Homeಫ್ಯಾಕ್ಟ್‌ಚೆಕ್Fact Check: ಮಹುವಾ ಮೊಯಿತ್ರಾ 'ಎಗ್ಸ್' ಎಂದಿರುವುದನ್ನು 'ಸೆಕ್ಸ್' ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

Fact Check: ಮಹುವಾ ಮೊಯಿತ್ರಾ ‘ಎಗ್ಸ್’ ಎಂದಿರುವುದನ್ನು ‘ಸೆಕ್ಸ್’ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಹುವಾ ಮೊಯಿತ್ರಾ ಅವರಿಗೆ ಸಂಬಂಧಿಸಿದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹುವಾ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ, ಸ್ವತಂತ್ರ ಮಾಧ್ಯಮ ಸಂಸ್ಥೆ ‘ನ್ಯೂಸ್ ದಿ ಟ್ರುತ್'(ಎನ್‌ಟಿಟಿ) ನ ವರದಿಗಾರ ಅವರನ್ನು ಮಾತನಾಡಿಸಿದ್ದಾರೆ. ಈ ವೇಳೆ ಇಂಗ್ಲಿಷ್ ಭಾಷೆಯಲ್ಲಿ ‘What’s your source of Energy?'(ನಿಮ್ಮ ಶಕ್ತಿಯ ಮೂಲ ಯಾವುದು?) ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಮಹುವಾ ಮೊಯಿತ್ರಾ ನೀಡಿರುವ ಉತ್ತರ ವೈರಲ್ ಆಗಿದೆ.

ಅನೇಕ ಎಕ್ಸ್ ಬಳಕೆದಾರರು ‘What’s your source of Energy?’ ಎಂದು ಪತ್ರಕರ್ತ ಕೇಳಿದ್ದಕ್ಕೆ, ಮಹುವಾ ಅವರು ‘Sex'(ಲೈಂಗಿಕತೆ ಅಥವಾ ಲೈಂಗಿಕ ಕ್ರಿಯೆ) ಎಂದು ಉತ್ತರ ನೀಡಿರುವುದಾಗಿ ಬರೆದುಕೊಂಡಿದ್ದಾರೆ. ಎಕ್ಸ್‌ ಬಳಕೆದಾರರು ಹಂಚಿಕೊಂಡ ವಿಡಿಯೋ ನೋಡಿದರೆ, ಮಹುವಾ ಮೊಯಿತ್ರಾ ‘Sex’ಎಂದೇ ಹೇಳಿದಂತೆ ಕೇಳುತ್ತಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದಲ್ಲಿರುವಂತೆ ಮಹುವಾ ಮೊಯಿತ್ರಾ ಅವರು ತನ್ನ ಶಕ್ತಿಯಾ ಅಥವಾ ಉತ್ಸಾಹದ ಮೂಲ ‘ಸೆಕ್ಸ್’ ಎಂದು ಹೇಳಿದ್ದಾರಾ? ಎಂಬುವುದನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ವೈರಲ್ ವಿಡಿಯೋದಲ್ಲಿರುವ ಅಂಶ ಸತ್ಯವೇ? ಎಂದು ತಿಳಿದುಕೊಳ್ಳಲು ನಾವು ಮೂಲ ವಿಡಿಯೋ ಹುಡುಕಿದ್ದೇವೆ. ಇದಕ್ಕಾಗಿ ನಾವು ‘ನ್ಯೂಸ್ ದಿ ಟ್ರುತ್’ನ ಅಧಿಕೃತ ಯೂಟ್ಯೂಬ್ ಪೇಜ್ ನೋಡಿದ್ದೇವೆ.
ಅಲ್ಲಿ, “I am Unapologetic”: TMC Mahua Moitra in Conversation with Tamal Saha | Lok Sabha Election 2024″ ಎಂಬ ಶೀರ್ಷಿಕೆಯಲ್ಲಿ ಏಪ್ರಿಲ್ 13, 2024ರಂದು ಅಪ್ಲೋಡ್ ಮಾಡಲಾದ ವಿಡಿಯೋ ದೊರೆತಿದೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ಒಟ್ಟು 37 ನಿಮಿಷ 22 ಸೆಕೆಂಡ್‌ನ ವಿಡಿಯೋದಲ್ಲಿ ಎರಡು ನಿಮಿಷ 35 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ಹೇಳಿಕೆಯಿದೆ. ವೈರಲ್ ಕ್ಲಿಪ್‌ ಅನ್ನು ಇಂಗ್ಲಿಷ್ ಫ್ಯಾಕ್ಟ್‌ ಚೆಕ್ಕಿಂಗ್ ವೆಬ್‌ಸೈಟ್‌ altnews.in ನಿಧಾನ ಮಾಡಿ (Slowdown)ಮಾಡಿ ಪರಿಶೀಲಿಸಿದೆ. ಅದರಲ್ಲಿ ಮಹುವಾ ಅವರು ‘Eggs,eggs'(ಮೊಟ್ಟೆ, ಮೊಟ್ಟೆ) ಎಂದು ಹೇಳುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದೆ.

ಹಾಗಾಗಿ, ನಿಮ್ಮ ಶಕ್ತಿಯ ಮೂಲವೇನು? ಎಂದು ಕೇಳಿದ್ದಕ್ಕೆ ಮಹುವಾ ಅವರು ‘ಎಗ್ಸ್‌ ‘(ಮೊಟ್ಟೆ) ಎಂದು ಹೇಳಿದ್ದಾರೆಯೇ ಹೊರತು, ಸೆಕ್ಸ್‌ (ಲೈಂಗಿಕ ಕ್ರಿಯೆ) ಎಂದು ಹೇಳಿಲ್ಲಎಂಬುವುದನ್ನು ಖಚಿತಪಡಿಸಬಹುದು.

ಇನ್ನು ಇದೇ ವಿಷಯಕ್ಕೆ ಸಂಬಂಧಪಟ್ಟಂತೆ, ಮಹುವಾ ಅವರನ್ನು ಮಾತನಾಡಿಸಿದ್ದ ಪತ್ರಕರ್ತ ತಮಾಲ್ ಶಾ ಅವರು ಏಪ್ರಿಲ್ 18, 2024ರಂದು ಎಕ್ಸ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ” ನಾನು ಮಹುವಾ ಮೊಯಿತ್ರಾ ಅವರಿಗೆ ನಿಮ್ಮ ಶಕ್ತಿಯ ಮೂಲವೇನೆಂದು ಕೇಳಿದೆ. ಅದಕ್ಕೆ ಅವರು ಮೊಟ್ಟೆಗಳು ಎಂದು ಹೇಳಿದ್ದಾರೆ. ಭಕ್ತ ಮಂಡಳಿಯವರು ಅದನ್ನು ‘ಸೆಕ್ಸ್’ ಎಂದು ತಿರುಚಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಆದ್ದರಿಂದ, ನಿಮ್ಮ ಶಕ್ತಿಯ ಮೂಲ ಯಾವುದು? ಎಂದು ಕೇಳಿದ್ದಕ್ಕೆ ಮಹುವಾ ಮೊಯಿತ್ರಾ ಅವರು ಎಗ್ಸ್ ( ಮೊಟ್ಟೆ) ಎಂದಿದ್ದಾರೆಯೇ ಹೊರತು, ಸೆಕ್ಸ್ (ಲೈಂಗಿಕತೆ) ಎಂದಿಲ್ಲ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...