Homeಮುಖಪುಟಬಿಜೆಪಿಯ "400 ಪಾರ್" ಸಿನಿಮಾ ಮೊದಲ ದಿನವೇ ಫ್ಲಾಪ್ ಆಗಿದೆ: ತೇಜಸ್ವಿ ಯಾದವ್

ಬಿಜೆಪಿಯ “400 ಪಾರ್” ಸಿನಿಮಾ ಮೊದಲ ದಿನವೇ ಫ್ಲಾಪ್ ಆಗಿದೆ: ತೇಜಸ್ವಿ ಯಾದವ್

- Advertisement -
- Advertisement -

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ಬೆನ್ನಲ್ಲಿ ಪ್ರತಿಕ್ರಿಯಿಸಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್, ಬಿಜೆಪಿಯ “400 ಪಾರ್” ಚಿತ್ರವು ಮೊದಲ ದಿನವೇ ಸೂಪರ್ ಫ್ಲಾಪ್ ಆಗಿದೆ ಎಂದು ಹೇಳಿದ್ದಾರೆ.

ಮಹಾಘಟಬಂಧನ್ ಮೊದಲ ಹಂತದ ಚುನಾವಣೆಯ ಎಲ್ಲಾ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ. ನಾವು ಬ್ಲಾಕ್‌ಗಳಲ್ಲಿ ಸಭೆಗಳನ್ನು ನಡೆಸಿದ್ದೇವೆ ಮತ್ತು ಪ್ರತಿಕ್ರಿಯೆ ತುಂಬಾ ಚೆನ್ನಾಗಿದೆ. ಬಿಜೆಪಿಯ “400 ಪಾರ್” ಚಿತ್ರವು ಮೊದಲ ದಿನವೇ ಸೂಪರ್ ಫ್ಲಾಪ್ ಆಗಿದೆ. ಬಿಹಾರದ ಜನರು ಜಾಗೃತರಾಗಿದ್ದು, ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಬಿಹಾರ ಈ ಬಾರಿ ಅಚ್ಚರಿ ಫಲಿತಾಂಶಗಳನ್ನು ನೀಡಿರುವುದರಿಂದ ಮೊದಲ ಹಂತದಲ್ಲಿ ನಮಗೆ ಅವರ ಜೊತೆ ಸ್ಪರ್ಧೆಯೇ ಇರಲಿಲ್ಲ ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ.

ಮೊದಲ ಹಂತದಲ್ಲಿ ಯಾವುದೇ ಪೈಪೋಟಿ ಇಲ್ಲ. ಬಿಹಾರ ಈ ಬಾರಿ ಅಚ್ಚರಿ ಫಲಿತಾಂಶ ಹೊರಬರಲಿದೆ ಎಂದು ನಾವು ಈ ಮೊದಲು ಸಾಕಷ್ಟು ಬಾರಿ ಹೇಳಿದ್ದೆವು. ಅವರು ಬಿಹಾರದ ಜನರಿಗೆ ಏನನ್ನೂ ಮಾಡಿಲ್ಲ. 2014 ಮತ್ತು 2019ರಲ್ಲಿ ಮೋದಿ ಜಿ ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಈಗ ಅವರ ಹೇಳಿಕೆಗಳು ಮತ್ತು ಸುಳ್ಳು ಭರವಸೆಗಳಿಂದ ಸಾರ್ವಜನಿಕರು ಬೇಸತ್ತಿದ್ದಾರೆ, ನಾವು ಬಿಹಾರಕ್ಕೆ ವಿಶೇಷ ಸ್ಥಾನಮಾನದ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತೇವೆ ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ.

ಈ ಚುನಾವಣೆಯಲ್ಲಿ ಸ್ಥಳೀಯ ಸಮಸ್ಯೆಗಳು ಪ್ರಮುಖವಾಗಿವೆ. ಇಡೀ ಮಹಾಘಟಬಂಧನ್ ಮತ್ತು ಇಂಡಿಯಾ ಬಣ ಒಟ್ಟಾಗಿ ಕೆಲಸ ಮಾಡುತ್ತಿವೆ. ಹಣದುಬ್ಬರ, ಬಡತನ ಮತ್ತು ಹೂಡಿಕೆಯ ಜೊತೆಗೆ ಬಿಹಾರದಲ್ಲಿ ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿದೆ. ವಲಸೆ ಮತ್ತು ಪ್ರವಾಹಗಳು ಸಹ ಸಮಸ್ಯೆಗಳಾಗಿವೆ. ಈ ಬಾರಿ ಬಿಜೆಪಿ ತುಂಬಾ ಚಿಂತಿತವಾಗಿದೆ. ಅವರು ಸಂವಿಧಾನವನ್ನು ರದ್ದುಗೊಳಿಸುವುದಾಗಿ ಹೇಳುತ್ತಾರೆ. ಯಾರು ಸಂವಿಧಾನವನ್ನು ನಾಶಪಡಿಸುತ್ತಾರೋ ಅವರೇ ನಾಶವಾಗುತ್ತಾರೆ ಎಂದು ಯಾದವ್ ಹೇಳಿದ್ದಾರೆ.

ಚುನಾವಣಾ ಆಯೋಗದ ಪ್ರಕಾರ, ಬಿಹಾರದಲ್ಲಿ ಮೊದಲ ಹಂತದ ಮತದಾನದಲ್ಲಿ ಶೇಕಡಾ 48.88 ರಷ್ಟು ಮತದಾನವಾಗಿದೆ. ಜಮುಯಿ, ನವಾಡ, ಗಯಾ ಮತ್ತು ಔರಂಗಾಬಾದ್ ಎಂಬ ನಾಲ್ಕು ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆದಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ 40 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಮಹಾಘಟಬಂಧನ್ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...