Homeಮುಖಪುಟಕೇಜ್ರಿವಾಲ್‌ 'ಅಂಗಾಂಗ ವೈಫಲ್ಯಗೊಳಿಸಿ ನಿಧಾನವಾಗಿ ಸಾವಿಗೆ ತಳ್ಳಲು ಸಂಚು ರೂಪಿಸಲಾಗುತ್ತಿದೆ': ಎಎಪಿ

ಕೇಜ್ರಿವಾಲ್‌ ‘ಅಂಗಾಂಗ ವೈಫಲ್ಯಗೊಳಿಸಿ ನಿಧಾನವಾಗಿ ಸಾವಿಗೆ ತಳ್ಳಲು ಸಂಚು ರೂಪಿಸಲಾಗುತ್ತಿದೆ’: ಎಎಪಿ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಲ್ಲಿ ನಿಧಾನವಾಗಿ ಸಾವಿನತ್ತ ತಳ್ಳಲಾಗುತ್ತಿದೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ. ಜೈಲಿನೊಳಗೆ ಇನ್ಸುಲಿನ್ ಮತ್ತು ಕೇಜ್ರಿವಾಲ್ ಅವರ ವೈದ್ಯರ ಸಮಾಲೋಚನೆಗೆ ಅನುಮತಿಗೆ ಒತ್ತಾಯಿಸಿ ಎಎಪಿಯ ಮನವಿಯ ಕುರಿತು ದೆಹಲಿ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದ ಒಂದು ದಿನದ ನಂತರ ಈ ಹೇಳಿಕೆ ಹೊರಬಿದ್ದಿದೆ.

ಟೈಪ್ -2 ಡಯಾಬಿಟಿಸ್‌ನಿಂದ ಬಳಲುತ್ತಿರುವ ಅರವಿಂದ್ ಕೇಜ್ರಿವಾಲ್‌ಗೆ ಜೈಲು ಆಡಳಿತವು ಇನ್ಸುಲಿನ್ ನಿರಾಕರಿಸುತ್ತಿದೆ ಎಂಬ ತಮ್ಮ ಪಕ್ಷದ ಆರೋಪವನ್ನು ಎಎಪಿ ನಾಯಕ ಸೌರಭ್ ಭಾರದ್ವಾಜ್ ಪುನರುಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ರಕ್ತದಲ್ಲಿನ ಸಕ್ಕರೆಯ ಅಂಶವನ್ನು ಉಲ್ಲೇಖಿಸಿದ ಸೌರಭ್ ಭಾರದ್ವಾಜ್, ಕೇಜ್ರಿವಾಲ್ ಅವರ ನಿಧಾನಗತಿಯ ಸಾವಿಗೆ ಪಿತೂರಿ ನಡೆಯುತ್ತಿದೆ ಎಂದು ನಾನು ಸಂಪೂರ್ಣವಾಗಿ ಜವಾಬ್ದಾರಿಯಿಂದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್‌ಗೆ ಇನ್ಸುಲಿನ್ ನಿರಾಕರಿಸಿದ್ದಕ್ಕಾಗಿ ತಿಹಾರ್ ಜೈಲು ಆಡಳಿತ, ಬಿಜೆಪಿ, ಕೇಂದ್ರ ಮತ್ತು ದೆಹಲಿ ಲೆಪ್ಟಿನೆಂಟ್‌ ಗವರ್ನರ್‌ ವಿರುದ್ಧ ಸೌರಭ್ ಭಾರದ್ವಾಜ್ ವಾಗ್ದಾಳಿ ನಡೆಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು ವೈದ್ಯಕೀಯ ಕಾರಣ ಮುಂದಿಟ್ಟು ಜಾಮೀನಿಗೆ,  ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಸಲುವಾಗಿ ಮಾವಿನಹಣ್ಣು, ಆಲೂ-ಪೂರಿ ಮತ್ತು ಸಕ್ಕರೆಯನ್ನು ಚಹಾದಲ್ಲಿ ಸೇವಿಸುತ್ತಿದ್ದರು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಅರವಿಂದ್ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ಜಾಮೀನಿಗಾಗಿ ದೆಹಲಿ ಸಿಎಂ ಪಾರ್ಶ್ವವಾಯು ಅಪಾಯಕ್ಕೆ ಒಳಗಾಗಲು ಬಯಸುವುದಿಲ್ಲ ಎಂದು ಕೋರ್ಟ್‌ನಲ್ಲಿ ವಿಚಾರಣೆ ವೇಳೆ ಹೇಳಿದ್ದು, ಅವರು ನಿಯಮಿತವಾಗಿ ಮಾವಿನ ಹಣ್ಣುಗಳನ್ನು ತಿನ್ನುತ್ತಿದ್ದಾರೆ ಎಂಬ ಇಡಿಯ ಆರೋಪವನ್ನು ತಳ್ಳಿ ಹಾಕಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ಗೆ ಮನೆಯಿಂದ ಕಳುಹಿಸಲಾದ 48 ಊಟಗಳಲ್ಲಿ ಮೂರು ಬಾರಿ ಮಾತ್ರ ಮಾವಿನ ಹಣ್ಣುಗಳು ಇದ್ದವು ಎಂದು ಅಭಿಷೇಕ್ ಸಿಂಘ್ವಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ನಾನು ನನ್ನ ಚಹಾದಲ್ಲಿ ಸಕ್ಕರೆ ಬಳಸುವುದಿಲ್ಲ. ಜಾರಿ ನಿರ್ದೇಶನಾಲಯದ ಆರೋಪ ಎಷ್ಟು ಕ್ಷುಲ್ಲಕ, ರಾಜಕೀಯ ಮತ್ತು ಹಾಸ್ಯಾಸ್ಪದವಾಗಿದೆ? ಅವರ ಹೇಳಿಕೆಗಳು ಸಂಪೂರ್ಣವಾಗಿ ಸುಳ್ಳು ಮತ್ತು ದುರುದ್ದೇಶಪೂರಿತವಾಗಿವೆ. ನೀವು ಮಾಧ್ಯಮದಲ್ಲಿ ಸಾಕಷ್ಟು ಪ್ರಭಾವ ಬೀರಿರುವ ಕಾರಣದಿಂದ ‘ನಾನು ಆಲೂ ಪೂರಿ ತಿನ್ನುತ್ತಿದ್ದೇನೆ’ ಎಂದು ಪ್ರಕಟಿಸಲು ಸಾಧ್ಯವಾಗುತ್ತದೆ. ವೈದ್ಯರು ಸಿದ್ಧಪಡಿಸಿದ ಡಯಟ್ ಚಾರ್ಟ್‌ನ ಪ್ರಕಾರ ಆಹಾರವನ್ನು ನಾನು ಸೇವಿಸುತ್ತಿದ್ದೇನೆ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಕೇಜ್ರಿವಾಲ್ ಅವರನ್ನು ಬಹು ಅಂಗಾಂಗ ಹಾನಿ ಮಾಡಿಸಿ ನಿಧಾನವಾಗಿ ಸಾವಿನತ್ತ ತಳ್ಳುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಜೈಲಿನಿಂದ ಹೊರಬಂದ 2-4 ತಿಂಗಳ ನಂತರ ಕೇಜ್ರಿವಾಲ್‌ ಅವರು ಮೂತ್ರಪಿಂಡ, ಹೃದಯ ಮತ್ತು ಇತರ ಅಂಗಗಳ ಚಿಕಿತ್ಸೆಗೆ ಒಳಪಡಲಿದ್ದಾರೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ  ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಆಳವಾದ ಪಿತೂರಿ ನಡೆಸಲಾಗುತ್ತಿದೆ ಮತ್ತು ಜೈಲಿನಲ್ಲಿ ಅವರಿಗೆ ಏನು ಬೇಕಾದರೂ ಆಗಬಹುದು ಎಂದು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ನಿನ್ನೆ ಆರೋಪಿಸಿದ್ದರು.

ಇದನ್ನು ಓದಿ: ಕೀಟನಾಶಕ ರಾಸಾಯನಿಕ ಬಳಕೆ ಆರೋಪ: ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ನಿಷೇಧಿಸಿದ ಸಿಂಗಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...