Homeಫ್ಯಾಕ್ಟ್‌ಚೆಕ್Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು...

Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು ನಿಜಾನಾ?

- Advertisement -
- Advertisement -

“ಕೈ ಹಿಡಿದ ಮೇಲೆ ಶಿವಣ್ಣನಿಗೆ ಕುಂಕುಮ ಕೂಡ ಹೊರೆಯಾಯ್ತು” ಎಂದು ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

‘Arya Pavan Kumar’ ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಟಿವಿ9 ಕನ್ನಡದ ವಾಟರ್ ಮಾರ್ಕ್‌ ಇರುವುದರಿಂದ, ಟಿವಿ9 ನ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ನಾವು ಮೂಲ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಏಪ್ರಿಲ್ 9, 2024ರಂದು “Geetha Shivarajkumar:ಫೋಟೋಗಾಗಿ ವೇದಿಕೆಗೆ ಬಂದ ಮಕ್ಕಳ ಜೊತೆ ಶಿವಣ್ಣ ಏನ್ ಮಾಡಿದ್ರು ನೋಡಿ?” ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ 2 ನಿಮಿಷ 53 ಸೆಕೆಂಡ್‌ನ ವಿಡಿಯೋದಲ್ಲಿ 0:34 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ದೃಶ್ಯವಿದೆ.

ವಿಡಿಯೋದಲ್ಲಿ ಕಾಣುವಂತೆ ಶಿವರಾಜ್‌ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಅವರು ಹಣೆ ಮೇಲಿನ ಬೆವರು ಒರೆಸಿದಾಗ ಕುಂಕುಮ ಸಹ ಅರ್ಧ ಅಳಿಸಿದೆ.

ಇನ್ನು ವಿಡಿಯೋದಲ್ಲಿ 42ನೇ ಸೆಕೆಂಡ್‌ನಲ್ಲಿ ಗೀತಾ ಶಿವರಾಜ್ ಕುಮಾರ್‌ ಎದುರಿಗೆ ಇದ್ದವರ ಜೊತೆ ಸನ್ನೆ ಮಾಡುತ್ತಾ ಕುಂಕುಮ ಸರಿಪಡಿಸಿಕೊಳ್ಳುವುದನ್ನು ನೋಡಬಹುದು. ಅವರ ಹಣೆಯಲ್ಲಿ ಎರಡು ಕಡೆ ಕುಂಕುಮ ಇದ್ದುದರಿಂದ ಎದುರಿಗಿದ್ದವರ ಸೂಚನೆಯ ಮೇರೆಗೆ ಸರಿಪಡಿಸಿಕೊಳ್ಳಲು ಯತ್ನಿಸಿ ಕುಂಕುಮ ಅಳಿಸಿದ್ದಾರೆ. ಆನಂತರ ಸರಿ ಹೋಯಿತಾ? ಎಂಬರ್ಥದಲ್ಲಿ ಎದುರಿಗೆ ಇದ್ದರಿಗೆ ಸನ್ನೆ ಮಾಡುವುದನ್ನು ಸಹ ವಿಡಿಯೋದ 50 ರಿಂದ 59 ಸೆಕೆಂಡ್‌ವರೆಗೂ ನೋಡಬಹುದು.

“ಶಿವಮೊಗ್ಗ: ಮತದಾರರ ನಡುವೆ ಯುಗಾದಿ ಆಚರಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ, ಶಿವರಾಜ್​​ಕುಮಾರ್” ಎಂಬ ಶೀರ್ಷಿಕೆಯಲ್ಲಿ ‘ಈಟಿವಿ ಭಾರತ್ ಕನ್ನಡ’ ಏಪ್ರಿಲ್ 9, 2024ರಂದು ವರದಿಯೊಂದನ್ನು ಪ್ರಕಟಿಸಿದೆ. ಈ ಸುದ್ದಿಯಲ್ಲಿ ‘ನವ ಸಂವತ್ಸರ ಸಂಭ್ರಮದಲ್ಲಿ ಗೀತಕ್ಕ ಶಿವಣ್ಣ ನಮ್ಮೊಂದಿಗೆ’ ಎಂಬ ಯುಗಾದಿ ಕಾರ್ಯಕ್ರಮದಲ್ಲಿ ಶಿವರಾಜ್‌ ಕುಮಾರ್ ಮತ್ತು ಗೀತಾ ಅವರು ಇಬ್ಬರೂ ಪೂಜೆ ಮಾಡುವುದು ಸೇರಿದಂತೆ ಹಲವು ಫೋಟೊ ಮತ್ತು ವಿಡಿಯೋಗಳನ್ನು ನಾವು ಕಾಣಬಹುದು. ಅದರಲ್ಲಿ ಅಭಿಮಾನಿಗಳು ಬೆಳ್ಳಿ ಕಡಗ ಹಾಕಿ ಪೂಜೆ ಮಾಡಿದ್ದಾರೆ. ಕುಂಕುಮ ಸಹ ಇಟ್ಟಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಮೇಲೆ ಉಲ್ಲೇಖಿಸಿದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ‘ಏಪ್ರಿಲ್ 9, 2024ರಂದು ನ್ಯೂಸ್ ಫಸ್ಟ್ ಕನ್ನಡ “Geetha Shivarajkumar:ಬೆಳ್ಳಿ ಕಡಗ ಹಾಕಿದ ಫ್ಯಾನ್​ಗೆ ಧನ್ಯವಾದ ಹೇಳಿದ ಗೀತಕ್ಕ..” ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿದೆ. ಈ ವಿಡಿಯೋದಲ್ಲಿ ಗೀತಾ ಶಿವರಾಜ್‌ ಕುಮಾರ್ ಸಂಪೂರ್ಣವಾಗಿ ಕುಂಕುಮ ಇಟ್ಟಿರುವುದನ್ನು ಕಾಣಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಶಿವರಾಜ್‌ ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರು ಉದ್ದೇಶಪೂರ್ವಕವಾಗಿ ಹಣೆ ಮೇಲಿನ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಇದಕ್ಕೆ ಪುರಾವೆಯಾಗಿ ನಾವು ವಿಡಿಯೋಗಳನ್ನು ಲಗತ್ತಿಸಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಪಾದನೆ ಮಾಡಿದಂತೆ ಅಲ್ಪ ಸಂಖ್ಯಾತರನ್ನು ಓಲೈಸಲೋ ಅಥವಾ ಕಾಂಗ್ರೆಸ್ ಸೇರಿದ ಕಾರಣಕ್ಕೆ ಕುಂಕುಮ ಅಳಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ನಮಗೆ ದೊರೆತಿಲ್ಲ.

ಇದನ್ನೂ ಓದಿ : Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...