Homeಮುಖಪುಟಬಿಜೆಪಿ ಪ್ರಣಾಳಿಕೆಯಲ್ಲಿ 'ಅಲ್ಪಸಂಖ್ಯಾತರು' ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

ಬಿಜೆಪಿ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

- Advertisement -
- Advertisement -

ಬಿಜೆಪಿ ಅಲ್ಪಸಂಖ್ಯಾತರನ್ನು ದ್ವೇಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ ‘ಅಲ್ಪಸಂಖ್ಯಾತರು’ ಎಂಬ ಪದವನ್ನು ಕೂಡ ಬಳಸಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಮುಸ್ಲಿಮರನ್ನು ಅಂಚಿಗೆ ತಳ್ಳಲಾಗಿದೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳದ ಜೊತೆಗಿನ ಎಐಎಂಐಎಂ ಮೈತ್ರಿ ವಿಧಾನಸಭೆ ಚುನಾವಣೆಯಲ್ಲಿಯೂ ಮುಂದುವರಿಯುತ್ತದೆ ಮತ್ತು ಮಹಾರಾಷ್ಟ್ರದ ಅಕೋಲಾದಲ್ಲಿ ಪ್ರಕಾಶ್ ಅಂಬೇಡ್ಕರ್ ಮತ್ತು ಅಮರಾವತಿಯಲ್ಲಿ ಆನಂದ್ ಅಂಬೇಡ್ಕರ್ ಅವರನ್ನು ಪಕ್ಷ ಬೆಂಬಲಿಸುತ್ತದೆ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ನಾನು ಏಪ್ರಿಲ್ 17ರಂದು ವಿವಿಧ ಪತ್ರಿಕೆಗಳಲ್ಲಿ ಬಿಜೆಪಿಯ ಜಾಹೀರಾತನ್ನು ನೋಡಿದ್ದೇನೆ. ಅವರು ಸರ್ಕಾರದಿಂದ ಸಾಲ ಅಥವಾ ಉದ್ಯಮ ಪ್ರಾರಂಭಿಸಲು ಸಹಾಯ ಮಾಡುವ ಬಗ್ಗೆ ಮಾತನಾಡುವಾಗ ದಯವಿಟ್ಟು ನೋಡಿ, ಅದರಲ್ಲಿ ಎಸ್‌ಟಿ ಮತ್ತು ಒಬಿಸಿ ಎಂದು ಹೇಳಲಾಗಿದೆ. ಮುಸ್ಲಿಮರ ಹೆಸರು ಬಿಡಿ ಕನಿಷ್ಠ ಅಲ್ಪಸಂಖ್ಯಾತರು ಎಂಬ ಪದವನ್ನು ಕೂಡ ಉಲ್ಲೇಖಿಸಲು ಬಿಜೆಪಿ ನಿರಾಕರಿಸಿದೆ. ಅಲ್ಪಸಂಖ್ಯಾತರು ಎಂಬ ಪದವನ್ನು ಭಾರತದ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ ಮತ್ತು ಬಿಜೆಪಿಯು ‘ಎಂ’ ಪದದ ಬಗ್ಗೆ ಅಪಾರ ದ್ವೇಷವನ್ನು ಹೊಂದಿದೆ ಎಂದು ಓವೈಸಿ ಹೇಳಿದ್ದಾರೆ.

ಅವರು ಅಲ್ಪಸಂಖ್ಯಾತರು ಎಂಬ ಪದವನ್ನು ಉಲ್ಲೇಖಿಸಿಲ್ಲ, ಹಿಂದುಳಿದ ಸಮುದಾಯಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಅವರು ಹೇಳುತ್ತಾರೆ. ದಲಿತರು ಮತ್ತು ಮುಸ್ಲಿಮರಲ್ಲಿ ಶಾಲೆ ಬಿಡುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮುಸ್ಲಿಂ ಸಮುದಾಯದಲ್ಲಿ ಶಾಲೆ ಬಿಡುತ್ತಿರುವವರ ಪ್ರಮಾಣ ಹೆಚ್ಚಾಗಿರುವುದನ್ನು ಬಿಜೆಪಿ ಖಚಿತಪಡಿಸಿದೆ ಎಂದು ಅವರು ಹೇಳಿದ್ದಾರೆ.

ಉದ್ಯೋಗದ ಕೊರತೆಯಿಂದ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಿದೆ, ಅಲ್ಪಸಂಖ್ಯಾತರ ಮೇಲಿನ ದ್ವೇಷ ಹೆಚ್ಚುತ್ತಿದೆ ಮತ್ತು ಇದು ಸಂವಿಧಾನಕ್ಕೆ ಬೆದರಿಕೆಯಾಗಿದೆ ಎಂದು ಆರೋಪಿಸಿದ ಅಸಾದುದ್ದೀನ್ ಓವೈಸಿ  ಯಾವುದೇ ಪಕ್ಷಕ್ಕೆ ಮತ ಹಾಕುವ ಮೊದಲು ಜನರು ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದರು.

ಬಿಜೆಪಿಯು ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಬಗ್ಗೆ ಮಾತನಾಡಬಹುದು, ಆದರೆ ಬೆಳವಣಿಗೆಯ ವಿಷಯಕ್ಕೆ ಬಂದಾಗ ತಲಾ ಆದಾಯವನ್ನು ಪರಿಗಣಿಸಬೇಕು. ಈ ಹಿಂದೆ ತಮಿಳುನಾಡಿನಲ್ಲಿ ತಮ್ಮ ಪಕ್ಷ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಚರ್ಚೆಗಳು ನಡೆದಿತ್ತು. ಪಳನಿಸ್ವಾಮಿ ನೇತೃತ್ವದ ಪಕ್ಷವು ಎನ್‌ಡಿಎಯಿಂದ ಹೊರಬಂದು ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸುವುದಾಗಿ ಹೇಳಿದ್ದರಿಂದ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅದು ಅತ್ಯಂತ ಶಕ್ತಿಶಾಲಿ ಪಕ್ಷವಾಗಲಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...