Homeಮುಖಪುಟಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಮತ್ತು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ನಡುವಿನ ಎಲ್ಲಾ ಮತಗಳನ್ನು (ಶೇ.100) ತಾಳೆ ಹಾಕಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಇಂದು (ಏ.18) ತೀರ್ಪು ಕಾಯ್ದಿರಿಸಿದೆ.

ಸುದೀರ್ಘ ವಿಚಾರಣೆಯ ಬಳಿಕ, ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (ಎಡಿಆರ್) ಮತ್ತು ಇತರರು ಸಲ್ಲಿಸಿದ ಅರ್ಜಿಗಳ ತೀರ್ಪನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಕಾಯ್ದಿರಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಪೀಠವು ಇವಿಎಂಗಳ ಭದ್ರತಾ ವೈಶಿಷ್ಟ್ಯಗಳನ್ನು ಅರ್ಥಮಾಡಿಕೊಳ್ಳಲು ಭಾರತೀಯ ಚುನಾವಣಾ ಆಯೋಗದ (ಇಸಿಐ) ಅಧಿಕಾರಿಯೊಂದಿಗೆ ಚರ್ಚೆ ನಡೆಸಿದೆ.

ಇಂದು, ಎರಡನೇ ದಿನದ ವಿಚಾರಣೆಯಲ್ಲಿ, ವಕೀಲ ಪ್ರಶಾಂತ್ ಭೂಷಣ್ ಅವರು ಮತದಾನದ ಸಮಯದಲ್ಲಿ ವಿವಿಪ್ಯಾಟ್ ಮಸೂರದಲ್ಲಿ ಸಂಪೂರ್ಣ ಲೈಟ್ ಇರುವಂತೆ ಮಾಡಲು ಮನವಿ ಮಾಡಿದರು. ಪ್ರಸ್ತುತ ಏಳು ಸೆಕೆಂಡ್‌ಗಳ ಕಾಲ ಮಾತ್ರ ವಿವಿಪ್ಯಾಟ್ ಮಸೂರದಲ್ಲಿ ಲೈಟ್ ಇರುತ್ತವೆ. ಮತದಾನ ಪ್ರಕ್ರಿಯೆ ಮುಗಿಯುವವರೆ ಲೈಟ್ ಇದ್ದರೆ, ಮತದಾರರಿಗೆ ಸ್ಲಿಪ್ ಕಟ್ಟಾಗಿ ಬೀಳುವುದು ನೋಡಬಹುದು ಎಂಬುವುದು ಪ್ರಶಾಂತ್ ಭೂಷಣ್ ಅವರ ವಾದ.

ಇನ್ನೋರ್ವ ವಕೀಲ ನಿಝಾಂ ಪಾಶಾ ಅವರು, ಮತದಾರರು ಭೌತಿಕವಾಗಿ ವಿವಿಪ್ಯಾಟ್ ಚೀಟಿ ತೆಗೆದುಕೊಂಡು ಮತಪೆಟ್ಟಿಗೆಯಲ್ಲಿ ಹಾಕಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು. ಇದು ಮತದಾರರ ಗೌಪ್ಯತೆಯನ್ನು ಉಲ್ಲಂಘಿಸುವುದಿಲ್ಲವೇ? ಎಂದು ನ್ಯಾಯಮೂರ್ತಿ ಖನ್ನಾ ಕೇಳಿದಾಗ, ಮತದಾನದ ಗೌಪ್ಯತೆಯ ಹೆಸರಿನಲ್ಲಿ ಮತದಾರರನ್ನು ಅವರ ಹಕ್ಕಿನಿಂದ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ವೇಳೆ, “ನೀವು ಬಯಸುತ್ತಿರುವ ಪ್ರಾಯೋಗಿಕ ಫಲಿತಾಂಶಗಳನ್ನು ನೀವು ಅರ್ಥಮಾಡಿಕೊಂಡಿದ್ದೀರಿ ಎಂದು ನಾನು ಭಾವಿಸುತ್ತೇನೆ” ಎಂದು ನ್ಯಾಯಮೂರ್ತಿ ಖನ್ನಾ ಪ್ರತಿಕ್ರಿಯಿಸಿದ್ದಾರೆ.

ಹಿರಿಯ ವಕೀಲ ಸಂಜಯ್ ಹೆಗ್ಡೆ, ವಿವಿಪ್ಯಾಟ್ ‘ಆಡಿಟ್’ಗೆ ಒತ್ತು ನೀಡಿದ್ದು, ಇವಿಎಂ ಮತಗಳ ಎಣಿಕೆಯ ನಂತರವೂ ‘ಆಡಿಟ್’ಗಾಗಿ ಎಲ್ಲಾ ವಿವಿಪ್ಯಾಟ್‌ಗಳನ್ನು ಎಣಿಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. 2019ರಲ್ಲಿ ಪ್ರತೀ ಕ್ಷೇತ್ರದ ಐದು ವಿವಿಪ್ಯಾಟ್‌ಗಳ ಮತ ಎಣಿಕೆ ಮಾಡಬೇಕು ಎಂಬ ಆದೇಶವನ್ನು ಪರಿಗಣಿಸದಂತೆ ಹೆಗ್ಡೆ ಮನವಿ ಮಾಡಿದರು. ವ್ಯವಸ್ಥೆಯಲ್ಲಿ ಮತದಾರರ ವಿಶ್ವಾಸವನ್ನು ಹೆಚ್ಚಿಸುವ ಯಾವುದೇ ಕ್ರಮವನ್ನು ಸ್ವಾಗತಿಸಬೇಕು ಎಂದಿದ್ದಾರೆ.

ವಿಚಾರಣೆ ವೇಳೆ, ಕಾಸರಗೋಡಿನಲ್ಲಿ ವಿವಿಪ್ಯಾಟ್ ಪರಿಶೀಲನೆ ವೇಳೆ ಬಿಜೆಪಿ ಚಿಹ್ನೆಯ ಸ್ಲಿಪ್ ಬಂದಿರುವ ಕುರಿತ ‘ಮನೋರಮಾ ಆನ್‌ಲೈನ್‌’ ಸುದ್ದಿಯನ್ನು ವಕೀಲ ಪ್ರಶಾಂತ್ ಭೂಷಣ್ ಉಲ್ಲೇಖಿಸಿದರು. ಈ ವೇಳೆ ನ್ಯಾಯಪೀಠ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಈ ಕುರಿತು ಪರಿಶೀಲಿಸುವಂತೆ ಸೂಚಿಸಿದೆ. ಮಧ್ಯಾಹ್ನ 2 ಗಂಟೆಗೆ ಪೀಠದ ಮುಂದೆ ಉತ್ತರಿಸಿದ ಚುನಾವಣಾ ಆಯೋಗದ ಅಧಿಕಾರಿಗಳು ಮನೋರಮಾ ವರದಿ ಸಂಪೂರ್ಣ ಸುಳ್ಳು ಎಂದು ಹೇಳಿರುವುದಾಗಿ ಲೈವ್‌ ಲಾ ವರದಿ ಮಾಡಿದೆ.

ಇದನ್ನೂ ಓದಿ : ‘ಸಕ್ಕರೆ ಮಟ್ಟ ಹೆಚ್ಚಿಸಿಕೊಳ್ಳಲು ಮಾವಿನಹಣ್ಣು, ಸಿಹಿತಿಂಡಿ ಸೇವಿಸುತ್ತಿರುವ ಕೇಜ್ರಿವಾಲ್..; ಇಡಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...