Homeಅಂತರಾಷ್ಟ್ರೀಯಗಾಝಾದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‌ಗೆ 26 ಬಿಲಿಯನ್‌ ನೆರವು ಪ್ಯಾಕೇಜ್‌ ಅನುಮೋದಿಸಿದ ಅಮೆರಿಕ

ಗಾಝಾದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‌ಗೆ 26 ಬಿಲಿಯನ್‌ ನೆರವು ಪ್ಯಾಕೇಜ್‌ ಅನುಮೋದಿಸಿದ ಅಮೆರಿಕ

- Advertisement -
- Advertisement -

ಗಾಝಾದಲ್ಲಿ ಮಕ್ಕಳು, ಮಹಿಳೆಯರ ಸೇರಿದಂತೆ ಸಾವಿರಾರು ಮಂದಿಯ ಹತ್ಯಾಕಾಂಡವನ್ನು ನಡೆಸಿ ಕ್ರೌರ್ಯವನ್ನು ಮೆರೆದಿದ್ದ ಇಸ್ರೇಲ್‌ಗೆ ನೆರವು ನೀಡುವುದನ್ನು ಅಮೆರಿಕ ಮುಂದುವರಿಸಿದ್ದು, ಇಸ್ರೇಲ್‌ಗೆ 26 ಬಿಲಿಯನ್‌ ಮೌಲ್ಯದ ನೆರವು ಪ್ಯಾಕೇಜ್‌ನ್ನು ಅಮೆರಿಕ ಅನುಮೋದಿಸಿದೆ ಎಂದು ವರದಿಯಾಗಿದೆ.

ಗಾಝಾದ ಮೇಲೆ ದಾಳಿ ನಡೆಸಲು ಅಮೆರಿಕ ಈ ಮೊದಲು ಇಸ್ರೇಲ್‌ಗೆ ಯುದ್ಧ ವಿಮಾನಗಳು ಮತ್ತು ಶಸ್ತ್ರಾಸ್ತ್ರವನ್ನು ಕಳುಹಿಸಿಕೊಟ್ಟಿತ್ತು. ಇದಕ್ಕೆ ಅಂತರಾಷ್ಟ್ರೀಯ ಸಮುದಾಯ ಸೇರಿದಂತೆ ಅಮೆರಿಕದ ಪ್ರಜೆಗಳೇ ಬೈಡನ್‌ಗೆ ವಿರೋಧವನ್ನು ವ್ಯಕ್ತಪಡಿಸಿದ್ದರು. ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುವ ಇಸ್ರೇಲ್‌ಗೆ ಬೆಂಬಲಿಸದಂತೆ ಅಮೆರಿಕದಲ್ಲಿ ಪ್ರತಿಭಟನೆ ನಡೆದಿದ್ದವು, ಆದರೆ ಇದೀಗ ಮತ್ತೆ ಇಸ್ರೇಲ್‌ಗೆ ಅಮೆರಿಕ ನೆರವನ್ನು ಘೋಷಿಸಿದೆ.

ಇಸ್ರೇಲ್‌ ಗಾಝಾ ಮೇಲೆ ದಾಳಿ ನಡೆಸಿ ಕಳೆದ ಆರು ತಿಂಗಳಲ್ಲಿ ನಡೆಸಿದ ಹತ್ಯಾಕಾಂಡಕ್ಕೆ 34,000ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದೀಗ ಗಾಝಾದಲ್ಲಿನ ತುರ್ತು ಸೇವಾ ಘಟಕಗಳು ಖಾನ್ ಯೂನಿಸ್‌ನಲ್ಲಿರುವ ನಾಸರ್ ವೈದ್ಯಕೀಯ ಸಂಕೀರ್ಣದಲ್ಲಿರುವ ಅವಶೇಷಗಳಡಿಯಿಂದ 50 ಪ್ಯಾಲೆಸ್ತೀನ್‌ ನಾಗರಿಕರ ಶವಗಳನ್ನು ವಶಪಡಿಸಿಕೊಂಡಿದೆ.

ಗಾಝಾದ ದಕ್ಷಿಣದ ನಗರವಾದ ರಫಾದ ಮೇಲೆ ಇಸ್ರೇಲ್‌ ದಾಳಿಯ ನಂತರ ಕೊಲ್ಲಲ್ಪಟ್ಟ ಎಂಟು ಪ್ಯಾಲೆಸ್ತೀನಿಯಾದವರಲ್ಲಿ ಓರ್ವ ಗರ್ಭಿಣಿ ಮಹಿಳೆ ಮತ್ತು ಆರು ಮಕ್ಕಳು ಸೇರಿದ್ದಾರೆ. ಮಹಿಳೆಯ ಗರ್ಭದಲ್ಲಿರುವ ಮಗುವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ನೂರ್ ಶಮ್ಸ್ ನಿರಾಶ್ರಿತರ ಶಿಬಿರದ ಮೇಲೆ ದಾಳಿಯ ಸಮಯದಲ್ಲಿ ಇಸ್ರೇಲ್‌ ಪಡೆಗಳು 14 ಜನರನ್ನು ಕೊಂದಿವೆ ಎಂದು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ತಿಳಿಸಿದೆ, ನಬ್ಲಸ್‌ನ ದಕ್ಷಿಣಕ್ಕೆ ಹಿಂಸಾಚಾರದಲ್ಲಿ ಗಾಯಗೊಂಡ ಪ್ಯಾಲೆಸ್ತೀನಿಯನ್ನರನ್ನು ತಲುಪಲು ಪ್ರಯತ್ನಿಸುತ್ತಿದ್ದ ಆಂಬ್ಯುಲೆನ್ಸ್ ಚಾಲಕನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಇಸ್ರೇಲ್‌ ಪಡೆಗಳು. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ತುಲ್ಕರೆಮ್‌ನಲ್ಲಿರುವ ನೂರ್ ಶಮ್ಸ್ ನಿರಾಶ್ರಿತರ ಶಿಬಿರದ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದೆ. ರಫಾ ನಗರದ ಮಧ್ಯಭಾಗದಲ್ಲಿರುವ ಮನೆಯೊಂದರ ಮೇಲೆ ಇಸ್ರೇಲ್‌ ಬಾಂಬ್ ದಾಳಿ ನಡೆಸಿದ ಪರಿಣಾಮವಾಗಿ ಮೂವರು ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಇಸ್ತಾನ್‌ಬುಲ್‌ನಲ್ಲಿ ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರನ್ನು ಭೇಟಿಯಾದರು. ಯುಎಸ್‌ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಗಾಝಾದ ಮೇಲಿನ ಯುದ್ಧ ಮತ್ತು ಇರಾನ್‌ನೊಂದಿಗಿನ ಉದ್ವಿಗ್ನತೆಯ ಮಧ್ಯೆ ಇಸ್ರೇಲ್‌ಗೆ 26 ಬಿಲಿಯನ್‌ ನಿಧಿಯನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 7ರಿಂದ ಗಾಝಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯಲ್ಲಿ ಕನಿಷ್ಠ 34,049 ಪ್ಯಾಲೆಸ್ತೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 76,901 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.  ಸಾವಿರಾರು ಕಟ್ಟಡಗಳು ಇಸ್ರೇಲ್‌ ದಾಳಿಗೆ ನೆಲಸಮವಾಗಿದ್ದು, ಲಕ್ಷಾಂತರ ಜನರು ಆಶ್ರಯವನ್ನು ಕಳೆದುಕೊಂಡು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಇದನ್ನು ಓದಿ: ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...