Homeಮುಖಪುಟಚುನಾವಣೆ ಬಳಿಕ ಮತ್ತೆ ಹಿಂಸಾಚಾರದ ಆತಂಕ| ಸುಪ್ರೀಂ ಮೊರೆ ಹೋದ ಮಣಿಪುರದ ಕುಕಿ-ಝೋ ಸಮುದಾಯ: ವರದಿ

ಚುನಾವಣೆ ಬಳಿಕ ಮತ್ತೆ ಹಿಂಸಾಚಾರದ ಆತಂಕ| ಸುಪ್ರೀಂ ಮೊರೆ ಹೋದ ಮಣಿಪುರದ ಕುಕಿ-ಝೋ ಸಮುದಾಯ: ವರದಿ

- Advertisement -
- Advertisement -

ಲೋಕಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ತಮ್ಮ ವಿರುದ್ದ ಮತ್ತೆ ಹಿಂಸಾಚಾರ ನಡೆಯುವ ಆತಂಕ ವ್ಯಕ್ತಪಡಿಸಿರುವ ಮಣಿಪುರದ ಬುಡಕಟ್ಟು ಜನಾಂಗ ಕುಕಿ-ಝೋ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಕಳೆದ ಆರು ತಿಂಗಳಿನಿಂದ, ಮಣಿಪುರದ ಕುಕಿ-ಝೋ ಸಮುದಾಯವು ಆಕ್ರಮಣಕಾರಿ ಗುಂಪುಗಳು ಸಂಪೂರ್ಣ ಶಸ್ತ್ರಸಜ್ಜಿತರಾಗಿ ಸಿದ್ದರಾಗುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದೆ. ಈ ಗುಂಪುಗಳಲ್ಲಿ ಒಂದಾದ ಅರಂಬೈ ಟೆಂಗೋಲ್ ಕುಕಿಗಳನ್ನು ನಾಶ ಮಾಡುವುದಾಗಿ ಬೆದರಿಕೆ ಹಾಕಿದೆ ಎಂದು ಅರ್ಜಿಯಲ್ಲಿ ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಹಿಂಸಾಚಾರದ ತನಿಖೆಗಳ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ನೇಮಿಸಿರುವ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿ ದತ್ತಾತ್ರೇ ಪಡಸಾಲಿಗೀಕರ್ ಅವರು ಕುಕಿ- ಝೋ ಸಮುದಾಯದ ನೆರವಿಗೆ ಬಂದಿಲ್ಲ ಎಂದು ಆರ್ಜಿಯಲ್ಲಿ ಆರೋಪಿಸಲಾಗಿದೆ.

ಸಮುದಾಯದ ಮೇಲಿನ ಕ್ರೂರ ದಾಳಿಯ ಬಗ್ಗೆ ಮತ್ತೆ ಮತ್ತೆ ಮನವಿ ಸಲ್ಲಿಸಿದ್ದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ದಾಳಿಕೋರರು ಸ್ವತಂತ್ರವಾಗಿ ತಿರಗುತ್ತಿದ್ದುಮ ಹಿಂಸಾಚಾರ ಮತ್ತು ಶಸ್ತ್ರಾಸ್ತ್ರ ದೋಚುವಿಕೆಗೆ ಸಂಬಂಧಿಸಿದಂತೆ ಪಡಸಾಲಗೀಕರ್‌ ಅವರಿಗೆ ಐದು ಮನವಿ ಸಲ್ಲಿಸಿದ್ದರೂ, ಸಂತ್ರಸ್ತ ಸಮುದಾಯದ ನೆರವಿಗೆ ಬಂದಿಲ್ಲ ಎಂದು ಹೇಳಲಾಗಿದೆ.

ಮೊದಲ ದಾಳಿಗಿಂತಲೂ ತೀವ್ರ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ನ್ಯಾಯಾಲಯದ ಮುಂದೆ ಕೈಮುಗಿದು ನಿಂತಿದ್ದೇವೆ. ಕುಕಿ ಸಮುದಾಯದ ಬಾಲಕನ ಶಿರಚ್ಛೇದ ಮಾಡಿದ ಆರೋಪ ಎದುರಿಸುತ್ತಿರುವ ಕುಂಬಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎಸ್ ಪ್ರೇಮಚಂದ್ರ ಸಿಂಗ್‌ ಅವರನ್ನು ಬಂಧಿಸಬೇಕು. ಹಿಂಸಾಚಾರ ತಡೆಗಟ್ಟಲು ಅರಂಬೈ ಟೆಂಗೋಲ್ ಮತ್ತು ಮೈತೇಯಿ ಲೀಪುನ್ ಗುಂಪಿನ ನಾಯಕರನ್ನು ಬಂಧಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಲ್ಲದೆ, 170 ಕುಕಿಗಳ ಸಾವು, ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಿದ್ಧಪಡಿಸಲಾದ ಆರೋಪ ಪಟ್ಟಿಗಳ ವಿವರಗಳನ್ನು ಮಣಿಪುರ ಸರ್ಕಾರ ಕೂಡಲೇ ಬಹಿರಂಗಪಡಿಸಬೇಕು. ಭಾರತೀಯ ಸೇನೆಯು ತಕ್ಷಣವೇ ಕುಕಿ-ಝೋ ಸಮುದಾಯದ ಜೀವ ಮತ್ತು ಆಸ್ತಿ ರಕ್ಷಣೆಗೆ ಮುಂದಾಗಬೇಕು. ಪಡಸಾಲಿಗೀಕರ್ ಮತ್ತು ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿ ಸಲ್ಲಿಸಿದ ವರದಿಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಲಾಗಿದೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ವಿವಿಧ ಅರ್ಜಿಗಳು ಸುಪ್ರೀಂ ಕೋರ್ಟ್‌ ಅಂಗಳದಲ್ಲಿವೆ. ಹಿಂಸಾಚಾರದ ತನಿಖೆ ಮೇಲ್ವಿಚಾರಣೆಗಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರ ನೇತೃತ್ವದ ಅಖಿಲ ಮಹಿಳಾ ನ್ಯಾಯಾಂಗ ಸಮಿತಿಯನ್ನು ಸುಪ್ರೀಂ ಕೋರ್ಟ್‌ ರಚಿಸಿದೆ. ಆದರೆ, ರಾಜ್ಯ ಸರ್ಕಾರದ ಪ್ರತಿಯೊಂದು ವಿವರಗಳನ್ನು ಪರಿಶೀಲಿಸುವ ಕೆಲಸ ತನ್ನದಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಕೆಲ ತಿಂಗಳುಗಳ ಹಿಂದೆ ತಿಳಿಸಿದ್ದರು.

ಮಾಹಿತಿ ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ‘ಮತಗಟ್ಟೆಗಳಲ್ಲಿ ನಮ್ಮನ್ನು ತಿರಸ್ಕಾರದಿಂದ ನೋಡುತ್ತಾರೆ..’; ತಾರತಮ್ಯದ ಆತಂಕ ವ್ಯಕ್ತಪಡಿಸಿದ ಟ್ರಾನ್ಸ್‌ಜೆಂಡರ್ ಮತದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...