Homeಮುಖಪುಟಬಿಜೆಪಿ ಸಂವಿಧಾನ ಬದಲಾಯಿಸುವ ಬಯಕೆ ಹೊಂದಿದೆ: ಜೈರಾಮ್‌ ರಮೇಶ್‌

ಬಿಜೆಪಿ ಸಂವಿಧಾನ ಬದಲಾಯಿಸುವ ಬಯಕೆ ಹೊಂದಿದೆ: ಜೈರಾಮ್‌ ರಮೇಶ್‌

- Advertisement -
- Advertisement -

ಬಿಜೆಪಿಯ ‘ಅಬ್‌ ಕಿ ಬಾರ್‌ 400 ಪಾರ್‌’ ರ್ಯಾಲಿಯು ಸಂವಿಧಾನವನ್ನು ಬದಲಾಯಿಸುವ ಬಯಕೆಯನ್ನು ಸೂಚಿಸುತ್ತದೆ.  ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿಯವರ ಪರಂಪರೆ ಮತ್ತು ಅವರ ಮೌಲ್ಯಗಳನ್ನು ನಿಜವಾಗಿಯೂ ಗೌರವಿಸುತ್ತಾರೆಯೇ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ಮೋದಿ ಅವರ ರ್ಯಾಲಿಗಿಂತ ಮೊದಲು ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ವಾರ್ಧಾ ಒಂದು ಕಾಲದಲ್ಲಿ ಮಹಾತ್ಮಾ ಗಾಂಧಿ ವಾಸಿಸುತ್ತಿದ್ದ ನಗರವಾಗಿದೆ. ಇಂದು ಮಹಾತ್ಮರ ಆದರ್ಶಗಳ ಮೇಲೆ ಪ್ರಧಾನಿಯವರ ಪಕ್ಷದ ನಾಯಕರಿಂದ ದಾಳಿ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಗಾಂಧಿಯವರ ಪರಂಪರೆ ಮತ್ತು ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ನಿಜವಾಗಿಯೂ ಗೌರವಿಸುತ್ತಾರೆಯೇ ಎಂದು ರಮೇಶ್ ಪ್ರಶ್ನಿಸಿದರು.

ರೈತರ ಆತ್ಮಹತ್ಯೆ ತಡೆಯಲು ಪ್ರಧಾನಿ ಏನು ಮಾಡಿದ್ದಾರೆ? ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನದಲ್ಲಿ ಬಿಜೆಪಿ ಆದಿವಾಸಿಗಳನ್ನು ಏಕೆ ನಿರಾಸೆಗೊಳಿಸಿದೆ? ಗಾಂಧಿ ಮತ್ತು ಗೋಡ್ಸೆ ವಿಚಾರದಲ್ಲಿ ಪ್ರಧಾನಿ ಯಾರ ಪರ ನಿಂತಿದ್ದಾರೆ? ಎಂದು ಜೈರಾಮ್‌ ರಮೇಶ್ ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ  ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದಲ್ಲಿ  ದಿನಕ್ಕೆ 7 ರೈತರು ತಮ್ಮ ಪ್ರಾಣವನ್ನು ತೆಗೆದುಕೊಳ್ಳುತ್ತಾರೆ. ಈ ಅಂಕಿ-ಅಂಶಗಳನ್ನು ರಾಜ್ಯದ ಸಚಿವರೋರ್ವರು ನೀಡಿದ್ದಾರೆ. ಅವರು ಕಳೆದ ವರ್ಷದ ಜನವರಿಯಿಂದ-ಅಕ್ಟೋಬರ್ ನಡುವೆ 2,366 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು  ಮಾಹಿತಿ ನೀಡಿದ್ದಾರೆ. ಕಳೆದ ವರ್ಷ 60 ಪ್ರತಿಶತ ಜಿಲ್ಲೆಗಳು ಬರ ಪರಿಸ್ಥಿತಿಯನ್ನು ಎದುರಿಸಿದವು ಆದರೆ ಸರಕಾರದಿಂದ ಯಾವುದೇ ಸಹಾಯ ಬಂದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ನ್ಯಾಯ ಪತ್ರವು ಸ್ವಾಮಿನಾಥನ್ ಸಮಿತಿಯ ಶಿಫಾರಸಿನಂತೆ ರೈತರಿಗೆ ಎಂಎಸ್‌ಪಿ, ಕೃಷಿ ಸಾಲ ಮನ್ನಾ ಮತ್ತು 30 ದಿನಗಳಲ್ಲಿ ಎಲ್ಲಾ ಬೆಳೆ ವಿಮೆ ನೀಡುವ ಭರವಸೆ ನೀಡಿದೆ. ಮಹಾರಾಷ್ಟ್ರ ಮತ್ತು ಭಾರತದ ರೈತರನ್ನು ಬೆಂಬಲಿಸುವ ವಿಚಾರದಲ್ಲಿ ಬಿಜೆಪಿಯ ದೃಷ್ಟಿಕೋನ ಏನು? ಎಂದು ಜೈರಾಮ್‌ ರಮೇಶ್‌ ಪ್ರಶ್ನಿಸಿದ್ದಾರೆ.

ಬಿಜೆಪಿಯ ಕೆಲವು ನಾಯಕರು ಮಹಾತ್ಮಾ ಗಾಂಧಿ ಅವರನ್ನು ನಿಂದಿಸಿದ್ದಾರೆ, ಮತ್ತೆ ಕೆಲವರು ಗೋಡ್ಸೆ ಮತ್ತು ಗಾಂಧಿ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಕಷ್ಟ ಎಂದಿದ್ದಾರೆ. ಬಿಜೆಪಿ ನಾಯಕರು ಪದೇ ಪದೇ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವುದು ಏಕೆ? ಈ ಬಗ್ಗೆ ಮೋದಿ ಮೌನ ಮುರಿಯಬೇಕು ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

2006ರಲ್ಲಿ, ಕಾಂಗ್ರೆಸ್ ಕ್ರಾಂತಿಕಾರಿ ಅರಣ್ಯ ಹಕ್ಕುಗಳ ಕಾಯಿದೆಯನ್ನು (ಎಫ್‌ಆರ್‌ಎ) ಅಂಗೀಕರಿಸಿತು, ಇದು ಆದಿವಾಸಿಗಳು ಮತ್ತು ಅರಣ್ಯದಲ್ಲಿ ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿದೆ ಮತ್ತು ಅವರು ಸಂಗ್ರಹಿಸುವ ಅರಣ್ಯ ಉತ್ಪನ್ನದಿಂದ ಆರ್ಥಿಕವಾಗಿ ಲಾಭ ಪಡೆಯಲು ಅವಕಾಶವನ್ನು ನೀಡುತ್ತದೆ. ಆದರೆ ಬಿಜೆಪಿ ಸರ್ಕಾರವು ಎಫ್‌ಆರ್‌ಎ ಅನುಷ್ಠಾನಕ್ಕೆ ಅಡ್ಡಿಪಡಿಸಿದೆ, ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳನ್ನು ಪಡೆಯದಂತೆ ತಡೆಹಿಡಿಯಲಾಗಿದೆ ಎಂದು ಜೈರಾಮ್ ರಮೇಶ್‌ ಆರೋಪಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...