Homeಮುಖಪುಟಒಂದಿಷ್ಟು ಶಾಯರಿಗಳು

ಒಂದಿಷ್ಟು ಶಾಯರಿಗಳು

- Advertisement -
- Advertisement -

1.
ಬದುಕು ನಡೆಯುವುದು
ತನ್ನ ಕಾಲುಗಳ ಮೇಲೆ ಫರಾಜ್,

ಬೇರೆಯವರ ಸಹಾಯದಿಂದ ಸಾಗುವುದು
ಶವಯಾತ್ರೆ ಮಾತ್ರ.
– ಫರಾಜ್ ಅಹ್ಮದ್

2.
ಎಷ್ಟೊಂದು ಜನರಿಗೆ ಪ್ರೀತಿಸುವೆನೆಂದು
ಮಾತು ಕೊಟ್ಟಿದ್ದೀಯ ಫರಾಜ್?

ಪ್ರತಿದಿನ ಹೊಸಬರೊಬ್ಬರು
ನಿನ್ನ ವಿಳಾಸ ಕೇಳುತ್ತಿದ್ದಾರೆ.
– ಫರಾಜ್ ಅಹ್ಮದ್

3.
ಕೇವಲ ದ್ವೇಷವಷ್ಟೇ ಅಲ್ಲ
ಜಗತ್ತಿನ ದುಃಖಕ್ಕೆ ಕಾರಣ ಫರಾಜ್,

ಪ್ರೇಮವೂ ಸಮಾಧಾನಿಗಳಿಗೆ ಕೊಡುತ್ತದೆ
ಬಹಳ ಕಷ್ಟ.
– ಫರಾಜ್ ಅಹ್ಮದ್

4.
ಯಾರು ಯಾಕೆ ಅಳುತ್ತಾರೆ ಗೆಳೆಯ
ಬೇರೆ ಯಾರದೋ ಸಲುವಾಗಿ,

ಎಲ್ಲ ಅಳುತ್ತಿರುವುದು
ತಮ್ಮದೇ ಯಾವುದೋ ಮಾತಿನ ಕಾರಣವಾಗಿ.
– ಸಾಹಿರ್ ಲುಧಿಯಾನ್ವಿ

5.
ತಾನೇ ಸ್ವತಃ ಒಂದು
ಸಮಸ್ಯೆಯಾಗಿರುವಾಗ,

ಬೇರೆ ಯಾವ ಸಮಸ್ಯೆಗಳಿಗೆ ತಾನೇ
ಪರಿಹಾರವಾದೀತು ಯುದ್ಧ?
– ಸಾಹಿರ್ ಲುಧಿಯಾನ್ವಿ

6.
ಅಕಸ್ಮಾತ್ ಬದುಕಿನಲ್ಲಿ
ಮತ್ತೆ ಭೇಟಿಯಾದರೆ,

ವಿಚಾರಿಸುತ್ತೇನೆ ನನ್ನ ಹತಾಶೆಯ ಬಗ್ಗೆ
ನಿನ್ನ ವಿವಶತೆಯನ್ನ.
– ಸಾಹಿರ್ ಲುಧಿಯಾನ್ವಿ

7.
ಬಿರುಗಾಳಿಯ ದೋಣಿ
ಬದುಕಿಸಿತು ನನ್ನ,

ಮುಳುಗಿಸಿಬಿಡುತ್ತಿದ್ದರು ತೀರದ ಜನ
ನನ್ನ ಹಡಗನ್ನ.
– ಮಜ್ರೂಹ್ ಸುಲ್ತಾನ್‌ಪುರಿ

8.
ನಿನ್ನ ಹೊರತಾಗಿಯೂ ಇದ್ದವು
ಶರಣಾಗುವ ಜಾಗಗಳು, ಮರೆತುಹೋದೆ,

ಹೊರಬಿದ್ದ ಮೇಲೆ ನಿನ್ನ ಸುಂದರ ಸಂಜೆಯಿಂದ
ಎಲ್ಲ ದಾರಿಗಳ ನಾನು, ಮರೆತುಹೋದೆ.
– ಮಜ್ರೂಹ್ ಸುಲ್ತಾನ್‌ಪುರಿ

9.
ದೂರ ಕುಳಿತಿದ್ದೆ ಆದರೂ ಬಿತ್ತು
ನನ್ನ ಮೇಲೆ ಸಾಕಿಯ ಕಣ್ಣು,

ದಾಹ ನಿಜವಾಗಿದ್ದರೆ ಬಂದೇ ಬರುತ್ತದೆ
ಮಧುಪಾತ್ರೆಯೂ ಹುಡುಕಿಕೊಂಡು.
– ಮಜ್ರೂಹ್ ಸುಲ್ತಾನ್‌ಪುರಿ

10.
ನಾನು ಸತ್ತಮೇಲೆಯೂ
ತೆರೆದುಕೊಂಡೇ ಇರಲಿ ನನ್ನ ಕಣ್ಣು,

ನಿನಗಾಗಿ ಕಾಯುವ ಹವ್ಯಾಸ
ಬಿಟ್ಟುಹೋಗಿಲ್ಲ ನನ್ನ ಇನ್ನೂ.
– ಫೈಜ್ ಅಹ್ಮದ್ ಫೈಜ್

11.
ಲೆಕ್ಕ ಹಾಕುತ್ತಿದ್ದೆ ಜಗತ್ತು ಕರುಣಿಸಿರುವ
ನೋವುಗಳ ಮತ್ತೆ ಮತ್ತೆ,

ಯಾಕೋ ನೆನಪಾಗುತ್ತಿರುವೆ ನೀನು
ಲೆಕ್ಕವಿಲ್ಲದಷ್ಟು ಬಾರಿ ಮತ್ತೆ ಮತ್ತೆ.
– ಫೈಜ್ ಅಹ್ಮದ್ ಫೈಜ್

12.
ಬಂದು ನೆಲೆಸಿದ ಮೇಲೆ ಹಿಂದೂ ಮುಸಲ್ಮಾನರು
ನಮ್ಮ ಓಣಿಯೊಳಗೆ,

ಮನುಷ್ಯರ ಮುಖಗಳನ್ನು ಕಾಣುವ ತಹತಹ
ತೀವ್ರವಾಯಿತು ಮನದೊಳಗೆ.
– ಕೈಫಿ ಅಝ್ಮಿ

13.
ಒಂದು ಹಿಂಜರಿಕೆ ಮಾತ್ರ
ಮನಸಿನ ಮಾತು ಹೇಳುವಾಗ ನನಗೆ

ನಿನ್ನ ಹೆಸರು ಬಂದೇ ಬರುವದು
ನನ್ನ ಈ ಕಥೆಯೊಳಗೆ.
– ಕೈಫಿ ಅಝ್ಮಿ

14.
ಏನಾಗಿದೆ ನಿನಗೆ, ಅಷ್ಟು ನಗುವಂಥದು
ಯಾವ ನೋವದು ನನ್ನಿಂದ ಬಚ್ಚಿಡುವಂಥದು.

ಕಣ್ಣಂಚಲ್ಲಿ ಹಸಿ, ತುಟಿ ಮೇಲೆ ನಗು
ಏನಾಗಿದೆ ನಿನಗೆ, ಏನೋ ಹಾಡುವಂಥದು.
– ಕೈಫಿ ಅಝ್ಮಿ

15.
ಒಂದಿಷ್ಟು ಸಮಯದಿಂದ
ನಿನ್ನ ನೆನಪಾಗುತ್ತಿಲ್ಲ ಎನ್ನುವುದು ನಿಜವಾದರೂ,

ನಿನ್ನ ಮರೆತುಬಿಟ್ಟಿರುವೆ ಎನ್ನುವುದು ಮಾತ್ರ
ಸಂಪೂರ್ಣ ಸುಳ್ಳು.
– ಫಿರಕ್ ಗೋರಕ್‌ಪುರಿ

16.
ಬಹಳ ಮೊದಲೇ ಆ ಹೆಜ್ಜೆಗಳ
ಸಂಕೋಚವನ್ನು ಗುರುತಿಸುತ್ತೇನೆ,

ಹೇ ಬದುಕು! ಬಹಳಷ್ಟು ದೂರದಿಂದಲೇ
ನಿನ್ನನ್ನು ಗುರುತಿಸುತ್ತೇನೆ.
– ಫಿರಕ್ ಗೋರಕ್‌ಪುರಿ

17.
ವೈರಿಯಲ್ಲೂ
ಸ್ವಾಭಿಮಾನದ ನಿರೀಕ್ಷೆ ನನಗೆ,

ತಲೆ ಯಾರದಾದರೇನು
ಕಾಲುಗಳ ಮೇಲೆ ಇಷ್ಟವಾಗುವುದಿಲ್ಲ ನನಗೆ.
– ಜಾವೇದ್ ಅಖ್ತರ್

18.
ಎಲ್ಲರಿಂದಲೂ ಖುಷಿ
ಒಂದು ಹೆಜ್ಜೆ ದೂರ ಇದೆ,

ಪ್ರತಿ ಮನೆಯಲ್ಲೂ ಕೋಣೆ
ಒಂದೇ ಒಂದು ಕಡಿಮೆ ಇದೆ.
– ಜಾವೇದ್ ಅಖ್ತರ್

19.
ಕದ್ದು ತರುತ್ತಿದ್ದೆವು ಕೂಡಲು
ನಾವಿಬ್ಬರೂ ಸಮಯವನ್ನ ಆಗ,

ಈಗ ಭೇಟಿಯಾಗುತ್ತೇವೆ
ಯಾವಾಗಲಾದರೂ ಸಮಯ ಸಿಕ್ಕಾಗ.
– ಜಾವೇದ್ ಅಖ್ತರ್

20.
ಬದುಕುವ ರೀತಿಗಳೇ ವಿಚಿತ್ರ
ಈ ಶಹರದಲ್ಲಿ,

ಮಾತುಗಳಲ್ಲೇನೋ ಭರ್ತಿ ತಮಾಶೆ
ನೋವಿನ ಗಾಯಗಳು ದನಿಯಲ್ಲಿ.
– ಜಾವೇದ್ ಅಖ್ತರ್

21.
ಹೋಗಿ ಹೇಳಿ ಯಾರಾದರೂ
ಜ್ವಾಲೆಗಳಿಗೆ, ಕಿಡಿಗಳಿಗೆ

ಪುರುಸೊತ್ತು ಮಾಡಿಕೊಂಡು,

ಅರಳಿನಿಂತಿವೆ ಹೂಗಳು
ಈ ಸಲ
ಪೂರ್ತಿ ತಯಾರಿ ಮಾಡಿಕೊಂಡು.
– ರಾಹತ್ ಇಂದೂರಿ

22.
ಪ್ರತಿರಾತ್ರಿ
ನಕ್ಷತ್ರಗಳಿಗೆ ತಮ್ಮ ಮೆರೆದಾಟದಲ್ಲಿ
ಅಡಚಣಿಯಾಗುತ್ತದೆ,

ಕತ್ತಲೆಯಾದೊಡನೆ
ತಲೆತಿರುಕ ಚಂದ್ರನ ಸವಾರಿ
ಮನೆಯಿಂದ ಹೊರಗೆ ಬೀಳುತ್ತದೆ.
– ರಾಹತ್ ಇಂದೂರಿ

23.
ನನ್ನ ಚಹರೆಯ ಬದಲಾಗುವ ಬಣ್ಣಗಳನ್ನು
ಜನ ಗಂಭೀರವಾಗಿ ಗಮನಿಸುತ್ತಾರೆ

ನಿನ್ನ ಹೆಸರ ಮುಂದೆ ಮಾಡಿ
ಜನ ನನ್ನ ತಮಾಶೆ ಮಾಡುತ್ತಾರೆ
– ರಾಹತ್ ಇಂದೂರಿ

24.
ಜನ ಮಾತಾಡಿಕೊಳ್ಳುವಂತೆ ನಿನಗೆ ಇನ್ನೂ
ನನ್ನ ಮೇಲಿನ ಮುನಿಸು ಕಡಿಮೆಯಾಗಿಲ್ಲ,

ಆದರೆ ನಿನ್ನ ಕಣ್ಣುಗಳು ಮಾತ್ರ ನನಗೆ
ಬೇರೆ ಏನೋ ಹೇಳುತ್ತಿವೆಯಲ್ಲ.
– ಜನ್ ನಿಸಾರ್ ಅಖ್ತರ್

25.
ನೂರಕ್ಕೆ ನೂರು ನಿಜ
ನನ್ನ ಕವಿತೆಗಳು ಇಡೀ ಜಗತ್ತಿಗಾಗಿ,

ಆದರೆ ಕೆಲವು ಸಾಲುಗಳು ಮಾತ್ರ
ಕೇವಲ ಅವಳಿಗಾಗಿ.
– ಜನ್ ನಿಸಾರ್ ಅಖ್ತರ್

26.
ಇವತ್ತು ಮಾತ್ರ
ನಿನ್ನ ಮುಟ್ಟಿ ಮಾತನಾಡಿಸಿದರೂ
ನೀನು ಸಿಗಲಿಲ್ಲ ನನಗೆ,

ಹಿಂದೊಮ್ಮೆ
ನಿನ್ನ ಭೇಟಿ ಮಾಡುವ ಆಲೋಚನೆಯೇ
ತಬ್ಬಿಬ್ಬು ಮಾಡುತ್ತಿತ್ತು ನನ್ನ !
– ಜನ್ ನಿಸಾರ್ ಅಖ್ತರ್

27.
ಗೊತ್ತಿರಲಿ ನಿಮಗೆ ಇಷ್ಟು
ಪ್ರೀತಿ ಅಷ್ಟು ಸುಲಭವಲ್ಲ

ಬೆಂಕಿಯ ನದಿ ಇದು
ಮುಳುಗಿ ಈಜದೆ ಬೇರೆ ದಾರಿ ಇಲ್ಲ .
– ಜಿಗರ್ ಮೊರಾದಾಬಾದಿ

28.
ಎಲ್ಲ ಕಡೆ ಮೆರೆಯುತ್ತಿವೆ
ಪ್ರೇಮದ ಸಂದೇಶಗಳಾಗಿ,

ನೋಡಿ ಹೇಗಿದೆ ನನಗಿಂತಲೂ
ನನ್ನ ಕಥೆಗಳ ಅದೃಷ್ಟವೇ
ಜಬರ್ದಸ್ತಾಗಿ.
– ಜಿಗರ್ ಮೊರಾದಾಬಾದಿ

29.
ನನ್ನ ಬದುಕೇನೋ ಕಳೆದು ಹೋಯಿತು
ನಿನ್ನ ವಿರಹದ ನೆರಳಲ್ಲಿ,

ನನ್ನ ಸಾವಿಗೂ ಒಂದು ಪ್ರಿಯವಾದ
ಕಾರಣ ಬೇಕಲ್ಲ.
-ಜಿಗರ್ ಮೊರಾದಾಬಾದಿ

 

ಇದನ್ನೂ ಓದಿ: ಗುಲ್ಜಾರ್ ಅವರ ಪದ್ಯಗಳು

 

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ‘ಹೂಬಾಣ’, ‘ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...