Homeಮುಖಪುಟ"ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?": ಮಲ್ಲಿಕಾರ್ಜುನ ಖರ್ಗೆ

“ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?”: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ದೇಶದಾದ್ಯಂತ ಪರಿಶಿಷ್ಟ ಜಾತಿಗಳು (ಎಸ್‌ಸಿಗಳು) ಇನ್ನೂ ತಾರತಮ್ಯವನ್ನು ಎದುರಿಸುತ್ತಿವೆ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ‘ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾರಣ’ಕ್ಕೆ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಮತ್ತು ಹೊಸ ಸಂಸತ್ ಭವನದ ಉದ್ಘಾಟನೆಗೆ ಮುರ್ಮು ಅವರನ್ನು ಆಹ್ವಾನಿಸಿಲ್ಲ. ಕೋವಿಂದ್ ಅವರಿಗೆ ಹೊಸ ಸಂಸತ್ ಭವನದ ಶಂಕುಸ್ಥಾಪನೆ ಮಾಡಲು ಅವಕಾಶ ನೀಡಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಇಂಡಿಯನ್ ಎಕ್ಸ್ ಪ್ರೆಸ್ ಆಯೋಜಿಸಿದ್ದ ‘ಐಡಿಯಾ ಎಕ್ಸ್ ಚೇಂಜ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಖರ್ಗೆ, ರಾಜಕೀಯ ಬಲವಂತದ ಕಾರಣದಿಂದ ಕಾಂಗ್ರೆಸ್ ರಾಮ ಮಂದಿರದ ಶಂಕುಸ್ಥಾಪನೆಯಿಂದ ದೂರ ಉಳಿದಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

“ನನ್ನ ಜನರಿಗೆ ಇನ್ನೂ ಅನೇಕ ದೇವಸ್ಥಾನಗಳಿಗೆ ಪ್ರವೇಶಿಸಲು ಅನುಮತಿಯಿಲ್ಲ. ಹೀಗಿರುವಾಗ ನಾನು ಆಯೋಧ್ಯೆಗೆ ಹೋದರೆ ಸಹಿಸಿಕೊಳ್ಳುವರೇ?” ಎಂದು ಪ್ರಶ್ನಿಸಿದ್ದಾರೆ.

ಎನ್‌ಡಿಎ 400 ಸೀಟ್ ಪಡೆಯಲಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಖರ್ಗೆ, “ಜನರು ಬದಲಾವಣೆಗಾಗಿ ಹಾತೊರೆಯುತ್ತಿದ್ದಾರೆ. ಹಾಗಾಗಿ, ಮೂರನೇ ಬಾರಿಯ ಕನಸು ಈಡೇರುವುದಿಲ್ಲ” ಎಂದಿದ್ದಾರೆ. ಮತೊಮ್ಮೆ ಬಿಜೆಪಿ ಸರ್ಕಾರ ರಚಿಸುವ ಬಗ್ಗೆ ಎಚ್ಚರಿಕೆ ನೀಡಿದ ಖರ್ಗೆ, “ಅವರು ಈಗಲೇ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.

ಕಾಂಗ್ರೆಸ್ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿಬೇಕಿತ್ತು ಎಂದು ನಿಮಗೆ ಅನಿಸಿದೆಯಾ? ಎಂಬ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ” ಅದು ವೈಯುಕ್ತಿಕ ನಂಬಿಕೆ. ಯಾರು, ಯಾವಾಗ ಬೇಕಾದರು ಅಲ್ಲಿಗೆ ಹೋಗಬಹುದು. ಮೋದಿ ಪೂಜಾರಿಯಲ್ಲ. ರಾಮ ವಿಗ್ರಹ ಪ್ರತಿಷ್ಠಾಪಿಸುವಲ್ಲಿ ಅವರೇಕೆ ಮುಂದಾಳತ್ವ ವಹಿಸಬೇಕು? ಅವರು ಅದನ್ನು ಕೇವಲ ರಾಜಕೀಯ ಉದ್ದೇಶಗಳಿಗಾಗಿ ಮಾಡಿದ್ದಾರೆ. ದೇವಾಲಯದ ಮೂರನೇ ಒಂದು ಭಾಗ ಇನ್ನೂ ಪೂರ್ಣಗೊಂಡಿಲ್ಲ. ಇದು ರಾಜಕೀಯ ಕಾರ್ಯವೇ ಅಥವಾ ಧಾರ್ಮಿಕ ಕಾರ್ಯವೇ? ರಾಜಕೀಯದೊಂದಿಗೆ ಧರ್ಮವನ್ನು ಏಕೆ ಬೆರೆಸುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

“ನನ್ನ ಜನರಿಗೆ ಇಂದಿಗೂ ಎಲ್ಲಾ ದೇವಾಲಯಗಳಲ್ಲಿ ಪ್ರವೇಶವಿಲ್ಲ. ರಾಮ ಮಂದಿರ ಬಿಡಿ, ನೀವು ಎಲ್ಲಿಗೆ ಹೋದರೂ, ಪ್ರವೇಶಕ್ಕಾಗಿ ಹೋರಾಟ ಮಾಡಬೇಕು. ಹಳ್ಳಿಯಲ್ಲಿ ಸಣ್ಣ ದೇವಾಲಯಗಳಿಗೂ ಅಲ್ಲಿನ ಪ್ರಬಲ ಜಾತಿಯವರು ಅನುಮತಿಸುವುದಿಲ್ಲ. ಕುಡಿಯುವ ನೀರಿಗೆ ಅವಕಾಶ ನೀಡುವುದಿಲ್ಲ. ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡುವುದಿಲ್ಲ. ಕುದುರೆ ಮೇಲೆ ಮೆರವಣಿಗೆ ಹೋಗುವ ಮದು ಮಗನನ್ನು ಸಹ ನೀವು (ಬಿಜೆಪಿ-ಆರ್‌ಎಸ್‌ಎಸ್‌) ಸಹಿಸುವುದಿಲ್ಲ. ಜನರು ಅವರನ್ನು ಎಳೆದುಕೊಂಡು ಹೊಡೆಯುತ್ತಾರೆ. ದಲಿತರು ಮೀಸೆ ಬಿಟ್ಟರೆ ಸಹಿಸುವುದಿಲ್ಲ. ನಾನು ರಾಮ ಮಂದಿರಕ್ಕೆ ಹೋಗಿದ್ದರೆ, ಅವರು (ಮೋದಿ-ಬಿಜೆಪಿ) ಸಹಿಸಿಕೊಳ್ಳುತ್ತಿದ್ದರೇ? ಎಂದು ಖರ್ಗೆ ಕೇಳಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಟಿಐಎಸ್‌ಎಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...