Homeಮುಖಪುಟಒಂದಿಷ್ಟು ಶಾಯರಿಗಳು

ಒಂದಿಷ್ಟು ಶಾಯರಿಗಳು

- Advertisement -
- Advertisement -

1.
ಬದುಕು ನಡೆಯುವುದು
ತನ್ನ ಕಾಲುಗಳ ಮೇಲೆ ಫರಾಜ್,

ಬೇರೆಯವರ ಸಹಾಯದಿಂದ ಸಾಗುವುದು
ಶವಯಾತ್ರೆ ಮಾತ್ರ.
– ಫರಾಜ್ ಅಹ್ಮದ್

2.
ಎಷ್ಟೊಂದು ಜನರಿಗೆ ಪ್ರೀತಿಸುವೆನೆಂದು
ಮಾತು ಕೊಟ್ಟಿದ್ದೀಯ ಫರಾಜ್?

ಪ್ರತಿದಿನ ಹೊಸಬರೊಬ್ಬರು
ನಿನ್ನ ವಿಳಾಸ ಕೇಳುತ್ತಿದ್ದಾರೆ.
– ಫರಾಜ್ ಅಹ್ಮದ್

3.
ಕೇವಲ ದ್ವೇಷವಷ್ಟೇ ಅಲ್ಲ
ಜಗತ್ತಿನ ದುಃಖಕ್ಕೆ ಕಾರಣ ಫರಾಜ್,

ಪ್ರೇಮವೂ ಸಮಾಧಾನಿಗಳಿಗೆ ಕೊಡುತ್ತದೆ
ಬಹಳ ಕಷ್ಟ.
– ಫರಾಜ್ ಅಹ್ಮದ್

4.
ಯಾರು ಯಾಕೆ ಅಳುತ್ತಾರೆ ಗೆಳೆಯ
ಬೇರೆ ಯಾರದೋ ಸಲುವಾಗಿ,

ಎಲ್ಲ ಅಳುತ್ತಿರುವುದು
ತಮ್ಮದೇ ಯಾವುದೋ ಮಾತಿನ ಕಾರಣವಾಗಿ.
– ಸಾಹಿರ್ ಲುಧಿಯಾನ್ವಿ

5.
ತಾನೇ ಸ್ವತಃ ಒಂದು
ಸಮಸ್ಯೆಯಾಗಿರುವಾಗ,

ಬೇರೆ ಯಾವ ಸಮಸ್ಯೆಗಳಿಗೆ ತಾನೇ
ಪರಿಹಾರವಾದೀತು ಯುದ್ಧ?
– ಸಾಹಿರ್ ಲುಧಿಯಾನ್ವಿ

6.
ಅಕಸ್ಮಾತ್ ಬದುಕಿನಲ್ಲಿ
ಮತ್ತೆ ಭೇಟಿಯಾದರೆ,

ವಿಚಾರಿಸುತ್ತೇನೆ ನನ್ನ ಹತಾಶೆಯ ಬಗ್ಗೆ
ನಿನ್ನ ವಿವಶತೆಯನ್ನ.
– ಸಾಹಿರ್ ಲುಧಿಯಾನ್ವಿ

7.
ಬಿರುಗಾಳಿಯ ದೋಣಿ
ಬದುಕಿಸಿತು ನನ್ನ,

ಮುಳುಗಿಸಿಬಿಡುತ್ತಿದ್ದರು ತೀರದ ಜನ
ನನ್ನ ಹಡಗನ್ನ.
– ಮಜ್ರೂಹ್ ಸುಲ್ತಾನ್‌ಪುರಿ

8.
ನಿನ್ನ ಹೊರತಾಗಿಯೂ ಇದ್ದವು
ಶರಣಾಗುವ ಜಾಗಗಳು, ಮರೆತುಹೋದೆ,

ಹೊರಬಿದ್ದ ಮೇಲೆ ನಿನ್ನ ಸುಂದರ ಸಂಜೆಯಿಂದ
ಎಲ್ಲ ದಾರಿಗಳ ನಾನು, ಮರೆತುಹೋದೆ.
– ಮಜ್ರೂಹ್ ಸುಲ್ತಾನ್‌ಪುರಿ

9.
ದೂರ ಕುಳಿತಿದ್ದೆ ಆದರೂ ಬಿತ್ತು
ನನ್ನ ಮೇಲೆ ಸಾಕಿಯ ಕಣ್ಣು,

ದಾಹ ನಿಜವಾಗಿದ್ದರೆ ಬಂದೇ ಬರುತ್ತದೆ
ಮಧುಪಾತ್ರೆಯೂ ಹುಡುಕಿಕೊಂಡು.
– ಮಜ್ರೂಹ್ ಸುಲ್ತಾನ್‌ಪುರಿ

10.
ನಾನು ಸತ್ತಮೇಲೆಯೂ
ತೆರೆದುಕೊಂಡೇ ಇರಲಿ ನನ್ನ ಕಣ್ಣು,

ನಿನಗಾಗಿ ಕಾಯುವ ಹವ್ಯಾಸ
ಬಿಟ್ಟುಹೋಗಿಲ್ಲ ನನ್ನ ಇನ್ನೂ.
– ಫೈಜ್ ಅಹ್ಮದ್ ಫೈಜ್

11.
ಲೆಕ್ಕ ಹಾಕುತ್ತಿದ್ದೆ ಜಗತ್ತು ಕರುಣಿಸಿರುವ
ನೋವುಗಳ ಮತ್ತೆ ಮತ್ತೆ,

ಯಾಕೋ ನೆನಪಾಗುತ್ತಿರುವೆ ನೀನು
ಲೆಕ್ಕವಿಲ್ಲದಷ್ಟು ಬಾರಿ ಮತ್ತೆ ಮತ್ತೆ.
– ಫೈಜ್ ಅಹ್ಮದ್ ಫೈಜ್

12.
ಬಂದು ನೆಲೆಸಿದ ಮೇಲೆ ಹಿಂದೂ ಮುಸಲ್ಮಾನರು
ನಮ್ಮ ಓಣಿಯೊಳಗೆ,

ಮನುಷ್ಯರ ಮುಖಗಳನ್ನು ಕಾಣುವ ತಹತಹ
ತೀವ್ರವಾಯಿತು ಮನದೊಳಗೆ.
– ಕೈಫಿ ಅಝ್ಮಿ

13.
ಒಂದು ಹಿಂಜರಿಕೆ ಮಾತ್ರ
ಮನಸಿನ ಮಾತು ಹೇಳುವಾಗ ನನಗೆ

ನಿನ್ನ ಹೆಸರು ಬಂದೇ ಬರುವದು
ನನ್ನ ಈ ಕಥೆಯೊಳಗೆ.
– ಕೈಫಿ ಅಝ್ಮಿ

14.
ಏನಾಗಿದೆ ನಿನಗೆ, ಅಷ್ಟು ನಗುವಂಥದು
ಯಾವ ನೋವದು ನನ್ನಿಂದ ಬಚ್ಚಿಡುವಂಥದು.

ಕಣ್ಣಂಚಲ್ಲಿ ಹಸಿ, ತುಟಿ ಮೇಲೆ ನಗು
ಏನಾಗಿದೆ ನಿನಗೆ, ಏನೋ ಹಾಡುವಂಥದು.
– ಕೈಫಿ ಅಝ್ಮಿ

15.
ಒಂದಿಷ್ಟು ಸಮಯದಿಂದ
ನಿನ್ನ ನೆನಪಾಗುತ್ತಿಲ್ಲ ಎನ್ನುವುದು ನಿಜವಾದರೂ,

ನಿನ್ನ ಮರೆತುಬಿಟ್ಟಿರುವೆ ಎನ್ನುವುದು ಮಾತ್ರ
ಸಂಪೂರ್ಣ ಸುಳ್ಳು.
– ಫಿರಕ್ ಗೋರಕ್‌ಪುರಿ

16.
ಬಹಳ ಮೊದಲೇ ಆ ಹೆಜ್ಜೆಗಳ
ಸಂಕೋಚವನ್ನು ಗುರುತಿಸುತ್ತೇನೆ,

ಹೇ ಬದುಕು! ಬಹಳಷ್ಟು ದೂರದಿಂದಲೇ
ನಿನ್ನನ್ನು ಗುರುತಿಸುತ್ತೇನೆ.
– ಫಿರಕ್ ಗೋರಕ್‌ಪುರಿ

17.
ವೈರಿಯಲ್ಲೂ
ಸ್ವಾಭಿಮಾನದ ನಿರೀಕ್ಷೆ ನನಗೆ,

ತಲೆ ಯಾರದಾದರೇನು
ಕಾಲುಗಳ ಮೇಲೆ ಇಷ್ಟವಾಗುವುದಿಲ್ಲ ನನಗೆ.
– ಜಾವೇದ್ ಅಖ್ತರ್

18.
ಎಲ್ಲರಿಂದಲೂ ಖುಷಿ
ಒಂದು ಹೆಜ್ಜೆ ದೂರ ಇದೆ,

ಪ್ರತಿ ಮನೆಯಲ್ಲೂ ಕೋಣೆ
ಒಂದೇ ಒಂದು ಕಡಿಮೆ ಇದೆ.
– ಜಾವೇದ್ ಅಖ್ತರ್

19.
ಕದ್ದು ತರುತ್ತಿದ್ದೆವು ಕೂಡಲು
ನಾವಿಬ್ಬರೂ ಸಮಯವನ್ನ ಆಗ,

ಈಗ ಭೇಟಿಯಾಗುತ್ತೇವೆ
ಯಾವಾಗಲಾದರೂ ಸಮಯ ಸಿಕ್ಕಾಗ.
– ಜಾವೇದ್ ಅಖ್ತರ್

20.
ಬದುಕುವ ರೀತಿಗಳೇ ವಿಚಿತ್ರ
ಈ ಶಹರದಲ್ಲಿ,

ಮಾತುಗಳಲ್ಲೇನೋ ಭರ್ತಿ ತಮಾಶೆ
ನೋವಿನ ಗಾಯಗಳು ದನಿಯಲ್ಲಿ.
– ಜಾವೇದ್ ಅಖ್ತರ್

21.
ಹೋಗಿ ಹೇಳಿ ಯಾರಾದರೂ
ಜ್ವಾಲೆಗಳಿಗೆ, ಕಿಡಿಗಳಿಗೆ

ಪುರುಸೊತ್ತು ಮಾಡಿಕೊಂಡು,

ಅರಳಿನಿಂತಿವೆ ಹೂಗಳು
ಈ ಸಲ
ಪೂರ್ತಿ ತಯಾರಿ ಮಾಡಿಕೊಂಡು.
– ರಾಹತ್ ಇಂದೂರಿ

22.
ಪ್ರತಿರಾತ್ರಿ
ನಕ್ಷತ್ರಗಳಿಗೆ ತಮ್ಮ ಮೆರೆದಾಟದಲ್ಲಿ
ಅಡಚಣಿಯಾಗುತ್ತದೆ,

ಕತ್ತಲೆಯಾದೊಡನೆ
ತಲೆತಿರುಕ ಚಂದ್ರನ ಸವಾರಿ
ಮನೆಯಿಂದ ಹೊರಗೆ ಬೀಳುತ್ತದೆ.
– ರಾಹತ್ ಇಂದೂರಿ

23.
ನನ್ನ ಚಹರೆಯ ಬದಲಾಗುವ ಬಣ್ಣಗಳನ್ನು
ಜನ ಗಂಭೀರವಾಗಿ ಗಮನಿಸುತ್ತಾರೆ

ನಿನ್ನ ಹೆಸರ ಮುಂದೆ ಮಾಡಿ
ಜನ ನನ್ನ ತಮಾಶೆ ಮಾಡುತ್ತಾರೆ
– ರಾಹತ್ ಇಂದೂರಿ

24.
ಜನ ಮಾತಾಡಿಕೊಳ್ಳುವಂತೆ ನಿನಗೆ ಇನ್ನೂ
ನನ್ನ ಮೇಲಿನ ಮುನಿಸು ಕಡಿಮೆಯಾಗಿಲ್ಲ,

ಆದರೆ ನಿನ್ನ ಕಣ್ಣುಗಳು ಮಾತ್ರ ನನಗೆ
ಬೇರೆ ಏನೋ ಹೇಳುತ್ತಿವೆಯಲ್ಲ.
– ಜನ್ ನಿಸಾರ್ ಅಖ್ತರ್

25.
ನೂರಕ್ಕೆ ನೂರು ನಿಜ
ನನ್ನ ಕವಿತೆಗಳು ಇಡೀ ಜಗತ್ತಿಗಾಗಿ,

ಆದರೆ ಕೆಲವು ಸಾಲುಗಳು ಮಾತ್ರ
ಕೇವಲ ಅವಳಿಗಾಗಿ.
– ಜನ್ ನಿಸಾರ್ ಅಖ್ತರ್

26.
ಇವತ್ತು ಮಾತ್ರ
ನಿನ್ನ ಮುಟ್ಟಿ ಮಾತನಾಡಿಸಿದರೂ
ನೀನು ಸಿಗಲಿಲ್ಲ ನನಗೆ,

ಹಿಂದೊಮ್ಮೆ
ನಿನ್ನ ಭೇಟಿ ಮಾಡುವ ಆಲೋಚನೆಯೇ
ತಬ್ಬಿಬ್ಬು ಮಾಡುತ್ತಿತ್ತು ನನ್ನ !
– ಜನ್ ನಿಸಾರ್ ಅಖ್ತರ್

27.
ಗೊತ್ತಿರಲಿ ನಿಮಗೆ ಇಷ್ಟು
ಪ್ರೀತಿ ಅಷ್ಟು ಸುಲಭವಲ್ಲ

ಬೆಂಕಿಯ ನದಿ ಇದು
ಮುಳುಗಿ ಈಜದೆ ಬೇರೆ ದಾರಿ ಇಲ್ಲ .
– ಜಿಗರ್ ಮೊರಾದಾಬಾದಿ

28.
ಎಲ್ಲ ಕಡೆ ಮೆರೆಯುತ್ತಿವೆ
ಪ್ರೇಮದ ಸಂದೇಶಗಳಾಗಿ,

ನೋಡಿ ಹೇಗಿದೆ ನನಗಿಂತಲೂ
ನನ್ನ ಕಥೆಗಳ ಅದೃಷ್ಟವೇ
ಜಬರ್ದಸ್ತಾಗಿ.
– ಜಿಗರ್ ಮೊರಾದಾಬಾದಿ

29.
ನನ್ನ ಬದುಕೇನೋ ಕಳೆದು ಹೋಯಿತು
ನಿನ್ನ ವಿರಹದ ನೆರಳಲ್ಲಿ,

ನನ್ನ ಸಾವಿಗೂ ಒಂದು ಪ್ರಿಯವಾದ
ಕಾರಣ ಬೇಕಲ್ಲ.
-ಜಿಗರ್ ಮೊರಾದಾಬಾದಿ

 

ಇದನ್ನೂ ಓದಿ: ಗುಲ್ಜಾರ್ ಅವರ ಪದ್ಯಗಳು

 

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ‘ಹೂಬಾಣ’, ‘ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...