Homeಮುಖಪುಟ'ಟೈಮ್ಸ್‌' 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಸಾಕ್ಷಿ ಮಲಿಕ್ ಸೇರಿ 8 ಭಾರತೀಯರು

‘ಟೈಮ್ಸ್‌’ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಸಾಕ್ಷಿ ಮಲಿಕ್ ಸೇರಿ 8 ಭಾರತೀಯರು

- Advertisement -
- Advertisement -

ಒಲಿಂಪಿಕ್ ಪದಕ ವಿಜೇತ ಭಾರತೀಯ ಕುಸ್ತಿಪಟು ಸಾಕ್ಷಿ ಮಲಿಕ್ ಸೇರಿ 8 ಮಂದಿ ಭಾರತೀಯರು ಟೈಮ್ಸ್‌ ನಿಯತಕಾಲಿಕದ 2024ರ 100 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಸಾಕ್ಷಿ ಮಲಿಕ್‌ ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳದ ವಿರುದ್ಧ ನಿರಂತರ ಹೋರಾಟ ಮಾಡಿ ಭಾರತದ ಮಾಜಿ ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕುಸ್ತಿ ಫೆಡರೇಶನ್‌ಗೆ ರಾಜೀನಾಮೆ ನೀಡುವಂತೆ ಮಾಡಿದ್ದಾರೆ. ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತ ವಿನೇಶ್ ಫೋಗಟ್ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಭಜರಂಗ್ ಪುನಿಯಾ ಅವರೊಂದಿಗೆ ಸಾಕ್ಷಿ ಮಲಿಕ್‌ ಅವರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯನ್ನು ಮುನ್ನಡೆಸಿದ್ದರು. ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದರು. ಇವರ ಪ್ರತಿಭಟನೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಭಾರೀ ಬೆಂಬಲವನ್ನು ಪಡೆದಿತ್ತು ಮತ್ತು ಗಮನವನ್ನು ಸೆಳೆದಿತ್ತು.

ಈ ಹೋರಾಟವು ಭಾರತದ ಮಹಿಳಾ ಕುಸ್ತಿಪಟುಗಳಿಗೆ ಮಾತ್ರವಲ್ಲ, ಭಾರತದ ಹೆಣ್ಣುಮಕ್ಕಳಿಗಾಗಿ ಎಂದು ಸಾಕ್ಷಿ ಮಲಿಕ್‌ ಹೇಳಿದ್ದರು. ಸಿಂಗ್ ಕುಸ್ತಿ ಪೆಢರೇಶನ್‌ ಹುದ್ದೆಯನ್ನು ತ್ಯಜಿಸಿದ ಕೆಲವೇ ದಿನಗಳಲ್ಲಿ ಅವರ ನಿಕಟವರ್ತಿ ಸಂಜಯ್ ಸಿಂಗ್ ಅವರನ್ನು ಕುಸ್ತಿಫೆಡರೇಶನ್‌ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು. ಸಂಜಯ್ ಸಿಂಗ್ ಡಬ್ಲ್ಯುಎಫ್‌ಐನ ಜವಾಬ್ದಾರಿ ವಹಿಸಿಕೊಂಡ ದಿನವೇ ಸಾಕ್ಷಿ ಮಲಿಕ್‌ ಕ್ರೀಡೆಯನ್ನು ತೊರೆಯುವುದಾಗಿ ಘೋಷಿಸಿ ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದರು.

ಟೈಮ್ಸ್‌ ನಿಯತಕಾಲಿಕ 2024ರ 100 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯನ್ನು ಪ್ರಕಟಿಸಿದೆ ಅದರಲ್ಲಿ ನಟಿ ಆಲಿಯಾ ಭಟ್, ಇಂಡೋ-ಬ್ರಿಟಿಷ್ ನಟ ದೇವ್ ಪಟೇಲ್ ಮತ್ತು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಸೇರಿದ್ದಾರೆ.

ಆಲಿಯಾ ಭಟ್
ಬಾಲಿವುಡ್ ನಟಿ ಆಲಿಯಾ ಭಟ್ ಅವರ “ಅಸಾಧಾರಣ ಪ್ರತಿಭೆ” ಮತ್ತು ಲೋಕೋಪಕಾರಿ ಕೆಲಸಗಳಿಗಾಗಿ ಗುರುತಿಸಲ್ಪಟ್ಟಿದ್ದಾರೆ. ಭಾರತೀಯ ಚಲನಚಿತ್ರೋದ್ಯಮದಲ್ಲಿ ಅವರು ಕಳೆದ ಒಂದು ದಶಕದಿಂದ ಗುರುತಿಸಿಕೊಂಡಿದ್ದಾರೆ.

ಸತ್ಯ ನಾಡೆಲ್ಲಾ

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಮೂರನೇ ಬಾರಿಗೆ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕೃತಕ ಬುದ್ಧಿಮತ್ತೆಯ (AI) ಭವಿಷ್ಯವನ್ನು ರೂಪಿಸುವಲ್ಲಿ ಅವರ ಪ್ರಭಾವಶಾಲಿ ಪಾತ್ರಕ್ಕಾಗಿ ನಾಡೆಲ್ಲಾ ಅವರನ್ನು ಶ್ಲಾಘಿಸಲಾಗಿದೆ.

ದೇವ್ ಪಟೇಲ್
ಭಾರತೀಯ ಮೂಲದ ಬ್ರಿಟೀಷ್ ನಟ, ದೇವ್ ಪಟೇಲ್, ನಟ ಮತ್ತು ನಿರ್ದೇಶಕರಾಗಿ ಸಿನಿಮಾ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ.

ಪ್ರಿಯಂವದಾ ನಟರಾಜನ್
ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಿಯಂವದಾ ನಟರಾಜನ್ ಅವರನ್ನು ಗುರುತಿಸಲಾಗಿದೆ. ಯೇಲ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಪ್ರಿಯಂವದಾ ನಟರಾಜನ್ ಅವರು ಖಗೋಳಶಾಸ್ತ್ರದಲ್ಲಿ, ವಿಶೇಷವಾಗಿ ಡಾರ್ಕ್ ಮ್ಯಾಟರ್ ಮತ್ತು ಡಾರ್ಕ್ ಎನರ್ಜಿಯ ಅಧ್ಯಯನದಲ್ಲಿ ತಮ್ಮ ಅದ್ಭುತ ಸಂಶೋಧನೆಗಾಗಿ ಗುರುತಿಸಲ್ಪಟ್ಟಿದ್ದಾರೆ.

ಅಸ್ಮಾ ಖಾನ್
ಅಸ್ಮಾ ಖಾನ್, ಭಾರತೀಯ ಮೂಲದ ಬ್ರಿಟಿಷ್ ರೆಸ್ಟೊರೆಟರ್, ಅವರು ಪಾಕಶಾಲೆಯ ಕೌಶಲ್ಯ ಮತ್ತು ಪಾಕಪದ್ಧತಿಯ ನವೀನ ವಿಧಾನಕ್ಕಾಗಿ ಗುರುತಿಸಲ್ಪಟ್ಟಿದ್ದಾರೆ.

ಜಿಗರ್ ಶಾ

ಜಿಗರ್ ಷಾ ಅವರು US ಇಂಧನ ಇಲಾಖೆಯಲ್ಲಿ ಉನ್ನತ ಅಧಿಕಾರಿಯಾಗಿದ್ದಾರೆ. ಜಿಗರ್ ಶಾ ಜಾಗತಿಕ ಮಟ್ಟದಲ್ಲಿ ಆರ್ಥಿಕ ಅಭಿವೃದ್ಧಿ ಉಪಕ್ರಮಗಳನ್ನು ಮುನ್ನಡೆಸುವಲ್ಲಿ ಪ್ರಮುಖ ಪಾತ್ರಕ್ಕಾಗಿ ಗುರುತಿಸಲ್ಪಟ್ಟಿದ್ದಾರೆ.

ಇದನ್ನು ಓದಿ: ಬಿಜೆಪಿ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....