Homeಕರ್ನಾಟಕ'ಹೆಣಗಳ ಮೇಲೆ ಹಣದ ರಾಜ್ಯ; ಇದೇ ಇವರ ಸಂವೇದನಾ ಹೀನತೆಯ ಗ್ಯಾರಂಟಿ..'; ಬಿಜೆಪಿ ವಿರುದ್ಧ ನಟ...

‘ಹೆಣಗಳ ಮೇಲೆ ಹಣದ ರಾಜ್ಯ; ಇದೇ ಇವರ ಸಂವೇದನಾ ಹೀನತೆಯ ಗ್ಯಾರಂಟಿ..’; ಬಿಜೆಪಿ ವಿರುದ್ಧ ನಟ ಕಿಶೋರ್ ಆಕ್ರೋಶ

- Advertisement -
- Advertisement -

ಬಿಜೆಪಿಯ ‘ಮೋದಿ ಗ್ಯಾರಂಟಿ’ ಘೋಷಣೆ ಕುರಿತು ಆಕ್ರೋಶ ಹೊರಹಾಕಿರುವ ಬಹುಭಾಷಾ ನಟ ಕಿಶೋರ್‌ ಕುಮಾರ್, ‘ನಮ್ಮ ಹೆಣಗಳ ಮೇಲೆ ಇವರ ಹಣದ ರಾಜ್ಯ ಇದೇ ಇವರ ಸಂವೇದನಾ ಹೀನತೆಯ ಗ್ಯಾರಂಟಿ’ ಎಂದು ಲೇವಡಿ ಮಾಡಿದ್ದಾರೆ.

ಈ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೋವಿಡ್ ಸಂದರ್ಭದ ಮೋದಿ ಸರ್ಕಾರದ ರಾಢಳಿತವನ್ನು ಟೀಕೆ ಮಾಡಿದ್ದಾರೆ.

“ಯಾರು ಸತ್ತರೆ ನನಗೇನು, ಅವರೇನು ನನಗಾಗಿ ಸತ್ತರೇ? ಎಂದು ಹೇಳುತ್ತಾ ಕೊರೋನಾದಿಂದ ಲಕ್ಷಾಂತರ ಜನ ಪ್ರಾಣಬಿಡುತ್ತಿದ್ದ ಕಾಲದಲ್ಲೂ ಔಷದಿ ಕಂಪನಿಗಳಿಂದ ಎಲೆಕ್ಟೊರಲ್ ಬಾಂಡ್ ಲೂಟಿ ಮಾಡಿದ, ಲಂಚ ತಿಂದು ಕಳಪೆ ಔಷದಿಯನ್ನು ಮಾರುಕಟ್ಟೆಗೆ ತಂದು ನಮ್ಮ ಜೀವದೊಂದಿಗೆ ಆಟವಾಡಿದ, ಅಮಾನವೀಯತೆಯ ನೀಚತೆಯ ಉತ್ತುಂಗ ತಲುಪಿದ ಪರಮ ಭ್ರಷ್ಠರು ಇನ್ನೂ ರಾಜಾರೋಷವಾಗಿ ತಿರುಗುತ್ತಿರುವುದು ಹೇಗೆ” ಅವರು ಪ್ರಶ್ನಿಸಿದ್ದಾರೆ.

“ಅದರಲ್ಲೂ ಸಾಕ್ಷ್ಯಾಧಾರ ಸಮೇತ ಸಿಕ್ಕಿಹಾಕಿಕೊಂಡರೂ ನಾಚಿಕೆ, ನ್ಯಾಯ ಯಾವುದರ ಪರಿವೆಯೂ ಇಲ್ಲದೆ ಈ ಅಸಂವಿಧಾನಿಕ ದರೋಡೆಯ ಅಪರಾಧವನ್ನು ತಾನೇ ಮಾಡಿದ್ದೆಂದೂ; ಅದು ಸರಿಯೆಂದೂ, ಆ ದರೋಡೆ ಗುಂಪಿನ ಪ್ರಮುಖ ಮೋದಿಯೇ ಬಹಿರಂಗವಾಗಿ ಸಮರ್ಥಿಸಿಕೊಳ್ಳಲು ಧೈರ್ಯ ಕೊಟ್ಟವರು ಯಾರು” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ಇವರು ರಾಜಕೀಯ ದಾಳವಾಗಿ ಬಳಸುವ ಧರ್ಮವೇ?? (ಹಾಗಿದ್ದರೆ ಆ ಧರ್ಮದ ರಕ್ಷಣೆಯಲ್ಲಿ ಇವರು ನಡೆಸಿದ ಈ ಹೇಯ ಕೃತ್ಯ ಆ ಧರ್ಮಕ್ಕೇ ಘೋರ ಅಪಮಾನವಲ್ಲವೇ) ಇವರ ಭ್ರಷ್ಟಾಚಾರದ ಸತ್ಯವನ್ನು ಜನರಿಗೆ ತಲುಪಿಸದೇ ಮುಚ್ಚಿಟ್ಟು, ಇವರು ಹೇಳುವ ಸುಳ್ಳನ್ನೇ ಹರಡುವ ಇವರ ಅಧಿಕಾರವನ್ನು ಕಾಪಾಡುವ ದೇಶದ್ರೊಹಿ ಮಾಧ್ಯಮವೇ? ಇಷ್ಟೆಲ್ಲಾ ಸಾಕ್ಷಿಯಿದ್ದೂ ಇವರನ್ನು ಬೆಂಬಲಿಸುವ ವಿವೇಚನೆ ಕಳೆದುಕೊಂಡ ಅಂಧಜನವೇ?
ಇವರ ಕೂಲಿ ಪಡೆಗೆ ಹೆದರಿ ಇವರನ್ನು ಪ್ರಶ್ನಿಸದ ನಾವೇ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ; ‘ಪ್ರತಿಪಕ್ಷಗಳಿಗೂ ದೇಣಿಗೆ ಸಿಕ್ಕಿದೆ, ಇದು ಸುಲಿಗೆಯೇ..?’; ಚುನಾವಣಾ ಬಾಂಡ್ ವ್ಯವಸ್ಥೆ ಸಮರ್ಥಿಸಿಕೊಂಡ ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...