ನು ಮಾಡಿದ್ದರು. ಸಾವಯವ ಕೃಷಿಯ ಜೊತೆ  ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇವುಗಳಲ್ಲಿ ಪಾಕಿಸ್ತಾನ ಇಂಡಿಯಾ ಪೀಪಲ್ಸ್ ಫೋರಮ್ ಫಾರ್ ಪೀಸ್ ಅಂಡ್ ಡೆಮಾಕ್ರಸಿ (ಪಿಐಪಿಪಿಎಫ್‌ಡಿ), ಇಂಡೋ-ಪಾಕಿಸ್ತಾನ್ ಸೋಲ್ಜರ್ಸ್ ಇನಿಶಿಯೇಟಿವ್ ಫಾರ್ ಪೀಸ್ (ಐಪಿಎಸ್‌ಐ),  ಪರಮಾಣು ನಿಶ್ಯಸ್ತ್ರೀಕರಣ ಮತ್ತು ಶಾಂತಿಗಾಗಿ ಒಕ್ಕೂಟದ ಜೊತೆಗೆ ತೊಡಗಿಸಿಕೊಂಡರು, ಅವರ ಹೋರಾಟವನ್ನು ಬೆಂಬಲಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 22 ಗಾಂವ್ ಬಚಾವೋ ಆಂದೋಲನ ಅಡಿಯಲ್ಲಿ SEZ ವಿರುದ್ಧ ಹೋರಾಟ, ಲಿಂಗ ಸಮಾನತೆ, ಮೀನುಗಾರರ ಹಕ್ಕುಗಳು, ರೈತರ ಹಕ್ಕುಗಳು, ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳು ಸೇರಿದಂತೆ ವಿವಿಧ ಹೋರಾಟಗಳಲ್ಲಿ ಇವರು ಮುಂಚೂಣಿಯಲ್ಲಿದ್ದರು.

ಸಂದೇಶದಲ್ಲೇನಿದೆ?

ನಮಸ್ಕಾರ, ನನ್ನ ಹೆಸರು ಲಲಿತಾ ರಾಮದಾಸ್‌, ನನ್ನ ಪತಿ ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್, ಅವರು 90ನೇ ವರ್ಷದಲ್ಲಿ ಸಿಕಂದರಾಬಾದ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾನು ಅವರ ಧ್ವನಿಯನ್ನು ಕೇಳುತ್ತಿದ್ದೇನೆ. ದೇಶ, ಪ್ರೀತಿಯ ಜನರು, 45 ವರ್ಷಗಳ ಕಾಲ ಅವರು ಕೆಲಸ ಮಾಡಿದ ಭಾರತೀಯ ನೌಕಾಪಡೆ ಮತ್ತು ಸಂವಿಧಾನದ ಬಗ್ಗೆ ಅವರ ಕಾಳಜಿಯನ್ನು ನೆನಪಿಸಿಕೊಳ್ಳುತ್ತೇನೆ. ಅವರ ನಿವೃತ್ತಿ ಬಳಿಕ ನಾವು ರಾಯಗಢ ಜಿಲ್ಲೆಯ ಅಲಿಬಾಗ್‌ನ ಭೈಮಾಲಾ ಹಳ್ಳಿಯಲ್ಲಿ ವಾಸಿಸುತ್ತಿದ್ದೆವು. ಅವರು ಜಮಮೀನಿನಲ್ಲಿ ಕೆಲಸ ಮಾಡಿದರು, ಜಮೀನು, ಕೃಷಿ, ಕಾಡುಗಳ ಬಗ್ಗೆ ಜನರಿಂದ ತಿಳಿದರು. ಗಾಂವ್ ಬಚಾವೋ ಆಂದೋಲನದ ಅಡಿಯಲ್ಲಿ ವಿಶೇಷ ಆರ್ಥಿಕ ವಲಯದ (SEZ) ಬಗ್ಗೆ  ಹೋರಾಟವನ್ನು ಮಾಡಿದರು. ಅವರು ಆಂದೋಲನದ ನೇತೃತ್ವ ವಹಿಸಿದ್ದರು. 4 ವರ್ಷಗಳ ಕಾಲ ಅವರು  ಹೋರಾಟವನ್ನು ನಡೆಸಿದ್ದರು.

ಅಡ್ಮಿರಲ್ ರಾಮ್‌ದಾಸ್ ಅವರು ಸಂವಿಧಾನದ ಪ್ರಬಲ ಪ್ರತಿಪಾದಕರಾಗಿದ್ದು, 16ನೇ ವರ್ಷಕ್ಕೆ ನೌಕಾಪಡೆಗೆ ಸೇರ್ಪಡೆಯಾಗಿದ್ದರು. 16ರಿಂದ 90ರವರೆಗೆ ನಾಗರಿಕನಾಗಿ ಅವರು ಅವರು ಕೊನೆಯ ದಿನಗಳಲ್ಲಿ ಸಮಾನತೆ ಭ್ರಾತೃತ್ವ, ಸ್ವಾತಂತ್ರ್ಯ, ನ್ಯಾಯವನ್ನು ಗೌರವಿಸದ ಶಕ್ತಿಗಳಿಂದ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಅವರು ಕಳವಳವನ್ನು ವ್ಯಕ್ತಪಡಿಸಿದ್ದರು. ಅನಾರೋಗ್ಯದ ದಿನಗಳಲ್ಲೂ ಅವರು 2024ರ ಗಣರಾಜ್ಯೋತ್ಸವದ ದಿನದಂದು ಸಾರ್ವಜನಿಕ ಸ್ಥಳದಲ್ಲಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ಏ.14ರಂದು ಅಂಬೇಡ್ಕರ್‌ ಜಯಂತಿಯನ್ನು ಆಚರಿಸುತ್ತೇವೆ. ಮುಂದಿನ ವಾರ ದೇಶದಲ್ಲಿ ಮತದಾನ ನಡೆಯಲಿದೆ. ಜನರು ದೇಶದಾದ್ಯಂತ ಮತದಾನ ಮಾಡಲಿದ್ದಾರೆ. ನಾನು ಅಲಿಬಾಗ್‌ಗೆ ಮತದಾನಕ್ಕೆ ಹೋಗುತ್ತಾನೆ. ನಾನು ಪತಿಯ ಜೊತೆ ಮತದಾನಕ್ಕೆ ಆಟೋ ರಿಕ್ಷಾದಲ್ಲಿ ಹೋದ ದಿನಗಳನ್ನು ನೆನಪಿಸುತ್ತೇನೆ, ಅವರು ತನ್ನ ಕೊನೆಯ ದಿನಗಳಲ್ಲಿ ನಾವು ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು, ನಿರ್ಭೀತಿಯಿಂದ ಮತ ಚಲಾಯಿಸುವ ಮೂಲಕ, ಪ್ರಜಾಪ್ರಭುತ್ವಕ್ಕಾಗಿ, ಜಾತ್ಯತೀತತೆಗಾಗಿ, ಪ್ರೀತಿ ಮತ್ತು ಶಾಂತಿಗಾಗಿ ವಿಭಜನೀಯ, ಸರ್ವಾಧಿಕಾರಿ ಶಕ್ತಿಗಳನ್ನು ಸೋಲಿಸಬೇಕು ಎಂದು ಹೇಳಿದ್ದಾರೆ ಎಂಬ ಉಲ್ಲೇಖವಿರುವ ಸಂದೇಶವನ್ನು ಓದಿದ್ದಾರೆ.

ಇದನ್ನು ಓದಿ: ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...