HomeUncategorizedತಮಿಳುನಾಡು: 'ಜಾತಿ ದೌರ್ಜನ್ಯ ಎಸಗಿದ ಸವರ್ಣೀಯರನ್ನು ಸರ್ಕಾರ ರಕ್ಷಿಸುತ್ತಿದೆ..' ಎಂದು ಚುನಾವಣೆ ಬಹಿಷ್ಕರಿಸಿದ ದಲಿತ ಕುಟುಂಬಗಳು

ತಮಿಳುನಾಡು: ‘ಜಾತಿ ದೌರ್ಜನ್ಯ ಎಸಗಿದ ಸವರ್ಣೀಯರನ್ನು ಸರ್ಕಾರ ರಕ್ಷಿಸುತ್ತಿದೆ..’ ಎಂದು ಚುನಾವಣೆ ಬಹಿಷ್ಕರಿಸಿದ ದಲಿತ ಕುಟುಂಬಗಳು

- Advertisement -
- Advertisement -

ತಾವು ಕುಡಿಯುವ ನೀರನ್ನು ಮಲದಿಂದ ಕಲುಷಿತಗೊಳಿಸಿದ ಅಪರಾಧಿಗಳ ವಿರುದ್ಧ ತಮಿಳುನಾಡು ಸರ್ಕಾರ ತೋರಿದ ನಿಷ್ಕ್ರಿಯತೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪುದುಕೊಟ್ಟೈನ ವೆಂಗವಯಲ್ ಗ್ರಾಮದ ದಲಿತ ನಿವಾಸಿಗಳು, ಇಂದು ನಡೆದ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್. ವರದಿ ಮಾಡಿದೆ.

ಜಾತಿ ದೌರ್ಜನ್ಯ ಎಸಗಿದ ಪ್ರಬಲ ಜಾತಿಗಳ ಗುಂಪುಗಳನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ನಿವಾಸಿಗಳು ಆರೋಪಿಸಿದ್ದು,. ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವವರೆಗೂ ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಧರಣಿ ನಿರತ ನಿವಾಸಿಗಳು ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. “ನಾವು ಮಲ ಮಿಶ್ರಿತ ನೀರನ್ನು ಪಡೆಯುತ್ತೇವೆ; ನಮ್ಮ ಮತಗಳು ನಿಮಗೆ ಬೇಕೇ? ಮಲ ಮಿಶ್ರಿತ ನೀರು ಕುಡಿದ ಮೇಲೆ ನಿಮಗೆ ನಮ್ಮ ಮತ ಬೇಕೇ?” ಎಂದು ಪೋಸ್ಟರ್‌ನಲ್ಲಿ ಬರೆದಿದ್ದಾರೆ.

ವೆಂಗವಯಲ್ ನಿವಾಸಿ ಕನಕರಾಜ್ ಮಾತನಾಡಿ, ಸ್ಥಳೀಯ ಪಂಚಾಯಿತಿ ಚುನಾವಣೆ ಸೇರಿದಂತೆ ಪ್ರತಿ ಚುನಾವಣೆಯನ್ನು ತಪ್ಪಿತಸ್ಥರನ್ನು ಬಂಧಿಸುವವರೆಗೆ ಬಹಿಷ್ಕರಿಸುತ್ತಿದ್ದೇವೆ ಎಂದ ಹೇಳಿದ್ದಾರೆ. ಕಲುಷಿತ ನೀರು ಕುಡಿದು ಅಸ್ವಸ್ಥರಾದ ಮಕ್ಕಳಲ್ಲಿ ಅವರ ಮಗಳೂ ಸೇರಿದ್ದಾಳೆ.

“ನಮ್ಮ ಗ್ರಾಮದ 20 ಕುಟುಂಬಗಳು ಮತ್ತು ಸುಮಾರು 106 ಜನರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಪೊಲೀಸರು ನಮ್ಮ ಜನರನ್ನು ಹಿಂಬಾಲಿಸಿ, ಅವರ ಕೆಲವು ಫೋನ್ ಗಳನ್ನು ಜಪ್ತಿ ಮಾಡಿದ್ದಾರೆ. ಅವರು ನಮ್ಮ ಮತವನ್ನು ಹೇಗೆ ನಿರೀಕ್ಷಿಸುತ್ತಾರೆ? ಸರ್ಕಾರವು ಒದಗಿಸಿದ ನಮ್ಮ ಪಡಿತರ ಚೀಟಿಗಳನ್ನು ಸಹ ಒಪ್ಪಿಸಲು ನಾವು ಸಿದ್ಧರಿದ್ದೇವೆ. ಏಕೆಂದರೆ, ಅವರು ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಿದರು ಎಂಬ ಬಗ್ಗೆ ನಮಗೆ ಅತ್ಯಂತ ನಿರಾಶೆಯಾಗಿದೆ” ಎಂದು ಕನಕರಾಜ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಚುನಾವಣಾ ಬಹಿಷ್ಕಾರದ ವಿರುದ್ಧ ಮನವರಿಕೆ ಮಾಡಲು ಯಾವುದೇ ರಾಜಕೀಯ ಪಕ್ಷಗಳು ತಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳಿದ ಕನಕರಾಜ್, ಯಾವುದೇ ಪಕ್ಷವು ನಮಗೆ ಭರವಸೆ ನೀಡಲು ಅಥವಾ ತಪ್ಪಿತಸ್ಥರನ್ನು ಹಿಡಿಯುವುದಾಗಿ ಭರವಸೆ ನೀಡಲು ಪ್ರಯತ್ನಿಸಲಿಲ್ಲ. ಒಬ್ಬ ಸರ್ಕಾರಿ ಅಧಿಕಾರಿ ಮಾತ್ರ ನಮ್ಮನ್ನು ಭೇಟಿ ಮಾಡಿ ನಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಿಕೊಂಡರು. ಆದರೆ, ನಾವು ನಮ್ಮ ನಿಲುವಿನಲ್ಲಿ ದೃಢವಾಗಿದ್ದೇವೆ ಮತ್ತು ನಮಗೆ ನ್ಯಾಯ ಸಿಗುವವರೆಗೂ ಮತ ಚಲಾಯಿಸುವುದಿಲ್ಲ ಎಂದರು.

ಡಿಸೆಂಬರ್ 2022 ರಲ್ಲಿ ವೆಂಗವಯಲ್‌ನ ದಲಿತ ಕುಟುಂಬಗಳ ಐದು ಮಕ್ಕಳು ನೀರು ಕಲುಷಿತಗೊಂಡಿದ್ದರಿಂದ ಅಸ್ವಸ್ಥರಾಗಿದ್ದರು. ನಿವಾಸಿಗಳು ನೀರಿನ ಟ್ಯಾಂಕ್ ಅನ್ನು ಪರಿಶೀಲಿಸಿದಾಗ, ಟ್ಯಾಂಕ್ ನೀರು ಮಾನವ ಮಲದಿಂದ ಕಲುಷಿತವಾಗಿರುವುದನ್ನು ಕಂಡು ಬೆಚ್ಚಿಬಿದ್ದರು. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ, ಟ್ಯಾಂಕ್ ಅನ್ನು ಸ್ಚ್ಛಗೊಳಿಸಿ, ಮನೆಗಳನ್ನು ಸಂಪರ್ಕಿಸುವ ಪೈಪ್‌ಗಳನ್ನು ಬದಲಾಯಿಸಲಾಯಿತು.

ಆದರೆ, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಬದಲಾಗಿ ಪೊಲೀಸರು ಮತ್ತು ತನಿಖಾಧಿಕಾರಿಗಳು ತಮ್ಮ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದಲಿತ ನಿವಾಸಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ; ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ: ‘ಲವ್ ಜಿಹಾದ್’ ಆರೋಪ ನಿರಾಕರಿಸಿದ ಸರ್ಕಾರ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...