Homeಮುಖಪುಟಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ರಾಷ್ಟ್ರದ ಸಂಪನ್ಮೂಲಗಳನ್ನು ಬಳಸಿಕೊಂಡು ಬಿಜೆಪಿ ಪರ ವ್ಯಾಪಕ ಪ್ರಚಾರ ನಡೆಸಲು ಅನುವು ಮಾಡಿಕೊಡುವ ಉದ್ದೇಶದಿಂದ ‘ಭಾರತದ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಚುನಾವಣೆ’ಗಳನ್ನು ನಡೆಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಮಾಲ್ಡಾದ ಉತ್ತರ ಟಿಎಂಸಿ ಅಭ್ಯರ್ಥಿ ಪ್ರಸೂನ್ ಬ್ಯಾನರ್ಜಿ ಅವರನ್ನು ಬೆಂಬಲಿಸಿ ಮಾಲ್ಡಾ ಜಿಲ್ಲೆಯ ಗಜೋಲ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಏಪ್ರಿಲ್ 19ರಿಂದ ಜೂ.1ರವರೆಗೆ ಚುನಾವಣೆಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಪ್ರತಿ ಹಂತಕ್ಕೂ ಮೊದಲು ದೇಶಾದ್ಯಂತ ವಿಶೇಷ ಸಂಚರಿಸಬಹುದು. ಹಿಂದೆ, ಮೇ ತಿಂಗಳೊಳಗೆ ಚುನಾವಣೆಗಳು ಮುಗಿಯುತ್ತಿದ್ದವು ಆದರೆ ಈ ವರ್ಷ ಮೋದಿ ಮಿಲಿಟರಿ ವಿಮಾನಗಳಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಲು ಜೂನ್ 1ರವರೆಗೆ ಅವಕಾಶ ನೀಡಲಾಗಿದೆ.  ಪ್ರತಿಪಕ್ಷಗಳು ಹೆಲಿಕಾಪ್ಟರ್ಗಳು ಸೇರಿದಂತೆ ಸ್ವಂತ ಸಾರಿಗೆ ಸೌಲಭ್ಯಗಳ ಏರ್ಪಾಡನ್ನು ಮಾಡಿಕೊಳ್ಳಬೇಕಾಗಿದೆ. ಆದರೆ ಅವುಗಳನ್ನು ಕೂಡಾ ಬಿಜೆಪಿ ನಾಯಕರು ಮುಂಗಡವಾಗಿ ಕಾದಿರಿಸಿದ್ದಾರೆ. ಹೀಗಾಗಿ ನಮಗೆ ಸ್ಪಲ್ಪ ಅವಕಾಶ ಮಾತ್ರ ದೊರೆತಿದೆ ಎಂದು ಹೇಳಿದ್ದಾರೆ.

ಬಿಸಿಲಿನ ತಾಪದಿಂದ ಜನರು ತುಂಬಾ ತೊಂದರೆಗೀಡಾಗಿದ್ದಾರೆ. ಆದರೆ ಬಿಜೆಪಿ ನಾಯಕರು ಎಲ್ಲಾ ಸೌಲಭ್ಯಗಳೊಂದಿಗೆ ವಿವಿಐಪಿ ಸೌಲಭ್ಯದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಚುನಾವಣೆ ಘೋಷಣೆಯ ನಂತರ ಉಸ್ತುವಾರಿ ಕ್ಯಾಬಿನೆಟ್ ಆಗಿದ್ದರೂ, ಚುನಾವಣಾ ಆಯೋಗವು ಆಡಳಿತ ಯಂತ್ರವನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದರೂ, ಚುನಾವಣಾ ಸಂಸ್ಥೆಯು ಮೋದಿ ಮತ್ತು ಅವರ ಪಕ್ಷದ ಸಹೋದ್ಯೋಗಿಗಳು ನಿರ್ದೇಶಿಸಿದಂತೆ ನಡೆಯುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, 2019ರಲ್ಲಿ ರಾಜ್ಯದಿಂದ ಚುನಾಯಿತರಾಗಿದ್ದರೂ, ಕೇಂದ್ರದಿಂದ MGNREGA ಯೋಜನೆಯ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಅಥವಾ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಅವರ್ಯಾರೂ ತಲೆಕೆಡಿಸಿಕೊಂಡಿಲ್ಲ. ನಮ್ಮ (ಟಿಎಂಸಿ) ಸಂಸದರು ಕಳೆದ ವರ್ಷ ನವೆಂಬರ್‌ನಲ್ಲಿ MGNREGA ಯೋಜನೆಯ ನಿಧಿ ಬಿಡುಗಡೆಗೆ ಒತ್ತಾಯಿಸಲು ದೆಹಲಿಗೆ ಹೋದಾಗ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಬಂಧಿಸಲಾಯಿತು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಬಡವರಿಗೆ ಏನು ಮಾಡಿದ್ದಾರೆ? ಮಾಲ್ಡಾದ ಉತ್ತರ ಬಿಜೆಪಿ ಸಂಸದ ಖಗೇನ್ ಮುರ್ಮು ರಾಜ್ಯದ ಜಾಬ್ ಕಾರ್ಡ್ ಹೊಂದಿರುವವರಿಗೆ ಏನು ಮಾಡಿದ್ದಾರೆ? ಸಿಪಿಐ(ಎಂ) ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಬಿಜೆಪಿಯನ್ನು ಬಲಪಡಿಸುತ್ತಿವೆ. ಆದ್ದರಿಂದ ಯಾವುದೇ ಟಿಎಂಸಿಯೇತರ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಜನರಿಗೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ನಾನು ಇಂಡಿಯಾ ಬ್ಲಾಕ್ ಎಂಬ ಹೆಸರನ್ನು ಹುಟ್ಟು ಹಾಕಿದ್ದೆ. ಆದರೆ ಬಂಗಾಳದಲ್ಲಿ ಇಂಡಿಯಾ ಬ್ಲಾಕ್ ಅಸ್ತಿತ್ವದಲ್ಲಿಲ್ಲ. ಅದು ರಾಜ್ಯದ ಹೊರಗೆ ಅಸ್ತಿತ್ವದಲ್ಲಿದೆ. ನಮ್ಮ ಸಂಸದೆ ಮಹುವಾ ಮೊಯಿತ್ರಾ ಅವರು ಮೋದಿ ಸರ್ಕಾರದ ತಪ್ಪುಗಳನ್ನು ಮತ್ತು ದೊಡ್ಡ ವ್ಯಾಪಾರ ಸಂಸ್ಥೆಗಳಿಗೆ ಅದರ ಸಾಮೀಪ್ಯವನ್ನು ಬಿಚ್ಚಿಟ್ಟಿದ್ದಕ್ಕಾಗಿ ಸಂಸತ್ತಿನಿಂದ ಹೊರಹಾಕಲ್ಪಟ್ಟರು. TMC ಸಂಸದರನ್ನು ಈ ಪ್ರತೀಕಾರದ ಸರ್ಕಾರ ಗುರಿಯಾಗಿಸಿದೆ. ಎನ್‌ಆರ್‌ಸಿಯಿಂದ 19 ಲಕ್ಷ ಬೆಂಗಾಲಿಗಳ ಹೆಸರನ್ನು ಕೈಬಿಟ್ಟ ನಂತರ ಮಮತಾ ಬಾಲಾ ಠಾಕೂರ್ ಮತ್ತು ಡೆರೆಕ್ ಒ’ಬ್ರಿಯಾನ್ ಸೇರಿದಂತೆ ಟಿಎಂಸಿ ಸಂಸದರನ್ನು ಗುವಾಹಟಿ ವಿಮಾನ ನಿಲ್ದಾಣದಿಂದ ಅಸ್ಸಾಂಗೆ ವಾಪಸ್ ಕಳುಹಿಸಲಾಗಿದೆ ಬಿಜೆಪಿ ಸರ್ಕಾರದ ದುಷ್ಕೃತ್ಯಗಳ ವಿರುದ್ಧ ನಮ್ಮ ಸರಕಾರ ಯಾವಾಗಲು ಬಲವಾಗಿ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ.

ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಮಣಿಪುರದಲ್ಲಿ ಚರ್ಚ್‌ಗಳು, ಮಸೀದಿಗಳು ಮತ್ತು ಇತರ ಪ್ರಾರ್ಥನಾ ಸ್ಥಳಗಳನ್ನು ಧ್ವಂಸಗೊಳಿಸಲಾಯಿತು ಮತ್ತು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಬೇರೆಡೆ ನೋಡುತ್ತಿದ್ದರೂ, ಸಂತ್ರಸ್ತ ಜನರ ಪರವಾಗಿ ನಿಂತಿರುವುದು ಟಿಎಂಸಿ. ನಾವು ಪೂಜಾ ಸ್ಥಳಗಳನ್ನು ನಿರ್ಮಿಸುವಾಗ ಅವರು ಪೂಜಾ ಸ್ಥಳಗಳನ್ನು ನಾಶಪಡಿಸುತ್ತಾರೆ. ಬಿಜೆಪಿಯವರು ರಾಮ ಮಂದಿರದ ಬಗ್ಗೆ ಹೆಮ್ಮೆಪಡುತ್ತಾರೆ, ಆದರೆ ಕಳೆದ ಹಲವು ವರ್ಷಗಳಿಂದ ಅವರು ಎಷ್ಟು ದೇವಾಲಯಗಳನ್ನು ನಿರ್ಮಿಸಿದ್ದಾರೆ? ದುರ್ಗಾ, ಕಾಳಿ ಮತ್ತು ಜಗನ್ನಾಥ ದೇವಾಲಯಗಳನ್ನು ನಿರ್ಮಿಸಿದ್ದು ಟಿಎಂಸಿ ಎಂದು ಮಮತಾ ಬ್ಯಾನರ್ಜಿ  ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ತಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...