ಇಂದಿನಿಂದಆರಂಭವಾಗುತ್ತಿರುವ 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ದಿನದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ದ್ವೇಷವನ್ನು ಸೋಲಿಸುವ ಮೂಲಕ ದೇಶದ ಮೂಲೆಮೂಲೆಗಳಲ್ಲಿ ‘ಪ್ರೀತಿಯ ಅಂಗಡಿ’ (ಮೊಹಬ್ಬತ್ ಕಿ ದುಕಾನ್) ತೆರೆಯುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.
“ಇಂದು ಮೊದಲ ಹಂತದ ಮತದಾನವಾಗಿದೆ! ನೆನಪಿಡಿ, ನಿಮ್ಮ ಪ್ರತಿಯೊಂದು ಮತವೂ ಭಾರತದ ಪ್ರಜಾಪ್ರಭುತ್ವ ಮತ್ತು ಅದರ ತಲೆಮಾರುಗಳ ಭವಿಷ್ಯವನ್ನು ನಿರ್ಧರಿಸುತ್ತದೆ” ಎಂದು ಎಕ್ಸ್ನಲ್ಲಿ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.
आज पहले चरण का मतदान है!
याद रहे, आपका एक-एक वोट भारत के लोकतंत्र और आने वाली पीढ़ियों का भविष्य तय करने जा रहा है।
इसलिए बाहर निकलिए और पिछले 10 साल में देश की आत्मा को दिए गए ज़ख्मों पर अपने ‘वोट का मरहम’ लगाकर लोकतंत्र को मज़बूत कीजिए।
नफ़रत को हरा कर खोल दीजिए हर कोने… pic.twitter.com/A9lfRb6yh2
— Rahul Gandhi (@RahulGandhi) April 19, 2024
‘ಕಳೆದ 10 ವರ್ಷಗಳಲ್ಲಿ ದೇಶದ ಆತ್ಮಕ್ಕೆ ಉಂಟಾದ ಗಾಯದ ಮೇಲೆ ನಿಮ್ಮ ಮತದ ಮುಲಾಮು ಹಚ್ಚಿ ಪ್ರಜಾಪ್ರಭುತ್ವವನ್ನು ಬಲಪಡಿಸಿ. ದ್ವೇಷವನ್ನು ಸೋಲಿಸುವ ಮೂಲಕ ದೇಶದ ಮೂಲೆ ಮೂಲೆಯಲ್ಲಿ ‘ಮೊಹಬ್ಬತ್ ಕಿ ದುಕಾನ್’ ತೆರೆಯಿರಿ’ ಎಂದು ಮನವಿ ಮಾಡಿದ್ದಾರೆ.
‘ಅಪ್ರೆಂಟಿಸ್ಶಿಪ್ ಹಕ್ಕು, ಎಂಎಸ್ಪಿಯ ಕಾನೂನು ಖಾತರಿ ಮತ್ತು ರಾಷ್ಟ್ರವ್ಯಾಪಿ ಜಾತಿಗಣತಿ ಸೇರಿದಂತೆ ಪ್ರಮುಖ ಕಾಂಗ್ರೆಸ್ ಖಾತರಿಗಳ’ ಗ್ರಾಫಿಕ್ ಅನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.
2024ರ ಲೋಕಸಭಾ ಚುನಾವಣೆಯು ಶುಕ್ರವಾರ ಪ್ರಾರಂಭವಾಯಿತು, ಮೊದಲ ಹಂತದ ಮತದಾನವು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ 102 ಸ್ಥಾನಗಳಿಗೆ ನಿಗದಿಯಾಗಿದೆ.
ಕಣದಲ್ಲಿರುವವರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸರ್ಬನಾದ ಸೋನೋವಾಲ್ ಮತ್ತು ಭೂಪೇಂದ್ರ ಯಾದವ್, ಕಾಂಗ್ರೆಸ್ನ ಗೌರವ್ ಗೊಗೊಯ್, ಡಿಎಂಕೆಯ ಕನಿಮೋಳಿ ಮತ್ತು ಬಿಜೆಪಿಯ ಕೆ ಅಣ್ಣಾಮಲೈ ಸೇರಿದ್ದಾರೆ.
ಅರುಣಾಚಲ ಪ್ರದೇಶ (60 ಸ್ಥಾನಗಳು) ಮತ್ತು ಸಿಕ್ಕಿಂ (32 ಸ್ಥಾನಗಳು) ವಿಧಾನಸಭೆ ಚುನಾವಣೆಗಳು ಸಹ ಏಕಕಾಲದಲ್ಲಿ ನಡೆಯುತ್ತಿವೆ.
ಇದನ್ನೂ ಓದಿ; ಸಂವಿಧಾನ-ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಇಂದಿನಿಂದ ಆರಂಭ: ಮಲ್ಲಿಕಾರ್ಜುನ ಖರ್ಗೆ


