Homeಮುಖಪುಟಚುನಾವಣಾ ಬಾಂಡ್‌: ಬಿಜೆಪಿ ಲೂಟಿಯನ್ನು ಮುಂದುವರಿಸಲು ಬಯಸುತ್ತಿದೆ; ಕಾಂಗ್ರೆಸ್‌

ಚುನಾವಣಾ ಬಾಂಡ್‌: ಬಿಜೆಪಿ ಲೂಟಿಯನ್ನು ಮುಂದುವರಿಸಲು ಬಯಸುತ್ತಿದೆ; ಕಾಂಗ್ರೆಸ್‌

- Advertisement -
- Advertisement -

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಯೋಜನೆಯನ್ನು ವಾಪಾಸ್ಸು ತರಲಾಗುವುದು ಎಂಬ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್‌ ಹೇಳಿಕೆಗೆ ಕಾಂಗ್ರೆಸ್ ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, 4 ಲಕ್ಷ ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ ನಂತರ ಅವರು ಮತ್ತೆ ಲೂಟಿ ಮಾಡಲು ಮುಂದಾಗುತ್ತಾರೆ ಎಂದು ಹೇಳಿದೆ.

2024ರ ಸಾರ್ವತ್ರಿಕ ಚುನಾವಣೆಯ ನಂತರ ಮತ್ತೆ ಅಧಿಕಾರಕ್ಕೆ ಬಂದರೆ ಬಿಜೆಪಿ ಚುನಾವಣಾ ಬಾಂಡ್‌ಗಳನ್ನು ಮರಳಿ ತರಲು ಉದ್ದೇಶಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹಿಂದೂಸ್ತಾನ್ ಟೈಮ್ಸ್‌ ಜೊತೆಗಿನ ಸಂದರ್ಶನದಲ್ಲಿ ಹೇಳಿದ್ದರು.

ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಸುಪ್ರೀಂ ಕೋರ್ಟ್ ಅಸಾಂವಿಧಾನಿಕ ಮತ್ತು ಕಾನೂನುಬಾಹಿರ ಎಂದು ಘೋಷಿಸಿದ ಎಲೆಕ್ಟೋರಲ್ ಬಾಂಡ್‌ಗಳನ್ನು ಮರಳಿ ತರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. #PayPM ಹಗರಣದಲ್ಲಿ ಬಿಜೆಪಿ 4 ಲಕ್ಷ ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿರುವುದು ನಮಗೆ ತಿಳಿದಿದೆ. ಈಗ ಅವರು ಲೂಟಿಯನ್ನು ಮುಂದುವರಿಸಲು ಬಯಸಿದ್ದಾರೆ ಎಂದು ಹೇಳಿದ್ದಾರೆ.

ಜೈರಾಮ್‌ ರಮೇಶ್ ಅವರು “ಪೇಪಿಎಂನ ನಾಲ್ಕು ವಿಧಾನಗಳು” ಎಂದು ಉಲ್ಲೇಖಿಸಿದ್ದಾರೆ.
ಪ್ರಿಪೇಯ್ಡ್ ಲಂಚ – ಚಂದಾ ದೋ, ಧಂಧಾ ಲೋ. ಪೋಸ್ಟ್ ಪೇಯ್ಡ್ ಲಂಚ – ಥೇಕಾ ಡೋ, ರಿಶ್ವತ್ ಲೋ(Theka Do, Rishvat Lo). ಪ್ರಿ-ಪೇಯ್ಡ್ ಮತ್ತು ಪೋಸ್ಟ್-ಪೇಯ್ಡ್ ಲಂಚಗಳ ಸಂಯೋಜಿತ ವೆಚ್ಚ: ರೂ 3.8 ಲಕ್ಷ ಕೋಟಿ ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ. ದಾಳಿ ನಂತರದ ಲಂಚ – ಹಫ್ತಾ ವಸೂಲಿ, ರೈಡ್ ನಂತರದ ಲಂಚದ ವೆಚ್ಚ: 1,853 ಕೋಟಿ ರೂ.ಎಂದು ಅವರು ಹೇಳಿದ್ದಾರೆ. ಇದು ನಮ್ಮ ಜೀವಮಾನದ ಅತ್ಯಂತ ಪ್ರಮುಖ ಚುನಾವಣೆ. ತಳಮಟ್ಟದ ವರದಿಗಳು ಸ್ಪಷ್ಟಪಡಿಸುವಂತೆ, ಈ ಭ್ರಷ್ಟ ಬ್ರಿಗೇಡ್ ತೊಲಗುವ ಹಾದಿಯಲ್ಲಿದೆ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿ ತೀರ್ಪು ನೀಡಿದೆ.
ಸುಪ್ರೀಂಕೋರ್ಟ್‌ನ ನಿರ್ದೇಶನದ ನಂತರ, ಚುನಾವಣಾ ಬಾಂಡ್‌ಗಳ ಅಧಿಕೃತ ಮಾರಾಟಗಾರರಾಗಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಾರ್ವಜನಿಕಗೊಳಿಸಿದೆ. ಚುನಾವಣಾ ಬಾಂಡ್‌ಗಳ ದತ್ತಾಂಶವು ಬಿಜೆಪಿಯ ಕೊಡುಕೊಳ್ಳುವಿಕೆ ಮತ್ತು ದೇಣಿಗೆ ವಿರುದ್ಧ ಕಂಪನಿಗಳಿಗೆ ರಕ್ಷಣೆ ನೀಡುವಂತಹ ಭ್ರಷ್ಟ ತಂತ್ರಗಳನ್ನು ಬಹಿರಂಗಪಡಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನು ಓದಿ: ಕೇಜ್ರಿವಾಲ್‌ ‘ಅಂಗಾಂಗ ವೈಫಲ್ಯಗೊಳಿಸಿ ನಿಧಾನವಾಗಿ ಸಾವಿಗೆ ತಳ್ಳಲು ಸಂಚು ರೂಪಿಸಲಾಗುತ್ತಿದೆ’: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...