Homeಮುಖಪುಟಮೋದಿ ದೇಶದಲ್ಲಿ 'ಭ್ರಷ್ಟಾಚಾರದ ಶಾಲೆ'ಯನ್ನು ನಡೆಸುತ್ತಿದ್ದಾರೆ: ರಾಹುಲ್‌ ಗಾಂಧಿ ವಾಗ್ಧಾಳಿ

ಮೋದಿ ದೇಶದಲ್ಲಿ ‘ಭ್ರಷ್ಟಾಚಾರದ ಶಾಲೆ’ಯನ್ನು ನಡೆಸುತ್ತಿದ್ದಾರೆ: ರಾಹುಲ್‌ ಗಾಂಧಿ ವಾಗ್ಧಾಳಿ

- Advertisement -
- Advertisement -

ಚುನಾವಣಾ ಬಾಂಡ್‌ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿಯನ್ನು ನಡೆಸಿದ್ದು, ಮೋದಿ ದೇಶದಲ್ಲಿ ‘ಭ್ರಷ್ಟಾಚಾರದ ಶಾಲೆ’ಯನ್ನು ನಡೆಸುತ್ತಿದ್ದಾರೆ ಮತ್ತು ಸಂಪೂರ್ಣ ಭ್ರಷ್ಟಾಚಾರ ವಿಜ್ಞಾನ” ವಿಷಯದಲ್ಲಿ ಎಲ್ಲಾ ಅಧ್ಯಾಯಗಳನ್ನು ಕಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಎಕ್ಸ್’ನಲ್ಲಿ ಈ ಕುರಿತು ರಾಹುಲ್‌ ಗಾಂಧಿ ಪೋಸ್ಟ್‌ ಮಾಡಿದ್ದು,  ಚುನಾವಣಾ ಬಾಂಡ್‌ಗಳ ಕುರಿತು ಬಿಜೆಪಿಯನ್ನು ಟೀಕಿಸುವ ಹೊಸ ಜಾಹೀರಾತಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿ ಅವರು ದೇಶದಲ್ಲಿ ‘ಭ್ರಷ್ಟಾಚಾರದ ಶಾಲೆ’ ನಡೆಸುತ್ತಿದ್ದಾರೆ, ಅಲ್ಲಿ ಅವರು  ‘ಇಡೀ ಭ್ರಷ್ಟಾಚಾರ ವಿಜ್ಞಾನ’ ವಿಷಯದ ಅಡಿಯಲ್ಲಿ ‘ಡೊನೇಶನ್‌ ವ್ಯವಹಾರ’ ಸೇರಿದಂತೆ ಎಲ್ಲಾ ಅಧ್ಯಾಯಗಳನ್ನು ವಿವರವಾಗಿ ಬೋಧಿಸುತ್ತಾರೆ ಎಂದು ಹೇಳಿದ್ದಾರೆ.

ದಾಳಿಗಳ ಮೂಲಕ ಡೊನೇಶನ್‌ ಸಂಗ್ರಹವನ್ನು ಹೇಗೆ ಮಾಡಲಾಗುತ್ತದೆ ಮತ್ತು ಡೊನೇಶನ್‌ ಪಡೆದ ನಂತರ ಹೇಗೆ ಕಾಂಟ್ರಾಕ್ಟ್‌ಗಳನ್ನು ನೀಡಲಾಗುತ್ತದೆ ಎಂಬುದರ ಕುರಿತು ಪ್ರಧಾನ ಮಂತ್ರಿ ಅಧ್ಯಾಯಗಳನ್ನು ಕಲಿಸುತ್ತಿದ್ದಾರೆ. ಭ್ರಷ್ಟರನ್ನು ತೊಳೆಯುವ ವಾಷಿಂಗ್ ಮೆಷಿನ್ ಹೇಗೆ ಕೆಲಸ ಮಾಡುತ್ತದೆ? ಏಜೆನ್ಸಿಗಳನ್ನು ರಿಕವರಿ ಏಜೆಂಟ್‌ಗಳನ್ನಾಗಿ ಮಾಡಿ ‘ಜಾಮೀನು ಮತ್ತು ಜೈಲು’ ಆಟ ಹೇಗೆ ಎಂದು ಕಲಿಸುತ್ತಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

‘ಭ್ರಷ್ಟರ ಗುಹೆ’ಯಾಗಿ ಮಾರ್ಪಟ್ಟಿರುವ ಬಿಜೆಪಿ ತನ್ನ ನಾಯಕರಿಗೆ ಈ ‘ಕ್ರ್ಯಾಶ್ ಕೋರ್ಸ್’ ಅನ್ನು ಕಡ್ಡಾಯಗೊಳಿಸಿದೆ ಮತ್ತು ಅದಕ್ಕೆ ದೇಶವೇ ಬೆಲೆ ತೆರುತ್ತಿದೆ.  I.N.D.I.A. ಬ್ಲಾಕ್ ಸರ್ಕಾರವು ಈ “ಭ್ರಷ್ಟಾಚಾರದ ಶಾಲೆ” ಯನ್ನು ಮುಚ್ಚಲಿದೆ ಮತ್ತು ಈ ಕೋರ್ಸ್‌ನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇದೇ ಜಾಹೀರಾತನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದು, ‘ಹಫ್ತಾ ವಸೂಲಿ’ ಸರ್ಕಾರವನ್ನು ಆಯ್ಕೆ ಮಾಡಬೇಡಿ, ಬದಲಾವಣೆಯನ್ನು ಆಯ್ಕೆ ಮಾಡಿಕೊಳ್ಳಿ, ಕಾಂಗ್ರೆಸ್‌ಗೆ ಮತ ನೀಡಿ’ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿ ತೀರ್ಪು ನೀಡಿತು. ಸುಪ್ರೀಂ ಕೋರ್ಟ್‌ನ ನಿರ್ದೇಶನದ ನಂತರ ಚುನಾವಣಾ ಬಾಂಡ್‌ಗಳ ಅಧಿಕೃತ ಮಾರಾಟಗಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಾರ್ವಜನಿಕಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ದತ್ತಾಂಶವು ಬಿಜೆಪಿಯ ಕೊಡು ಕೊಳ್ಳುವಿಕೆ ಮತ್ತು ದೇಣಿಗೆಗೆ ಪ್ರತಿಯಾಗಿ ಕಂಪನಿಗಳಿಗೆ ‘ರಕ್ಷಣೆ’ಯಂತಹ ‘ಭ್ರಷ್ಟ ತಂತ್ರ’ಗಳನ್ನು ಬಹಿರಂಗಪಡಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನು ಓದಿ: ಕೀಟನಾಶಕ ರಾಸಾಯನಿಕ ಬಳಕೆ ಆರೋಪ: ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ನಿಷೇಧಿಸಿದ ಸಿಂಗಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...