Homeಮುಖಪುಟಕೇಜ್ರಿವಾಲ್‌ 'ಅಂಗಾಂಗ ವೈಫಲ್ಯಗೊಳಿಸಿ ನಿಧಾನವಾಗಿ ಸಾವಿಗೆ ತಳ್ಳಲು ಸಂಚು ರೂಪಿಸಲಾಗುತ್ತಿದೆ': ಎಎಪಿ

ಕೇಜ್ರಿವಾಲ್‌ ‘ಅಂಗಾಂಗ ವೈಫಲ್ಯಗೊಳಿಸಿ ನಿಧಾನವಾಗಿ ಸಾವಿಗೆ ತಳ್ಳಲು ಸಂಚು ರೂಪಿಸಲಾಗುತ್ತಿದೆ’: ಎಎಪಿ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಲ್ಲಿ ನಿಧಾನವಾಗಿ ಸಾವಿನತ್ತ ತಳ್ಳಲಾಗುತ್ತಿದೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ. ಜೈಲಿನೊಳಗೆ ಇನ್ಸುಲಿನ್ ಮತ್ತು ಕೇಜ್ರಿವಾಲ್ ಅವರ ವೈದ್ಯರ ಸಮಾಲೋಚನೆಗೆ ಅನುಮತಿಗೆ ಒತ್ತಾಯಿಸಿ ಎಎಪಿಯ ಮನವಿಯ ಕುರಿತು ದೆಹಲಿ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದ ಒಂದು ದಿನದ ನಂತರ ಈ ಹೇಳಿಕೆ ಹೊರಬಿದ್ದಿದೆ.

ಟೈಪ್ -2 ಡಯಾಬಿಟಿಸ್‌ನಿಂದ ಬಳಲುತ್ತಿರುವ ಅರವಿಂದ್ ಕೇಜ್ರಿವಾಲ್‌ಗೆ ಜೈಲು ಆಡಳಿತವು ಇನ್ಸುಲಿನ್ ನಿರಾಕರಿಸುತ್ತಿದೆ ಎಂಬ ತಮ್ಮ ಪಕ್ಷದ ಆರೋಪವನ್ನು ಎಎಪಿ ನಾಯಕ ಸೌರಭ್ ಭಾರದ್ವಾಜ್ ಪುನರುಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ರಕ್ತದಲ್ಲಿನ ಸಕ್ಕರೆಯ ಅಂಶವನ್ನು ಉಲ್ಲೇಖಿಸಿದ ಸೌರಭ್ ಭಾರದ್ವಾಜ್, ಕೇಜ್ರಿವಾಲ್ ಅವರ ನಿಧಾನಗತಿಯ ಸಾವಿಗೆ ಪಿತೂರಿ ನಡೆಯುತ್ತಿದೆ ಎಂದು ನಾನು ಸಂಪೂರ್ಣವಾಗಿ ಜವಾಬ್ದಾರಿಯಿಂದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್‌ಗೆ ಇನ್ಸುಲಿನ್ ನಿರಾಕರಿಸಿದ್ದಕ್ಕಾಗಿ ತಿಹಾರ್ ಜೈಲು ಆಡಳಿತ, ಬಿಜೆಪಿ, ಕೇಂದ್ರ ಮತ್ತು ದೆಹಲಿ ಲೆಪ್ಟಿನೆಂಟ್‌ ಗವರ್ನರ್‌ ವಿರುದ್ಧ ಸೌರಭ್ ಭಾರದ್ವಾಜ್ ವಾಗ್ದಾಳಿ ನಡೆಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು ವೈದ್ಯಕೀಯ ಕಾರಣ ಮುಂದಿಟ್ಟು ಜಾಮೀನಿಗೆ,  ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಸಲುವಾಗಿ ಮಾವಿನಹಣ್ಣು, ಆಲೂ-ಪೂರಿ ಮತ್ತು ಸಕ್ಕರೆಯನ್ನು ಚಹಾದಲ್ಲಿ ಸೇವಿಸುತ್ತಿದ್ದರು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಅರವಿಂದ್ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ಜಾಮೀನಿಗಾಗಿ ದೆಹಲಿ ಸಿಎಂ ಪಾರ್ಶ್ವವಾಯು ಅಪಾಯಕ್ಕೆ ಒಳಗಾಗಲು ಬಯಸುವುದಿಲ್ಲ ಎಂದು ಕೋರ್ಟ್‌ನಲ್ಲಿ ವಿಚಾರಣೆ ವೇಳೆ ಹೇಳಿದ್ದು, ಅವರು ನಿಯಮಿತವಾಗಿ ಮಾವಿನ ಹಣ್ಣುಗಳನ್ನು ತಿನ್ನುತ್ತಿದ್ದಾರೆ ಎಂಬ ಇಡಿಯ ಆರೋಪವನ್ನು ತಳ್ಳಿ ಹಾಕಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ಗೆ ಮನೆಯಿಂದ ಕಳುಹಿಸಲಾದ 48 ಊಟಗಳಲ್ಲಿ ಮೂರು ಬಾರಿ ಮಾತ್ರ ಮಾವಿನ ಹಣ್ಣುಗಳು ಇದ್ದವು ಎಂದು ಅಭಿಷೇಕ್ ಸಿಂಘ್ವಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ನಾನು ನನ್ನ ಚಹಾದಲ್ಲಿ ಸಕ್ಕರೆ ಬಳಸುವುದಿಲ್ಲ. ಜಾರಿ ನಿರ್ದೇಶನಾಲಯದ ಆರೋಪ ಎಷ್ಟು ಕ್ಷುಲ್ಲಕ, ರಾಜಕೀಯ ಮತ್ತು ಹಾಸ್ಯಾಸ್ಪದವಾಗಿದೆ? ಅವರ ಹೇಳಿಕೆಗಳು ಸಂಪೂರ್ಣವಾಗಿ ಸುಳ್ಳು ಮತ್ತು ದುರುದ್ದೇಶಪೂರಿತವಾಗಿವೆ. ನೀವು ಮಾಧ್ಯಮದಲ್ಲಿ ಸಾಕಷ್ಟು ಪ್ರಭಾವ ಬೀರಿರುವ ಕಾರಣದಿಂದ ‘ನಾನು ಆಲೂ ಪೂರಿ ತಿನ್ನುತ್ತಿದ್ದೇನೆ’ ಎಂದು ಪ್ರಕಟಿಸಲು ಸಾಧ್ಯವಾಗುತ್ತದೆ. ವೈದ್ಯರು ಸಿದ್ಧಪಡಿಸಿದ ಡಯಟ್ ಚಾರ್ಟ್‌ನ ಪ್ರಕಾರ ಆಹಾರವನ್ನು ನಾನು ಸೇವಿಸುತ್ತಿದ್ದೇನೆ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಕೇಜ್ರಿವಾಲ್ ಅವರನ್ನು ಬಹು ಅಂಗಾಂಗ ಹಾನಿ ಮಾಡಿಸಿ ನಿಧಾನವಾಗಿ ಸಾವಿನತ್ತ ತಳ್ಳುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಜೈಲಿನಿಂದ ಹೊರಬಂದ 2-4 ತಿಂಗಳ ನಂತರ ಕೇಜ್ರಿವಾಲ್‌ ಅವರು ಮೂತ್ರಪಿಂಡ, ಹೃದಯ ಮತ್ತು ಇತರ ಅಂಗಗಳ ಚಿಕಿತ್ಸೆಗೆ ಒಳಪಡಲಿದ್ದಾರೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ  ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಆಳವಾದ ಪಿತೂರಿ ನಡೆಸಲಾಗುತ್ತಿದೆ ಮತ್ತು ಜೈಲಿನಲ್ಲಿ ಅವರಿಗೆ ಏನು ಬೇಕಾದರೂ ಆಗಬಹುದು ಎಂದು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ನಿನ್ನೆ ಆರೋಪಿಸಿದ್ದರು.

ಇದನ್ನು ಓದಿ: ಕೀಟನಾಶಕ ರಾಸಾಯನಿಕ ಬಳಕೆ ಆರೋಪ: ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ನಿಷೇಧಿಸಿದ ಸಿಂಗಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...