Homeಮುಖಪುಟಬಿಜೆಪಿಯ "400 ಪಾರ್" ಸಿನಿಮಾ ಮೊದಲ ದಿನವೇ ಫ್ಲಾಪ್ ಆಗಿದೆ: ತೇಜಸ್ವಿ ಯಾದವ್

ಬಿಜೆಪಿಯ “400 ಪಾರ್” ಸಿನಿಮಾ ಮೊದಲ ದಿನವೇ ಫ್ಲಾಪ್ ಆಗಿದೆ: ತೇಜಸ್ವಿ ಯಾದವ್

- Advertisement -
- Advertisement -

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ಬೆನ್ನಲ್ಲಿ ಪ್ರತಿಕ್ರಿಯಿಸಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್, ಬಿಜೆಪಿಯ “400 ಪಾರ್” ಚಿತ್ರವು ಮೊದಲ ದಿನವೇ ಸೂಪರ್ ಫ್ಲಾಪ್ ಆಗಿದೆ ಎಂದು ಹೇಳಿದ್ದಾರೆ.

ಮಹಾಘಟಬಂಧನ್ ಮೊದಲ ಹಂತದ ಚುನಾವಣೆಯ ಎಲ್ಲಾ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ. ನಾವು ಬ್ಲಾಕ್‌ಗಳಲ್ಲಿ ಸಭೆಗಳನ್ನು ನಡೆಸಿದ್ದೇವೆ ಮತ್ತು ಪ್ರತಿಕ್ರಿಯೆ ತುಂಬಾ ಚೆನ್ನಾಗಿದೆ. ಬಿಜೆಪಿಯ “400 ಪಾರ್” ಚಿತ್ರವು ಮೊದಲ ದಿನವೇ ಸೂಪರ್ ಫ್ಲಾಪ್ ಆಗಿದೆ. ಬಿಹಾರದ ಜನರು ಜಾಗೃತರಾಗಿದ್ದು, ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಬಿಹಾರ ಈ ಬಾರಿ ಅಚ್ಚರಿ ಫಲಿತಾಂಶಗಳನ್ನು ನೀಡಿರುವುದರಿಂದ ಮೊದಲ ಹಂತದಲ್ಲಿ ನಮಗೆ ಅವರ ಜೊತೆ ಸ್ಪರ್ಧೆಯೇ ಇರಲಿಲ್ಲ ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ.

ಮೊದಲ ಹಂತದಲ್ಲಿ ಯಾವುದೇ ಪೈಪೋಟಿ ಇಲ್ಲ. ಬಿಹಾರ ಈ ಬಾರಿ ಅಚ್ಚರಿ ಫಲಿತಾಂಶ ಹೊರಬರಲಿದೆ ಎಂದು ನಾವು ಈ ಮೊದಲು ಸಾಕಷ್ಟು ಬಾರಿ ಹೇಳಿದ್ದೆವು. ಅವರು ಬಿಹಾರದ ಜನರಿಗೆ ಏನನ್ನೂ ಮಾಡಿಲ್ಲ. 2014 ಮತ್ತು 2019ರಲ್ಲಿ ಮೋದಿ ಜಿ ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಈಗ ಅವರ ಹೇಳಿಕೆಗಳು ಮತ್ತು ಸುಳ್ಳು ಭರವಸೆಗಳಿಂದ ಸಾರ್ವಜನಿಕರು ಬೇಸತ್ತಿದ್ದಾರೆ, ನಾವು ಬಿಹಾರಕ್ಕೆ ವಿಶೇಷ ಸ್ಥಾನಮಾನದ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತೇವೆ ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ.

ಈ ಚುನಾವಣೆಯಲ್ಲಿ ಸ್ಥಳೀಯ ಸಮಸ್ಯೆಗಳು ಪ್ರಮುಖವಾಗಿವೆ. ಇಡೀ ಮಹಾಘಟಬಂಧನ್ ಮತ್ತು ಇಂಡಿಯಾ ಬಣ ಒಟ್ಟಾಗಿ ಕೆಲಸ ಮಾಡುತ್ತಿವೆ. ಹಣದುಬ್ಬರ, ಬಡತನ ಮತ್ತು ಹೂಡಿಕೆಯ ಜೊತೆಗೆ ಬಿಹಾರದಲ್ಲಿ ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿದೆ. ವಲಸೆ ಮತ್ತು ಪ್ರವಾಹಗಳು ಸಹ ಸಮಸ್ಯೆಗಳಾಗಿವೆ. ಈ ಬಾರಿ ಬಿಜೆಪಿ ತುಂಬಾ ಚಿಂತಿತವಾಗಿದೆ. ಅವರು ಸಂವಿಧಾನವನ್ನು ರದ್ದುಗೊಳಿಸುವುದಾಗಿ ಹೇಳುತ್ತಾರೆ. ಯಾರು ಸಂವಿಧಾನವನ್ನು ನಾಶಪಡಿಸುತ್ತಾರೋ ಅವರೇ ನಾಶವಾಗುತ್ತಾರೆ ಎಂದು ಯಾದವ್ ಹೇಳಿದ್ದಾರೆ.

ಚುನಾವಣಾ ಆಯೋಗದ ಪ್ರಕಾರ, ಬಿಹಾರದಲ್ಲಿ ಮೊದಲ ಹಂತದ ಮತದಾನದಲ್ಲಿ ಶೇಕಡಾ 48.88 ರಷ್ಟು ಮತದಾನವಾಗಿದೆ. ಜಮುಯಿ, ನವಾಡ, ಗಯಾ ಮತ್ತು ಔರಂಗಾಬಾದ್ ಎಂಬ ನಾಲ್ಕು ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆದಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ 40 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಮಹಾಘಟಬಂಧನ್ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...